July 23, 2026
ತಾಲೂಕು ಸುದ್ದಿ

ಯೋಗ ಗುರು ಕುಶಾಲಪ್ಪ ಗೌಡರಿಗೆ ಕೆಎನ್ ಶೆಟ್ಟಿ ಸಂಸ್ಮರಣಾ ಪ್ರಶಸ್ತಿ

ಬೆಳ್ತಂಗಡಿ: ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನದ ಸ್ಥಾಪಕ ಅಧ್ಯಕ್ಷ ದಿ. ಕೆ. ನಾರಾಯಣ ಶೆಟ್ಟಿಯವರ 9ನೇ ಪುಣ್ಯ ತಿಥಿಯ ಸ್ಮರಣಾರ್ಥ ದಿ. ಕೆ. ನಾರಾಯಣ ಶೆಟ್ಟಿ ಸಂಸ್ಮರಣಾ ಕಾರ್ಯಕ್ರಮ ವಿಠೋಬ ದೇವಸ್ಥಾನ ರಸ್ತೆಯ ಶ್ರೀ ಕೃಷ್ಣ ಮಂದಿರದಲ್ಲಿ ನಡೆಯಿತು.

ನಗರದ ನುರಿತ ಯೋಗ ಶಿಕ್ಷಕ, ಚಿಕಿತ್ಸಕ, ಆವಿಷ್ಕಾರ ಯೋಗ, ಮಂಗಳೂರು ಇದರ ಸಂಸ್ಥಾಪಕ ಹಾಗೂ ಯೋಗ ಕ್ಷೇತ್ರದಲ್ಲಿ ಹಲವು ಸಾಧನೆ ಮತ್ತು ಜಾಗತಿಕ ದಾಖಲೆ ನಿರ್ಮಿಸಿದ ಕುಶಾಲಪ್ಪ ಗೌಡರಿಗೆ ” ಶ್ರೀ ಕೆ. ನಾರಾಯಣ ಶೆಟ್ಟಿ ಸಂಸ್ಮರಣಾ ಪ್ರಶಸ್ತಿ – 2026″ ನೀಡಿ ಸನ್ಮಾನಿಸಲಾಯಿತು.

ಪ್ರತಿಷ್ಠಾನದ ಕಾರ್ಯದರ್ಶಿ ಧನಂಜಯ ಕೆ. ಯವರು ಯೋಗಾಭ್ಯಾಸ, ಯೋಗ ಪ್ರಚಾರ ಮತ್ತು ಪ್ರತಿಷ್ಠಾನವನ್ನು ಹುಟ್ಟು ಹಾಕಿ ಅದರ ಆರಂಭಿಕ ವರ್ಷಗಳಲ್ಲಿ ತನು – ಮನ – ಧನ – ಜನ ಜೋಡಿಸಿ ಸಂಸ್ಥೆಯನ್ನು ಮುನ್ನಡೆಸಿದ ದಿ. ಶೆಟ್ಟಿಯವರ ಮೇರು ವ್ಯಕ್ತಿತ್ವದ ಬಗ್ಗೆ ಮಾಹಿತಿ ನೀಡಿದರು.

ಪ್ರತಿಷ್ಠಾನದ ಅಧ್ಯಕ್ಷ ಏಕನಾಥ ಬಾಳಿಗಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಉಪಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಮತ್ತು ಪರಮೇಶ್ವರ ಪೂಜಾರಿ ಮತ್ತಿತರ ಪದಾಧಿಕಾರಿಗಳು ಮತ್ತು ಟ್ರಸ್ಟಿಗಳು, ಕೆ. ಎನ್. ಶೆಟ್ಟಿ ಸಂಸ್ಮರಣಾ ಸಮಿತಿಯ ಸಂಚಾಲಕಿ ಭಾರತಿ ಶೆಟ್ಟಿ ಹಾಗೂ ಗೌರವ ಸಂಚಾಲಕ ಚಂದ್ರಶೇಖರ ಶೆಟ್ಟಿ ಉಪಸ್ಥಿತರಿದ್ದರು. ಜೊತೆ ಕಾರ್ಯದರ್ಶಿ ಪ್ರಭಾ ಎನ್. ವಿ. ಸ್ವಾಗತಿಸಿದರು. ಪ್ರಕಾಶ್ ಕಾಮತ್ ವಂದಿಸಿದರು. ಪ್ರೇಮಾ ಕಾಮತ್ ಪ್ರಾರ್ಥನೆ ಮಾಡಿದರು. ಭಾರತಿ ಕಾರ್ಯಕ್ರಮ ನಿರೂಪಿಸಿದರು.

Related posts

ಕಿಲ್ಲೂರು‌ ನೂತನ ಮಸ್ಜಿದ್ ಗೆ ಖಾಝಿ ಕೂರತ್ ತಂಙಳ್ ರಿಂದ ಶಿಲಾನ್ಯಾಸ

Suddi Udaya

ಬಳಂಜ ದೇವಸ್ಥಾನದ ಜಾತ್ರ ಮಹೋತ್ಸವ ಸಂಪನ್ನ: ದೈವ ದೇವರ ಭೇಟಿ

Suddi Udaya

ಕನ್ಯಾಡಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ರಕ್ಷಿತ್ ಶಿವರಾಮ್

Suddi Udaya

ಎಸ್ .ಡಿ.ಎಂ. ಶಿಕ್ಷಣ ಸಂಸ್ಥೆ ವತಿಯಿಂದ ಚಾಲಕರಿಗೆ ಕಾರ್ಯಾಗಾರ

Suddi Udaya

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ : ಬೆಳ್ತಂಗಡಿಯಲ್ಲೂ ಆಡಳಿತ ಸೌಧದ ಎದುರು ಧರಣಿ- ಕಂದಾಯ ಸೇವೆಯಲ್ಲಿ ವ್ಯತ್ಯಯ

Suddi Udaya
error: Content is protected !!