23.7 C
ಪುತ್ತೂರು, ಬೆಳ್ತಂಗಡಿ
April 24, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಅರೋಗ್ಯ ಜಾಗೃತಿ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ (NSS) ಮತ್ತು ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಎಚ್ ಐ ವಿ, ವಿಷಪೂರಿತ ಹಾವು ಮತ್ತು ಹುಚ್ಚು ನಾಯಿ ಕಡಿತ, ಮಾನಸಿಕ ಖಿನ್ನತೆಗಳ ಬಗ್ಗೆ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿಯ ಸರ್ಕಾರಿ ಆಸ್ಪತ್ರೆಯ ಆಪ್ತ ಸಮಾಲೋಚಕರಾದ ಶ್ರೀ ಧರ್ಮ ಪಾಲ್ ಎಮ್. ಎಚ್ ಐ ವಿ ರೋಗದ ಗುಣಲ ಕ್ಷಣಗಳು ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು. ಬೆಳ್ತಂಗಡಿಯ ತಾಲೂಕು ಆರೋಗ್ಯ ಕಚೇರಿಯ ಆರೋಗ್ಯ ಶಿಕ್ಷಣ ಅಧಿಕಾರಿ ಅಮ್ಮಿ ಎ. ಇವರು ವಿಷಪೂರಿತ ಹಾವು ಕಚ್ಚಿದರೆ ಮಾಡಬೇಕಾದ ಪ್ರಥಮ ಚಿಕಿತ್ಸೆ ಮತ್ತು ಹುಚ್ಚು ನಾಯಿ ಕಡಿದರೆ ತೆಗೆದುಕೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಬೆಳ್ತಂಗಡಿಯ ತಾಲೂಕು ಸಾರ್ವಜನಿಕ ಆಸ್ಪತ್ರೆಯ RKSK ಆಪ್ತ ಸಮಾಲೋಚಕರಾದ ಡಾ . ಹಸ್ತ ವಿದ್ಯಾರ್ಥಿಗಳಿಗೆ ಕಾಡುವ ಮಾನಸಿಕ ಖಿನ್ನತೆಯನ್ನು ತಡೆಗಟ್ಟಲು ಆಹಾರ ಮತ್ತು ವ್ಯಾಯಾಮ, ಯೋಗ ಸೇರಿದಂತೆ ಆರೋಗ್ಯಕರ ಜೀವನಶೈಲಿಯ ಆಯ್ಕೆಗಳ ಬಗ್ಗೆ ತಿಳಿಸಿ ಕೊಟ್ಟರು.

ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿ ಪ್ರಕಾಶ್ ಗೌಡ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಪ್ರಕೃತಿ ಪಿ ವಿ ಸ್ವಾಗತಿಸಿ, ವರ್ಷಾ ಕೆ.ಪಿ. ನಿರೂಪಿಸಿ, ಮಾನ್ಯ ಡಿ ಪಿ ವಂದಿಸಿದರು.

Related posts

ಎ 6-7:ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ, “ಉದ್ಯೋಗಂ-2026”

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ

Suddi Udaya

ಉಜಿರೆ: ಹದಿಹರೆಯದ ವಿದ್ಯಾರ್ಥಿನಿಯರಿಗೆ ಆರೋಗ್ಯ ಮಾಹಿತಿ

Suddi Udaya

ಅನುಗ್ರಹ ಟ್ರೈನಿಂಗ್ ಕಾಲೇಜು ಡಿಪ್ಲೋಮಾ ಫ್ಯಾಶನ್ ಡಿಸೈನಿಂಗ್ ವಿದ್ಯಾರ್ಥಿಗಳಿಂದ ಬೆಳ್ತಂಗಡಿಯ ನೂರಾ ಗೋಲ್ಡ್‌ಗೆ ಭೇಟಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!