September 6, 2026
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಂದ ಕೆಳಗೆ ಬಿದ್ದ ಒಂದೇ ಮನೆಯ ಇಬ್ಬರು ವಿದ್ಯಾರ್ಥಿನಿಯರು: ಗೇರುಕಟ್ಟೆ ರೇಷ್ಮೆ ರೋಡ್ ಬಳಿ ನಡೆದ ಘಟನೆ

ಬೆಳ್ತಂಗಡಿ: ಗೇರುಕಟ್ಟೆಯಿಂದ ಬೆಳ್ತಂಗಡಿ ಕಡೆ ಸಂಚರಿಸುತ್ತಿದ್ದ ಸರಕಾರಿ ಬಸ್ ನ ಬಾಗಿಲು ಇದ್ದಕ್ಕಿಂದಂತೆ ತೆರೆದು ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಬಿದ್ದ ಘಟನೆ ಇಂದು(ಮಾ.31) ಬೆಳಿಗ್ಗೆ ಗೇರುಕಟ್ಟೆಯ ರೇಷ್ಮೆ ರೋಡ್ ಬಳಿ ನಡೆದಿದೆ.

ಒಂದೇ ಮನೆಯ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಬಿದ್ದು ಗಾಯಗೊಂಡುವರಾಗಿದ್ದಾರೆ. ಓರ್ವೆ ಬೆಳ್ತಂಗಡಿ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿಯಾಗಿದ್ದು ಮತ್ತೋರ್ವಳು ಎಸ್.ಎಸ್.ಎಲ್.ಸಿ. ವಿದ್ಯಾರ್ಥಿನಿಯಾಗಿದ್ದು , ಪಬ್ಲಿಕ್ ಪರೀಕ್ಷೆ ಬರೆಯುವುದಕ್ಕಾಗಿ ಈ ಬಸ್ ನಲ್ಲಿ ತೆರಳಿದ್ದಳು.

ಬಸ್ ನಲ್ಲಿ ಅಧಿಕ ಸಂಖ್ಯೆಯ ಪ್ರಯಾಣಿಕರು ಇದ್ದ ಕಾರಣ, ಓವರ್ ಲೋಡ್ ಆಗಿ ಈ ಘಟನೆ ನಡೆದಿರಬಹುದು ಎನ್ನಲಾಗಿದೆ. ಗಾಯಗೊಂಡ ವಿದ್ಯಾರ್ಥಿನಿಯರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಸಂಚರಿಸುತ್ತಿರುವಾಗಲೇ ಟಯರ್ ಕಳಚುವುದು, ಬ್ರೇಕ್ ಫೈಲ್, ಬಾಗಿಲು ತೆರೆಯುವುದು ಸರ್ವೇ ಸಾಮಾನ್ಯವಾಗಿದ್ದು, ಇಂತಹ ದುರ್ಘಟನೆಗಳು ನಡೆಯುತ್ತಲೇ ಇದೆ. ಈ ಬಗ್ಗೆ ಇಲಾಖೆಗಳು ಇನ್ನೂ ಕೂಡ ಹೆಚ್ಚಿತ್ತುಕೊಳ್ಳದಿರುವ ಬಗ್ಗೆ ಜನ ಸಾಮಾನ್ಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Related posts

ಆ.29ರಂದು ಮಹೇಶ್ ಶೆಟ್ಟಿ ತಿಮರೋಡಿ ದಂಪತಿ ಖುದ್ದು ಹಾಜರಾಗುವಂತೆ ಹೈ ಕೋರ್ಟ್ ಆದೇಶ

Suddi Udaya

ಮಳೆಗೆ ಗುಡ್ಡ ಕುಸಿತ, ಸುಲ್ಕೇರಿಮೊಗ್ರು-ಶಿರ್ಲಾಲು ರಸ್ತೆ ಸಂಚಾರಕ್ಕೆ ಅಡ್ಡಿ

Suddi Udaya

ಪಣಕಜೆ: ಟೆಂಪೋ ಮತ್ತು ಬೈಕ್ ನಡುವೆ ಅಪಘಾತ

Suddi Udaya

ಇತಿಹಾಸ ಪ್ರಸಿದ್ದ ನಿಡಿಗಲ್ ಸಿರಿಜಾತ್ರಾ ಮಹೋತ್ಸವದ ಅಧ್ಯಕ್ಷರಾಗಿ ಯಶೋಧರ ಗೌಡ ಗುರಿಪಳ್ಳ ಆಯ್ಕೆ

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಸುಭಾಷ್ ಚಂದ್ರ ಎಂ ಪಿ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ಮಲವಂತಿಗೆ ಗ್ರಾ.ಪಂ. ಪಿಡಿಒ ರಶ್ಮಿ ರವರಿಗೆ ಬಿಳ್ಕೋಡುಗೆ: ಪಂಚಾಯತ್ ಅಭಿವೃದ್ಧಿಗೆ ಸಹಕರಿಸಿದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

Suddi Udaya
error: Content is protected !!