July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬಜಿರೆ: ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು ಶ್ರೀರಾಜ ಗುಳಿಗ ದೈವದ ಪುನರ್‌ಪ್ರತಿಷ್ಠೆ, ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಛಾವಣಿ ಲೋಕಾರ್ಪಣೆ

ಬಜಿರೆ: ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು-ಬಜಿರೆ ಇಲ್ಲಿಯ ಶ್ರೀ ರಾಜ ಗುಳಿಗ ದೈವದ ಪುನರ್‌ಪ್ರತಿಷ್ಠೆ ಹಾಗೂ ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಛಾವಣಿ ಲೋಕಾರ್ಪಣೆ ಮತ್ತು ಕೊರಗಜ್ಜ ದೈವದ ನೇಮೋತ್ಸವವು ಎ.೨ರಂದು ಜರುಗಿತು. ಲಕ್ಷ್ಮೀನಾರಾಯಣ ಅಸ್ರಣ್ಣರ ಪೌರೋಹಿತ್ಯದಲ್ಲಿ ವೈಧಿಕ ಕಾರ್ಯಕ್ರಮ ನೇರವೇರಿತು. ಬೆಳಗಾಂ ಉದ್ಯಮಿ ಸಾಯಿ ಕಿರಣ್ ಸಿ. ಗೋಕರ್ಣ ಅವರು ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಛಾವಣಿ ಮೇಲ್ಛಾವಣಿಯನ್ನು ಲೋಕಾರ್ಪಣೆಗೊಳಿಸಿದರು.

ಬಳಿಕ ಕೊರಗಕಲ್ಲು ಕೊರಗಜ್ಜ ಸೇವಾ ಟ್ರಸ್ಟ್ ಅಧ್ಯಕ್ಷ ಪ್ರದೀಪ್ ಹೆಗ್ಡೆ ಸಭಾಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ವೇಣೂರು ಗ್ರಾ.ಪಂ.ಅಧ್ಯಕ್ಷೆ ಮಲ್ಲಿಕಾ ಹೆಗ್ಡೆ, ಬೆಂಗಳೂರಿನ ಉದ್ಯಮಿ ಜಗದೀಶ್ ಎನ್., ಪ್ರಗತಿಪರ ಕೃಷಿಕ ಪ್ರಭಾಕರ ಹೆಗ್ಡೆನಿಟ್ಟಡೆಗುತ್ತು, ಮಂಗಳೂರು ಡೆವಲಪ್‌ಮೆಂಟ್ ಆಫೀಸರ್ ರಾಮ್ ಕುಮಾರ್, ಅಜಿತ್ ಕುಮಾರ್, ವೇಣೂರು ನಮನ ಕ್ಲಿನಿಕ್‌ನ ಡಾ| ಶಾಂತಿಪ್ರಸಾದ್ ಇಂದ್ರ, ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಜಯರಾಮ ಶೆಟ್ಟಿ, ಬೆಳ್ತಂಗಡಿ ನ್ಯಾಯವಾದಿ ಪ್ರಸಾದ್ ಕೆ.ಎಸ್., ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಅಶೋಕ್ ಜಿ., ಬೆಂಗಳೂರು ಹೈಕೋರ್ಟ್ ನ್ಯಾಯವಾದಿ ಆಕಾಶ್ ಶೆಟ್ಟಿ, ಮಿತ್ತಬೆಟ್ಟು ವನದುರ್ಗಾ ದೇವಸ್ಥಾನದ ಅಧ್ಯಕ್ಷ ಎನ್. ಮೋಹನ್ ಹೆಗ್ಡೆ, ಪಿಲಾತಬೆಟ್ಟು ಗ್ರಾ.ಪಂ. ಮಾಜಿ ಅಧ್ಯಕ್ಷೆ ಶಾರದಾ, ವೇಣೂರು ಗ್ರಾ.ಪಂ. ಸದಸ್ಯ ಸುನೀಲ್ ಕುಮಾರ್, ಕುಕ್ಕೇಡಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಅಶೋಕ್ ಪಾಣೂರು, ಕುಂಞೋಡಿ, ಲಕ್ಷ್ಮೀನಾರಾಯಣ ಅಸ್ರಣ್ಣ, ಸುರೇಶ್ ಕುಮಾರ್ ಅರಿಗ ಪೆರ್ಮಾಣುಗುತ್ತು, ವಿಜಯ ಪೂಜಾರಿ ಹೊಸಪಟ್ಣ ಗುತ್ತು, ಪಿಲಾತಬೆಟ್ಟು ಸಿ.ಎ ಬ್ಯಾಂಕ್ ನಿರ್ದೇಶಕ ಲಕ್ಷ್ಮೀನಾರಾಯಣ ಹೆಗ್ಡೆ ಮತ್ತು ಮೇಲ್ಚಾವಣಿಯ ಕೆಲಸ ನಿರ್ವಹಿಸಿದ ಮಹಮ್ಮದ್ ಶರೀಫ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಾಯಿ ಕಿರಣ್ ಸಿ. ಗೋಕರ್ಣ, ದೈವನರ್ತಕ ರಾಮಣ್ಣ, ನಾದಸ್ವರ ವಾದಕ ಸಂತೋಷ್, ದೈವಚಾರಕ ಪ್ರಸಾದ್, ಪ್ರಶಾಂತ್ ಹಾಗೂ ಸಹಕರಿಸಿದವರನ್ನು ಸನ್ಮಾನಿಸಲಾಯಿತು.

ವೇಣೂರು ಗ್ರಾಮ ಪಂಚಾಯತ್ ಸದಸ್ಯ ಲೋಕಯ್ಯ ಪೂಜಾರಿ ಕಂಗಿತ್ತಿಲು ಸ್ವಾಗತಿಸಿ, ಸತೀಶ್ ಈದು ನಿರೂಪಿಸಿದರು. ಕೊರಗಜ್ಜ ದೈವವು ಬಾಡಾರು ಎಂಬ ಊರಲ್ಲಿ ಇದ್ದರೂ ತನ್ನ ಪ್ರದೇಶಕ್ಕೆ ತನ್ನ ಕಲ್ಲಿನ ಹೆಸರನ್ನು ಇಟ್ಟುಕೊಂಡು ಕೊರಗಕಲ್ಲು ಕೊರಗಜ್ಜ ಎಂಬ ನಾಮಾಂಕಿತದಿಂದ ಭಕ್ತರಿಂದ ಕರೆಸಿಕೊಂಡು ಕಾರ್ಣಿಕದ ಶಕ್ತಿಯಾಗಿ ನೆಲೆಯಾಗಿದ್ದು ಕೊರಗಜ್ಜ ದೈವದ ನೇಮೋತ್ಸವವು ಇದೀಗ ಜರಗಲಿದೆ.

ಈ ಸಂದರ್ಭ ಬಜಿರೆ ಬಾಡರು ಕೊರಗಕಲ್ಲು ಸ್ವಾಮಿ ಶ್ರೀ ಕೊರಗಜ್ಜ ಸೇವಾ ಸಮಿತಿಯ ಉಪಾಧ್ಯಕ್ಷ ಉಮೇಶ್ ಪೂಜಾರಿ ತಿಮರಡ್ಡ, ಮುರಳೀಧರ ಹೆಗ್ಡೆ ಪೊಂಗರ್‌ತ್ಯಾರು, ಕಾರ್ಯದರ್ಶಿ ಸಂದೀಪ್ ಹೆಗ್ಡೆ, ಕೋಶಾಧಿಕಾರಿ ದಿನೇಶ್ ಬಾಡಾರು, ಹಾಗೂ ಸರ್ವಸದಸ್ಯರು ಮತ್ತು ಊರಿನ ಹತ್ತು ಸಮಸ್ತರು ಉಪಸ್ಥಿತರಿದ್ದರು.

Related posts

ಪೇರಲ್ದರಕಟ್ಟೆ ಜುಮಾ ಮಸೀದಿಯಲ್ಲಿ ರಮೇಶ್ ಗಿಂಡಾಡಿ ವತಿಯಿಂದ ಸೌಹಾರ್ದ ಇಫ್ತಾರ್ ಮೀಟ್

Suddi Udaya

ಸುಳ್ಯೋಡಿ: ಮಾತೃಭೋಜನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಕುವೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya

ಬೆಳ್ತಂಗಡಿ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಮತ ಯಾಚನೆ

Suddi Udaya

ಎಸ್‌ಡಿಎಂ ಪಿಜಿ ಕಾಲೇಜಿನಲ್ಲಿ ಮಾಸ್ಟರ್ಸ್ ಫ್ಯಾಶನ್ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಪೋಷಕರ ಸಭೆ

Suddi Udaya
error: Content is protected !!