September 6, 2026
ತಾಲೂಕು ಸುದ್ದಿ

ಯೋಗ ಗುರು ಕುಶಾಲಪ್ಪ ಗೌಡರಿಗೆ ಕೆಎನ್ ಶೆಟ್ಟಿ ಸಂಸ್ಮರಣಾ ಪ್ರಶಸ್ತಿ

ಬೆಳ್ತಂಗಡಿ: ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನದ ಸ್ಥಾಪಕ ಅಧ್ಯಕ್ಷ ದಿ. ಕೆ. ನಾರಾಯಣ ಶೆಟ್ಟಿಯವರ 9ನೇ ಪುಣ್ಯ ತಿಥಿಯ ಸ್ಮರಣಾರ್ಥ ದಿ. ಕೆ. ನಾರಾಯಣ ಶೆಟ್ಟಿ ಸಂಸ್ಮರಣಾ ಕಾರ್ಯಕ್ರಮ ವಿಠೋಬ ದೇವಸ್ಥಾನ ರಸ್ತೆಯ ಶ್ರೀ ಕೃಷ್ಣ ಮಂದಿರದಲ್ಲಿ ನಡೆಯಿತು.

ನಗರದ ನುರಿತ ಯೋಗ ಶಿಕ್ಷಕ, ಚಿಕಿತ್ಸಕ, ಆವಿಷ್ಕಾರ ಯೋಗ, ಮಂಗಳೂರು ಇದರ ಸಂಸ್ಥಾಪಕ ಹಾಗೂ ಯೋಗ ಕ್ಷೇತ್ರದಲ್ಲಿ ಹಲವು ಸಾಧನೆ ಮತ್ತು ಜಾಗತಿಕ ದಾಖಲೆ ನಿರ್ಮಿಸಿದ ಕುಶಾಲಪ್ಪ ಗೌಡರಿಗೆ ” ಶ್ರೀ ಕೆ. ನಾರಾಯಣ ಶೆಟ್ಟಿ ಸಂಸ್ಮರಣಾ ಪ್ರಶಸ್ತಿ – 2026″ ನೀಡಿ ಸನ್ಮಾನಿಸಲಾಯಿತು.

ಪ್ರತಿಷ್ಠಾನದ ಕಾರ್ಯದರ್ಶಿ ಧನಂಜಯ ಕೆ. ಯವರು ಯೋಗಾಭ್ಯಾಸ, ಯೋಗ ಪ್ರಚಾರ ಮತ್ತು ಪ್ರತಿಷ್ಠಾನವನ್ನು ಹುಟ್ಟು ಹಾಕಿ ಅದರ ಆರಂಭಿಕ ವರ್ಷಗಳಲ್ಲಿ ತನು – ಮನ – ಧನ – ಜನ ಜೋಡಿಸಿ ಸಂಸ್ಥೆಯನ್ನು ಮುನ್ನಡೆಸಿದ ದಿ. ಶೆಟ್ಟಿಯವರ ಮೇರು ವ್ಯಕ್ತಿತ್ವದ ಬಗ್ಗೆ ಮಾಹಿತಿ ನೀಡಿದರು.

ಪ್ರತಿಷ್ಠಾನದ ಅಧ್ಯಕ್ಷ ಏಕನಾಥ ಬಾಳಿಗಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಉಪಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಮತ್ತು ಪರಮೇಶ್ವರ ಪೂಜಾರಿ ಮತ್ತಿತರ ಪದಾಧಿಕಾರಿಗಳು ಮತ್ತು ಟ್ರಸ್ಟಿಗಳು, ಕೆ. ಎನ್. ಶೆಟ್ಟಿ ಸಂಸ್ಮರಣಾ ಸಮಿತಿಯ ಸಂಚಾಲಕಿ ಭಾರತಿ ಶೆಟ್ಟಿ ಹಾಗೂ ಗೌರವ ಸಂಚಾಲಕ ಚಂದ್ರಶೇಖರ ಶೆಟ್ಟಿ ಉಪಸ್ಥಿತರಿದ್ದರು. ಜೊತೆ ಕಾರ್ಯದರ್ಶಿ ಪ್ರಭಾ ಎನ್. ವಿ. ಸ್ವಾಗತಿಸಿದರು. ಪ್ರಕಾಶ್ ಕಾಮತ್ ವಂದಿಸಿದರು. ಪ್ರೇಮಾ ಕಾಮತ್ ಪ್ರಾರ್ಥನೆ ಮಾಡಿದರು. ಭಾರತಿ ಕಾರ್ಯಕ್ರಮ ನಿರೂಪಿಸಿದರು.

Related posts

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಶ್ರೀ ರಾಮಕ್ಷೇತ್ರ ಕನ್ಯಾಡಿಯಲ್ಲಿ ರಾಮ ನಾಮ ತಾರಕ ಮಂತ್ರ ಪಠಣ

Suddi Udaya

ಕಣಿಯೂರು, ಪದ್ಮುಂಜ ಪರಿಸರದಲ್ಲಿ ಆನೆ ದಾಳಿ : ತೋಟಕ್ಕೆ ನುಗ್ಗಿ ಬಾಳೆ ಕೃಷಿಗೆ ಹಾನಿ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ ಹಾಗೂ ಪುನಶ್ಚೇತನ ತರಬೇತಿ ಶಿಬಿರ

Suddi Udaya

ಉಜಿರೆ ವಿದ್ಯುತ್ ಉಪಕೇಂದ್ರ ಕಾಮಗಾರಿ ವಿಳಂಬ: ಅರಣ್ಯ ಇಲಾಖೆ ಅನುಮತಿ ದೊರೆತ ಕೂಡಲೇ ಕಾಮಗಾರಿ ಮುಂದುವರಿಯುವುದು-ಎಂಎಲ್‌ಸಿ ಪ್ರತಾಪಸಿಂಹ ನಾಯಕ್

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕೊಕ್ಕಡ ವಲಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ ಸಮಾರಂಭ

Suddi Udaya

ಧರ್ಮಸ್ಥಳ ಕಾಡಾನೆ ದಾಳಿ ಪ್ರದೇಶಕ್ಕೆ ಕೆ.ಎಸ್.ಎಂ.ಸಿ.ಎ ಅಧ್ಯಕ್ಷರ ತಂಡ ಭೇಟಿ

Suddi Udaya
error: Content is protected !!