September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಪೊಲೀಸ್ಬೆಳ್ತಂಗಡಿವರದಿ

ರಬ್ಬರ್ ಟ್ಯಾಪಿಂಗ್ ಕಾರ್ಮಿಕ ಸ್ವತಃ ಮೈಮೇಲೆ ವಿದ್ಯುತ್ ಹರಿಸಿ ಆತ್ಮಹತ್ಯೆ

ಬೆಳ್ತಂಗಡಿ: ಹೊಸಂಗಡಿ ಗ್ರಾಮದ ಪಾರ್ದೊಟ್ಟು ಎಂಬಲ್ಲಿ ಕೇರಳದಿಂದ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸ್ವತಃ ಮೈಮೇಲೆ ವಿದ್ಯುತ್ ಹರಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮೃತ ವ್ಯಕ್ತಿ ಕೇರಳ ಮೂಲದ ಕಾರ್ಮಿಕ ಜೋಸೆಫ್ ತೋಮಸ್ (69) ಎಂಬಾತನಾಗಿದ್ದಾನೆ. ಈತ ಹೊಸಂಗಡಿಯ ಶಾಜು.ಪಿ.ಟಿ ಎಂಬವರ ರಬ್ಬರ್ ತೋಟದಲ್ಲಿ ಕರ್ಮಿಕನಾಗಿ ಕೆಲಸ ಮಾಡಿಕೊಂಡಿದ್ದು ಈತನ ಮೃತದೇಹ ಮಾ. 30ರಂದು ಸಂಜೆಯ ವೇಳೆ ಶಾಜು ಅವರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಕಂಡು ಬಂದಿದೆ.

ಮನೆಯ ಅಡುಗೆ ಕೋಣೆಯ ವಿದ್ಯುತ್ ಸ್ವಿಚ್ ಬೋರ್ಡ್ ಗೆ ಪ್ಲಗ್ ಸಿಕ್ಕಿಸಿ ಕಾಲಿಗೆ ವಯರ್ ಕನೆಕ್ಟ್ ಮಾಡಿ ಆತ್ಮಹತ್ಯೆ ಮಾಡಿಕೊಂಡಂತೆ ಕಂಡು ಬಂದಿದ್ದು ವೇಣೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಪಜಿರಡ್ಕ ಶ್ರೀಸದಾಶಿವೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸೌರ ಯುಗಾದಿ ವಿಷು ಆಚರಣೆ

Suddi Udaya

ಕೊಕ್ಕಡ: ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರಿನ ಬಾಳೆಕಾಯಿ ಮತ್ತು ಅಡಿಕೆ ವ್ಯಾಪಾರಿಯವರ ಅಂಗಡಿಯಿಂದ ರೂ. 1.80ಲಕ್ಷ ಹಣ ಕಳ್ಳತನ

Suddi Udaya

ಕೊಕ್ರಾಡಿ ದೈವಸ್ಥಾನ: ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿ ಸಭೆ

Suddi Udaya

ಮಡಂತ್ಯಾರು ಬ್ರದರ್ಸ್ ಸಾಲುಮರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸೂಳಬೆಟ್ಟು ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya
error: Content is protected !!