July 23, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಅರೋಗ್ಯ ಜಾಗೃತಿ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ (NSS) ಮತ್ತು ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಎಚ್ ಐ ವಿ, ವಿಷಪೂರಿತ ಹಾವು ಮತ್ತು ಹುಚ್ಚು ನಾಯಿ ಕಡಿತ, ಮಾನಸಿಕ ಖಿನ್ನತೆಗಳ ಬಗ್ಗೆ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿಯ ಸರ್ಕಾರಿ ಆಸ್ಪತ್ರೆಯ ಆಪ್ತ ಸಮಾಲೋಚಕರಾದ ಶ್ರೀ ಧರ್ಮ ಪಾಲ್ ಎಮ್. ಎಚ್ ಐ ವಿ ರೋಗದ ಗುಣಲ ಕ್ಷಣಗಳು ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು. ಬೆಳ್ತಂಗಡಿಯ ತಾಲೂಕು ಆರೋಗ್ಯ ಕಚೇರಿಯ ಆರೋಗ್ಯ ಶಿಕ್ಷಣ ಅಧಿಕಾರಿ ಅಮ್ಮಿ ಎ. ಇವರು ವಿಷಪೂರಿತ ಹಾವು ಕಚ್ಚಿದರೆ ಮಾಡಬೇಕಾದ ಪ್ರಥಮ ಚಿಕಿತ್ಸೆ ಮತ್ತು ಹುಚ್ಚು ನಾಯಿ ಕಡಿದರೆ ತೆಗೆದುಕೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಬೆಳ್ತಂಗಡಿಯ ತಾಲೂಕು ಸಾರ್ವಜನಿಕ ಆಸ್ಪತ್ರೆಯ RKSK ಆಪ್ತ ಸಮಾಲೋಚಕರಾದ ಡಾ . ಹಸ್ತ ವಿದ್ಯಾರ್ಥಿಗಳಿಗೆ ಕಾಡುವ ಮಾನಸಿಕ ಖಿನ್ನತೆಯನ್ನು ತಡೆಗಟ್ಟಲು ಆಹಾರ ಮತ್ತು ವ್ಯಾಯಾಮ, ಯೋಗ ಸೇರಿದಂತೆ ಆರೋಗ್ಯಕರ ಜೀವನಶೈಲಿಯ ಆಯ್ಕೆಗಳ ಬಗ್ಗೆ ತಿಳಿಸಿ ಕೊಟ್ಟರು.

ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿ ಪ್ರಕಾಶ್ ಗೌಡ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಪ್ರಕೃತಿ ಪಿ ವಿ ಸ್ವಾಗತಿಸಿ, ವರ್ಷಾ ಕೆ.ಪಿ. ನಿರೂಪಿಸಿ, ಮಾನ್ಯ ಡಿ ಪಿ ವಂದಿಸಿದರು.

Related posts

ಜ.4: ಗುರುವಾಯನಕೆರೆ ವಿದ್ವತ್ ಪಿ ಯು. ಕಾಲೇಜಿನಲ್ಲಿ ತಾಲೂಕು ಮಟ್ಟದ ಪುರುಷರ ಹಾಗೂ ಆಹ್ವಾನಿತ ಮಹಿಳೆಯರ ವಾಲಿಬಾಲ್ ಪಂದ್ಯಾಟ

Suddi Udaya

ರಾಜ್ಯ ಮಟ್ಟದ ಜಾನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ತಂಡ ಪ್ರಥಮ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಪಂಜಿಕಲ್ಲು ಸರ್ಕಾರಿ ಪ್ರೌಢಶಾಲೆಯ ಹರ್ಷಿತ್ ಪೂಜಾರಿಗೆ 619 ಅಂಕ

Suddi Udaya

ಉಜಿರೆ: ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಎಕ್ಸೆಲ್ ವಿದ್ಯಾರ್ಥಿನಿ ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಏಳನೆಯ ಸ್ಥಾನ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ ಮತ್ತು ಶುಚಿತ್ವ ಕಾರ್ಯಕ್ರಮ

Suddi Udaya
error: Content is protected !!