22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಇಳಂತಿಲ ಗ್ರಾಮದ ಕಟ್ಟೆಚಾರು ನಿವಾಸಿ ಕುಶಾಲಪ್ಪ ಗೌಡ ನಿಧನ

ಬೆಳ್ತಂಗಡಿ: ಇಳಂತಿಲ ಗ್ರಾಮದ ಕಟ್ಟೆಚಾರು ನಿವಾಸಿ, ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ ಹಿರಿಯ ಸದಸ್ಯರಾಗಿ ಅರ್ಥಧಾರಿಯಾಗಿ ಭಾಗವಹಿಸುತ್ತಿದ್ದ ಕುಶಾಲಪ್ಪ ಗೌಡ (78ವ) ರವರು ಅಲ್ಪಕಾಲದ ಅಸೌಖ್ಯದಿಂದ ಮಾ.31ರಂದು ಸ್ವಗೃಹದಲ್ಲಿ ನಿಧನರಾದರು.

ಉಪ್ಪಿನಂಗಡಿಯ ಶ್ರೀ ಗಣೇಶ ಸ್ಟೋರ್ ಜವಳಿ ಮಳಿಗೆಯಲ್ಲಿ ದೀರ್ಘಕಾಲ ಕಾರ್ಯನಿರ್ವಹಿಸುತ್ತಿದ್ದರು. ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸಂಘದ ಹಿರಿಯ ಸದಸ್ಯರಾಗಿದ್ದ ಇವರು ಸುಮಾರು ಮೂರು ದಶಕಗಳಿಗಿಂತಲೂ ಹೆಚ್ಚು ಕಾಲ ಸಂಘದೊಂದಿಗೆ ಸಕ್ರೀಯರಾಗಿದ್ದರು. ರಾವಣ, ಇಂದ್ರಜಿತು, ವಾಲಿ, ಸುಗ್ರೀವ, ಮಾಗಧ, ಕೌರವ ಮುಂತಾದ ಪಾತ್ರಗಳನ್ನು ನಿರ್ವಹಿಸುತ್ತಿದ್ದರಲ್ಲದೆ ಪ್ರಸಂಗದ ಯಾವುದೇ ಪಾತ್ರಗಳನ್ನು ಸಮಯೋಚಿತವಾಗಿ ಮಾಡಬಲ್ಲ ಸಮರ್ಥರಾಗಿದ್ದರು.

ಮೃತರು ಪತ್ನಿ ವಾರಿಜ, ಮೂವರು ಪುತ್ರರು, ಓರ್ವೆ ಪುತ್ರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ .

ಇವರ ನಿಧನಕ್ಕೆ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ಮತ್ತು ಕಾರ್ಯದರ್ಶಿ ಶ್ರೀಪತಿ ಭಟ್ ಉಪ್ಪಿನಂಗಡಿ ತೀವು ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.

Related posts

ಶ್ರೀ ಧರ್ಮಸ್ಥಳ ದೀಪೋತ್ಸವದ ಪ್ರಯುಕ್ತ ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರ ಶ್ರೀ ಸಾಯಿ ನಗರ ಸದಸ್ಯರಿಂದ ಭಜನಾ ಸಂಕೀರ್ತನ್ ಕಾರ್ಯಕ್ರಮ

Suddi Udaya

ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟ: ಮುಂಡಾಜೆಯ ತೇಜಲ್ ಕೆ.ಆರ್. ರವರಿಗೆ 110 ಮೀ. ಹರ್ಡಲ್ಸ್‌ನಲ್ಲಿ ಚಿನ್ನದ ಪದಕ

Suddi Udaya

ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ “ಒಂದು ಹೆಜ್ಜೆ” ಕನ್ನಡ ಚಲನಚಿತ್ರ ಪೋಸ್ಟರ್ ಬಿಡುಗಡೆ

Suddi Udaya

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ- ಕಲ್ಲೇರಿ ಶಾಖೆಯ ಸ್ವ-ಸಹಾಯ ಸಂಘಗಳ ಉದ್ಘಾಟನೆ

Suddi Udaya

ವಾಲಿಬಾಲ್ ಪಂದ್ಯಾಟ: ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ಹಾಗೂ ಪದ್ಮುಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಎರಡು ತಂಡಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ ಆರ್ ಟಿ ಸಿ ಬಸ್ ಸಂಚಾರ ಮುಂದೂಡಿಕೆ

Suddi Udaya
error: Content is protected !!