September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿವರದಿಶಾಲಾ ಕಾಲೇಜುಸಮಸ್ಯೆ

ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರು: ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ : ಕಳಿಯ ಗ್ರಾಮದ ಗೇರುಕಟ್ಟೆ ಸಮೀಪ ಚಲಿಸುತ್ತಿದ್ದ ಬಸ್ಸಿನ ಬಾಗಿಲು ತೆರೆದು ವಿದ್ಯಾರ್ಥಿನಿಯರಿಬ್ಬರು ಮಾ.31ರಂದು ಬೆಳಗ್ಗೆ ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡ ಘಟನೆಯ ಬಗ್ಗೆ ಬಸ್ಸಿನ ಚಾಲಕ ಹಾಗೂ ನಿರ್ವಾಹಕನ ವಿರುದ್ದ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಳಿಯದಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸನ್ನು ಅದರ ಚಾಲಕ ದಯಾನಂದ ಅತ್ಯಂತ ಅಜಾಗರೂಕತೆಯಿಂದ ಚಲಾಯಿಸುತ್ತಾ ಬಂದಿದ್ದು ನಿರ್ವಾಹಕ ಕಾಶಿನಾಥ್ ಅವರು ಬಸ್ಸಿನ ಬಾಗಿಲು ಸರಿಯಾಗಿ ಹಾಕದೆ ಅಜಾಗರೂಕತೆಯಿಂದ ಇದ್ದ ಕಾರಣದಿಂದಾಗಿ ಚಲಿಸುತ್ತಿದ್ದ ಬಸ್ಸಿನ ಬಾಗಿಲು ತೆರದು ಇಬ್ಬರು ವಿದ್ಯಾರ್ಥಿನಿಯರಾದ ಒಂದೇ ಮನೆಯ ಸಹೋದರಿಯರು ಚರಿಷ್ಮಾ(17) ಮತ್ತು ಚದ್ಮಿಕಾ(15) ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದಾರೆ. ಅಪಘಾತಕ್ಕೆ ಕಾರಣರಾದ ಚಾಲಕ ಹಾಗೂ ನಿರ್ವಾಹಕನ ವಿರುದ್ದ ಗಾಯಗೊಂಡ ವಿದ್ಯಾರ್ಥಿನಿ ಚರಿಷ್ಮಾ(17) ನೀಡಿದ ದೂರಿನ ಮೇರೆಗೆ ಕಲಂ 281,125,125(a) ಬಿಎನ್ ಎಸ್ ಅಡಿಯಲ್ಲಿ ಮಾ.31 ರಂದು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ದಾಖಲಿಸಲಾಗಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯರು ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿನಿಯರಾದ ಶರಿಷ್ಮಾ ಹಾಗೂ ಚದ್ಮಿಕಾ ಅವರು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಂಡಿದ್ದಾರೆ.

Related posts

ತೋಟತ್ತಾಡಿ ಎಸ್. ಎನ್. ಡಿ. ಪಿ. ವತಿಯಿಂದ ಸ್ವಾತಂತ್ರ ದಿನ ಆಚರಣೆ

Suddi Udaya

ಎಕ್ಸಲೆಂಟ್ ಮೂಡಬಿದ್ರೆ ಆಶ್ರಯದಲ್ಲಿ ಜಾಗೃತಿ ಅಭಿಯಾನ

Suddi Udaya

ಧರ್ಮಸ್ಥಳ ಅಶೋಕನಗರದಲ್ಲಿ77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ನಡ ಗ್ರಾ.ಪಂ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಕ್ಯಾಂಪ್ಕೊ ಸಾಂತ್ವನ ಯೋಜನೆಯಡಿ ಧನಸಹಾಯ ಹಸ್ತಾಂತರ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!