September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಕೊಕ್ಕಡ ಬಾರ್ ನಲ್ಲಿ ಇಬ್ಬರ ಮೇಲೆ ಹಲ್ಲೆ: ಪ್ರಕರಣ ದಾಖಲು

ಬೆಳ್ತಂಗಡಿ: ಕೊಕ್ಕಡ ಬಾರ್ & ರೆಸ್ಟೋರೆಂಟ್ ನಲ್ಲಿ ಮದ್ಯ ಸೇವಿಸುವ ಸಮಯದಲ್ಲಿ ಹಣಕಾಸಿನ ವಿಚಾರದಲ್ಲಿ ನಾಲ್ಕು ಜನ ಆರೋಪಿಗಳು ಹಲ್ಲೆ ಮಾಡಿದ್ದು. ಈ ವೇಳೆ ರಕ್ಷಣೆ ಮಾಡಲು ಬಂದ ಮತ್ತೊಬ್ಬನ ಮೇಲೂ ಹಲ್ಲೆ ಮಾಡಿದ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಕೊಕ್ಕಡ ಸಾಲಿಯಾನ್ ಬಾರ್ & ರೆಸ್ಟೋರೆಂಟ್ ನಲ್ಲಿ ಮಾ.29 ರಂದು ರಾತ್ರಿ 9 ಗಂಟೆಗೆ ಕೊಕ್ಕಡ ಗ್ರಾಮದ ಹೊಸ ಮನೆ ನಿವಾಸಿ ಅಕ್ಷಯ್(31) ಎಂಬವರು ಮದ್ಯ ಸೇವಿಸಲು ಕುಳಿತಿರುವ ಸಮಯದಲ್ಲಿ ಯತೀಶ್ ಎಂಬಾತ ಬಂದು ಅವ್ಯಾಚ ಶಬ್ದಗಳಿಂದ ಬೈದು ದೀಕ್ಷಿತ್ ಗೆ ಹಣ ಕೊಡು ಎಂದು ಹೇಳುತ್ತಾ ಅಕ್ಷಯ್ ಕುತ್ತಿಗೆ ಪಟ್ಟಿಯನ್ನು ಹಿಡಿದು ಎಳೆದುಕೊಂಡು ಬಾರ್ ಹಿಂಬದಿಗೆ ಹೋಗಿ ಯತೀಶ್, ಧನುಷ್ ಭಂಡಾರಿ, ಶರತ್ ಭಂಡಾರಿ,ಪ್ರವೀಣ್ ರವರು ಸೇರಿಕೊಂಡು ಸಮಾನ ಉದ್ದೇಶದಿಂದ ಕೈಯಿಂದ ಮತ್ತು ಪ್ಲಾಸ್ಟಿಕ್ ಪೈಪಿನಿಂದ ಹಲ್ಲೆ ನಡೆಸಿ, ಕಾಲಿನಿಂದ ತುಳಿದು ಬೆದರಿಕೆ ಹಾಕಿ ದೂಡಿ ಹಾಕಿದ ಸಮಯದಲ್ಲಿ ಬೊಬ್ಬೆ ಹಾಕಿದ ಸಮಯದಲ್ಲಿ ಗಲಾಟೆ ಬಿಡಿಸಲು ಬಂದ ಸಂದೀಪ್ ಎಂಬವರಿಗೂ ಪ್ಲಾಸ್ಟಿಕ್ ಪೈಪು ಮತ್ತು ಕೈಯಿಂದ ಹಲ್ಲೆ ನಡೆಸಿ ಅವ್ಯಾಚ ಶಬ್ದಗಳಿಂದ ಬೈದು ಮುಂದಕ್ಕೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿ ಹೋಗಿರುತ್ತಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಹಲ್ಲೆಗೊಳಗಾದ ಅಕ್ಷಯ್ ನೀಡಿದ ದೂರಿನ ಮೇರೆಗೆ ಕಲಂ 352,115(2),118(1),351(2) R/w 3(5) BNS -2023 ಅಡಿಯಲ್ಲಿ ಆರೋಪಿಗಳಾದ ಯತೀಶ್, ಧನುಷ್ ಭಂಡಾರಿ,ಶರತ್ ಭಂಡಾರಿ, ಪ್ರವೀಣ್ ವಿರುದ್ಧ ಮಾ.31 ರಂದು ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

Related posts

ಮೊಗ್ರು: ನೈಮಾರ್, ಪರಾರಿ, ದoಬೆತ್ತಿಮಾರು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಕೃಷಿ ಹಾನಿ

Suddi Udaya

ಸುಹಾಸ್ ಶೆಟ್ಟಿ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿದ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ

Suddi Udaya

ಕಲ್ಮಂಜ ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಗುರುನಮನ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಭಜನಾ ಪರಿಷತ್ ಇದರ ಅಧ್ಯಕ್ಷರಾಗಿ ಆಯ್ಕೆಯಾದ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ರವರಿಗೆ ತಾಲೂಕು ಭಜನಾ ಪರಿಷತ್ ವತಿಯಿಂದ ಅಭಿನಂದನೆ

Suddi Udaya

ವಾಣಿ ಕಾಲೇಜಿನಲ್ಲಿ ನಿಹಾರ್ ಎಸ್. ಆರ್‌ಗೆ ಅಭಿನಂದನೆ

Suddi Udaya

ಹೊಸಂಗಡಿಯಲ್ಲಿ ಟಿಪ್ಪರ್‌ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶ

Suddi Udaya
error: Content is protected !!