24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿವರದಿಶಾಲಾ ಕಾಲೇಜುಸಮಸ್ಯೆ

ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರು: ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ : ಕಳಿಯ ಗ್ರಾಮದ ಗೇರುಕಟ್ಟೆ ಸಮೀಪ ಚಲಿಸುತ್ತಿದ್ದ ಬಸ್ಸಿನ ಬಾಗಿಲು ತೆರೆದು ವಿದ್ಯಾರ್ಥಿನಿಯರಿಬ್ಬರು ಮಾ.31ರಂದು ಬೆಳಗ್ಗೆ ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡ ಘಟನೆಯ ಬಗ್ಗೆ ಬಸ್ಸಿನ ಚಾಲಕ ಹಾಗೂ ನಿರ್ವಾಹಕನ ವಿರುದ್ದ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಳಿಯದಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸನ್ನು ಅದರ ಚಾಲಕ ದಯಾನಂದ ಅತ್ಯಂತ ಅಜಾಗರೂಕತೆಯಿಂದ ಚಲಾಯಿಸುತ್ತಾ ಬಂದಿದ್ದು ನಿರ್ವಾಹಕ ಕಾಶಿನಾಥ್ ಅವರು ಬಸ್ಸಿನ ಬಾಗಿಲು ಸರಿಯಾಗಿ ಹಾಕದೆ ಅಜಾಗರೂಕತೆಯಿಂದ ಇದ್ದ ಕಾರಣದಿಂದಾಗಿ ಚಲಿಸುತ್ತಿದ್ದ ಬಸ್ಸಿನ ಬಾಗಿಲು ತೆರದು ಇಬ್ಬರು ವಿದ್ಯಾರ್ಥಿನಿಯರಾದ ಒಂದೇ ಮನೆಯ ಸಹೋದರಿಯರು ಚರಿಷ್ಮಾ(17) ಮತ್ತು ಚದ್ಮಿಕಾ(15) ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದಾರೆ. ಅಪಘಾತಕ್ಕೆ ಕಾರಣರಾದ ಚಾಲಕ ಹಾಗೂ ನಿರ್ವಾಹಕನ ವಿರುದ್ದ ಗಾಯಗೊಂಡ ವಿದ್ಯಾರ್ಥಿನಿ ಚರಿಷ್ಮಾ(17) ನೀಡಿದ ದೂರಿನ ಮೇರೆಗೆ ಕಲಂ 281,125,125(a) ಬಿಎನ್ ಎಸ್ ಅಡಿಯಲ್ಲಿ ಮಾ.31 ರಂದು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ದಾಖಲಿಸಲಾಗಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯರು ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿನಿಯರಾದ ಶರಿಷ್ಮಾ ಹಾಗೂ ಚದ್ಮಿಕಾ ಅವರು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಂಡಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬಳಂಜ: ಬೊಳ್ಳಜ್ಜ ಕ್ಷೇತ್ರದಲ್ಲಿ ಸ್ವಾಮಿ ಬೊಳ್ಳಜ್ಜ ಸಮವಸ್ತ್ರ ಅನಾವರಣ

Suddi Udaya

ನಿಟ್ಟಡೆ: ಕುಂಭಶ್ರೀ ವಿದ್ಯಾಸಂಸ್ಥೆಗೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಭೇಟಿ

Suddi Udaya

ಕುತ್ಲೂರು: ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಉಚಿತ ಕೃಷಿ ಉಪಕರಣಗಳ ವಿತರಣೆ

Suddi Udaya

ಬಂಗ್ಲೆಗುಡ್ಡೆ ಶೋಧ: ಒಂದು ಅಸ್ಥಿಪಂಜರದ ಗುರುತು ಪತ್ತೆ ಹಚ್ಚಿದ ಎಸ್ ಐಟಿ

Suddi Udaya

ಗೇರುಕಟ್ಟೆ ಪ್ರೌಢ ಶಾಲಾ ಸಮೀಪ ಡೆಂಗ್ಯೂ, ಮಲೇರಿಯಾ ಹರಡುವ ಕೇಂದ್ರ ಸೃಷ್ಟಿ

Suddi Udaya
error: Content is protected !!