ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬಜಿರೆ: ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು ಶ್ರೀರಾಜ ಗುಳಿಗ ದೈವದ ಪುನರ್‌ಪ್ರತಿಷ್ಠೆ, ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಛಾವಣಿ ಲೋಕಾರ್ಪಣೆ

ಬಜಿರೆ: ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು-ಬಜಿರೆ ಇಲ್ಲಿಯ ಶ್ರೀ ರಾಜ ಗುಳಿಗ ದೈವದ ಪುನರ್‌ಪ್ರತಿಷ್ಠೆ ಹಾಗೂ ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಛಾವಣಿ ಲೋಕಾರ್ಪಣೆ ಮತ್ತು ಕೊರಗಜ್ಜ ದೈವದ ನೇಮೋತ್ಸವವು ಎ.೨ರಂದು ಜರುಗಿತು. ಲಕ್ಷ್ಮೀನಾರಾಯಣ ಅಸ್ರಣ್ಣರ ಪೌರೋಹಿತ್ಯದಲ್ಲಿ ವೈಧಿಕ ಕಾರ್ಯಕ್ರಮ ನೇರವೇರಿತು. ಬೆಳಗಾಂ ಉದ್ಯಮಿ ಸಾಯಿ ಕಿರಣ್ ಸಿ. ಗೋಕರ್ಣ ಅವರು ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಛಾವಣಿ ಮೇಲ್ಛಾವಣಿಯನ್ನು ಲೋಕಾರ್ಪಣೆಗೊಳಿಸಿದರು.

ಬಳಿಕ ಕೊರಗಕಲ್ಲು ಕೊರಗಜ್ಜ ಸೇವಾ ಟ್ರಸ್ಟ್ ಅಧ್ಯಕ್ಷ ಪ್ರದೀಪ್ ಹೆಗ್ಡೆ ಸಭಾಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ವೇಣೂರು ಗ್ರಾ.ಪಂ.ಅಧ್ಯಕ್ಷೆ ಮಲ್ಲಿಕಾ ಹೆಗ್ಡೆ, ಬೆಂಗಳೂರಿನ ಉದ್ಯಮಿ ಜಗದೀಶ್ ಎನ್., ಪ್ರಗತಿಪರ ಕೃಷಿಕ ಪ್ರಭಾಕರ ಹೆಗ್ಡೆನಿಟ್ಟಡೆಗುತ್ತು, ಮಂಗಳೂರು ಡೆವಲಪ್‌ಮೆಂಟ್ ಆಫೀಸರ್ ರಾಮ್ ಕುಮಾರ್, ಅಜಿತ್ ಕುಮಾರ್, ವೇಣೂರು ನಮನ ಕ್ಲಿನಿಕ್‌ನ ಡಾ| ಶಾಂತಿಪ್ರಸಾದ್ ಇಂದ್ರ, ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಜಯರಾಮ ಶೆಟ್ಟಿ, ಬೆಳ್ತಂಗಡಿ ನ್ಯಾಯವಾದಿ ಪ್ರಸಾದ್ ಕೆ.ಎಸ್., ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಅಶೋಕ್ ಜಿ., ಬೆಂಗಳೂರು ಹೈಕೋರ್ಟ್ ನ್ಯಾಯವಾದಿ ಆಕಾಶ್ ಶೆಟ್ಟಿ, ಮಿತ್ತಬೆಟ್ಟು ವನದುರ್ಗಾ ದೇವಸ್ಥಾನದ ಅಧ್ಯಕ್ಷ ಎನ್. ಮೋಹನ್ ಹೆಗ್ಡೆ, ಪಿಲಾತಬೆಟ್ಟು ಗ್ರಾ.ಪಂ. ಮಾಜಿ ಅಧ್ಯಕ್ಷೆ ಶಾರದಾ, ವೇಣೂರು ಗ್ರಾ.ಪಂ. ಸದಸ್ಯ ಸುನೀಲ್ ಕುಮಾರ್, ಕುಕ್ಕೇಡಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಅಶೋಕ್ ಪಾಣೂರು, ಕುಂಞೋಡಿ, ಲಕ್ಷ್ಮೀನಾರಾಯಣ ಅಸ್ರಣ್ಣ, ಸುರೇಶ್ ಕುಮಾರ್ ಅರಿಗ ಪೆರ್ಮಾಣುಗುತ್ತು, ವಿಜಯ ಪೂಜಾರಿ ಹೊಸಪಟ್ಣ ಗುತ್ತು, ಪಿಲಾತಬೆಟ್ಟು ಸಿ.ಎ ಬ್ಯಾಂಕ್ ನಿರ್ದೇಶಕ ಲಕ್ಷ್ಮೀನಾರಾಯಣ ಹೆಗ್ಡೆ ಮತ್ತು ಮೇಲ್ಚಾವಣಿಯ ಕೆಲಸ ನಿರ್ವಹಿಸಿದ ಮಹಮ್ಮದ್ ಶರೀಫ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಾಯಿ ಕಿರಣ್ ಸಿ. ಗೋಕರ್ಣ, ದೈವನರ್ತಕ ರಾಮಣ್ಣ, ನಾದಸ್ವರ ವಾದಕ ಸಂತೋಷ್, ದೈವಚಾರಕ ಪ್ರಸಾದ್, ಪ್ರಶಾಂತ್ ಹಾಗೂ ಸಹಕರಿಸಿದವರನ್ನು ಸನ್ಮಾನಿಸಲಾಯಿತು.

ವೇಣೂರು ಗ್ರಾಮ ಪಂಚಾಯತ್ ಸದಸ್ಯ ಲೋಕಯ್ಯ ಪೂಜಾರಿ ಕಂಗಿತ್ತಿಲು ಸ್ವಾಗತಿಸಿ, ಸತೀಶ್ ಈದು ನಿರೂಪಿಸಿದರು. ಕೊರಗಜ್ಜ ದೈವವು ಬಾಡಾರು ಎಂಬ ಊರಲ್ಲಿ ಇದ್ದರೂ ತನ್ನ ಪ್ರದೇಶಕ್ಕೆ ತನ್ನ ಕಲ್ಲಿನ ಹೆಸರನ್ನು ಇಟ್ಟುಕೊಂಡು ಕೊರಗಕಲ್ಲು ಕೊರಗಜ್ಜ ಎಂಬ ನಾಮಾಂಕಿತದಿಂದ ಭಕ್ತರಿಂದ ಕರೆಸಿಕೊಂಡು ಕಾರ್ಣಿಕದ ಶಕ್ತಿಯಾಗಿ ನೆಲೆಯಾಗಿದ್ದು ಕೊರಗಜ್ಜ ದೈವದ ನೇಮೋತ್ಸವವು ಇದೀಗ ಜರಗಲಿದೆ.

ಈ ಸಂದರ್ಭ ಬಜಿರೆ ಬಾಡರು ಕೊರಗಕಲ್ಲು ಸ್ವಾಮಿ ಶ್ರೀ ಕೊರಗಜ್ಜ ಸೇವಾ ಸಮಿತಿಯ ಉಪಾಧ್ಯಕ್ಷ ಉಮೇಶ್ ಪೂಜಾರಿ ತಿಮರಡ್ಡ, ಮುರಳೀಧರ ಹೆಗ್ಡೆ ಪೊಂಗರ್‌ತ್ಯಾರು, ಕಾರ್ಯದರ್ಶಿ ಸಂದೀಪ್ ಹೆಗ್ಡೆ, ಕೋಶಾಧಿಕಾರಿ ದಿನೇಶ್ ಬಾಡಾರು, ಹಾಗೂ ಸರ್ವಸದಸ್ಯರು ಮತ್ತು ಊರಿನ ಹತ್ತು ಸಮಸ್ತರು ಉಪಸ್ಥಿತರಿದ್ದರು.

Related posts

ಕಲ್ಮಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ ಸರಕಾರಿ ನೌಕರರ ಸಂಘದ ಕ್ಯಾಲೆಂಡರ್ ಬಿಡುಗಡೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರರ 79ನೇ ಹುಟ್ಟು ಹಬ್ಬದ ಆಚರಣೆ, ಬೃಹತ್ ರಕ್ತದಾನ ಶಿಬಿರ ಹಾಗೂ ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡುವಲ್ಲಿ ಸಹಕರಿಸಿದ ದಾನಿಗಳಿಗೆ ಅಭಿನಂದನೆ

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ನೀಲೇಶ್ವರದ ತಂತ್ರಿವರ್ಯರಾದ ಉಚ್ಚಿಲ ಪದ್ಮನಾಭ ತಂತ್ರಿಗಳ ಭೇಟಿ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಪುದುವೆಟ್ಟು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಿಎಂ ಸಿದ್ದರಾಮಯ್ಯರವರಿಗೆ ಮನವಿ

Suddi Udaya
error: Content is protected !!