23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಂದ ಕೆಳಗೆ ಬಿದ್ದ ಒಂದೇ ಮನೆಯ ಇಬ್ಬರು ವಿದ್ಯಾರ್ಥಿನಿಯರು: ಗೇರುಕಟ್ಟೆ ರೇಷ್ಮೆ ರೋಡ್ ಬಳಿ ನಡೆದ ಘಟನೆ

ಬೆಳ್ತಂಗಡಿ: ಗೇರುಕಟ್ಟೆಯಿಂದ ಬೆಳ್ತಂಗಡಿ ಕಡೆ ಸಂಚರಿಸುತ್ತಿದ್ದ ಸರಕಾರಿ ಬಸ್ ನ ಬಾಗಿಲು ಇದ್ದಕ್ಕಿಂದಂತೆ ತೆರೆದು ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಬಿದ್ದ ಘಟನೆ ಇಂದು(ಮಾ.31) ಬೆಳಿಗ್ಗೆ ಗೇರುಕಟ್ಟೆಯ ರೇಷ್ಮೆ ರೋಡ್ ಬಳಿ ನಡೆದಿದೆ.

ಒಂದೇ ಮನೆಯ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಬಿದ್ದು ಗಾಯಗೊಂಡುವರಾಗಿದ್ದಾರೆ. ಓರ್ವೆ ಬೆಳ್ತಂಗಡಿ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿಯಾಗಿದ್ದು ಮತ್ತೋರ್ವಳು ಎಸ್.ಎಸ್.ಎಲ್.ಸಿ. ವಿದ್ಯಾರ್ಥಿನಿಯಾಗಿದ್ದು , ಪಬ್ಲಿಕ್ ಪರೀಕ್ಷೆ ಬರೆಯುವುದಕ್ಕಾಗಿ ಈ ಬಸ್ ನಲ್ಲಿ ತೆರಳಿದ್ದಳು.

ಬಸ್ ನಲ್ಲಿ ಅಧಿಕ ಸಂಖ್ಯೆಯ ಪ್ರಯಾಣಿಕರು ಇದ್ದ ಕಾರಣ, ಓವರ್ ಲೋಡ್ ಆಗಿ ಈ ಘಟನೆ ನಡೆದಿರಬಹುದು ಎನ್ನಲಾಗಿದೆ. ಗಾಯಗೊಂಡ ವಿದ್ಯಾರ್ಥಿನಿಯರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಸಂಚರಿಸುತ್ತಿರುವಾಗಲೇ ಟಯರ್ ಕಳಚುವುದು, ಬ್ರೇಕ್ ಫೈಲ್, ಬಾಗಿಲು ತೆರೆಯುವುದು ಸರ್ವೇ ಸಾಮಾನ್ಯವಾಗಿದ್ದು, ಇಂತಹ ದುರ್ಘಟನೆಗಳು ನಡೆಯುತ್ತಲೇ ಇದೆ. ಈ ಬಗ್ಗೆ ಇಲಾಖೆಗಳು ಇನ್ನೂ ಕೂಡ ಹೆಚ್ಚಿತ್ತುಕೊಳ್ಳದಿರುವ ಬಗ್ಗೆ ಜನ ಸಾಮಾನ್ಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Related posts

ಎಕ್ಸಲೆಂಟ್ ಮೂಡುಬಿದಿರೆ: ಜೆಇಇ ಅಡ್ವಾನ್ಸ್ಡ್ ರಾಷ್ಟ್ರಮಟ್ಟದ ಸಾಧನೆ

Suddi Udaya

ಕೊಕ್ಕಡ: ತಲೆಗೆ ಮರಬಿದ್ದು ಮಹಿಳೆಯ ಧಾರುಣ ಸಾವು:

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ

Suddi Udaya

ನಾಳೆ (ಎ.7) ವಿದ್ಯುತ್ ನಿಲುಗಡೆ

Suddi Udaya

ಕುಂಡದಬೆಟ್ಟು: ಮಂಜುಶ್ರೀ ಭಜನಾ ಮಂಡಳಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya
error: Content is protected !!