September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಜೈ ತುಳುನಾಡ್ ಬೆಂಗಳೂರು ಘಟಕದ ಕೋಶಾಧಿಕಾರಿಯಾಗಿ ರಂಜನ್ ಬೆಳಾಲು

ಬೆಳ್ತಂಗಡಿ :ಜೈ ತುಳುನಾಡ್ ಬೆಂಗಳೂರು ಘಟಕದ ಕೋಶಾಧಿಕಾರಿಯಾಗಿ ಬೆಳಾಲಿನ ಸೌತೆಗದ್ದೆ ನಿವಾಸಿ ರಂಜನ್‌ ಎಸ್‌.ವೈ. ಆಯ್ಕೆಯಾಗಿದ್ದಾರೆ.

ಬೆಂಗಳೂರಿನಲ್ಲಿ ನೆಲೆಸಿರುವ ತುಳುನಾಡಿನ ಜನರನ್ನು ಒಗ್ಗೂಡಿಸಿ ಅನೇಕ ಸಾಂಸ್ಕೃತಿಕ ಹಾಗೂ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಾ ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷೆಯಾಗಿ ಮಾನ್ಯತೆ ಸಿಗುವಲ್ಲಿ ಶ್ರಮಿಸುತ್ತಾ ಬಂದಿರುವ ಜೈ ತುಳುನಾಡ್ ಬೆಂಗಳೂರು ಘಟಕದ 2026-2027 ನೇ ಸಾಲಿನ ವಾರ್ಷಿಕ ಮಹಾಸಭೆ ಮಾ.29 ರಂದು ಬೆಂಗಳೂರಿನ ಮೆಜೆಸ್ಟಿಕ್ ಹತ್ತಿರ ಇರುವ ಸ್ವಾಗತ್ ಹೋಟೆಲ್ ನಲ್ಲಿ ನಡೆಯಿತು.

ಇದರಲ್ಲಿ 2026- 2027 ನೇ ಸಾಲಿನ ನೂತನ ಸಮಿತಿಯನ್ನು ರಚನೆ ಮಾಡಲಾಗಿದ್ದು ಕೋಶಾಧಿಕಾರಿಯಾಗಿ ಇವರು ಆಯ್ಕೆಯಾದರು. ಇವರು ಇಂಡೊ-ಮಿಮ್ ಲಿಮಿಟೆಡ್ ಬೆಂಗಳೂರು ಇದರ ಉದ್ಯೋಗಿ. ಸೌತೆಗದ್ದೆ ಯೋಗೀಶ್ ಗೌಡ ಮತ್ತು ಜಯಲಕ್ಷ್ಮಿ ಎಸ್. ದಂಪತಿ ಪುತ್ರ.

Related posts

ಹ್ಯಾಂಡ್ ಬಾಲ್ ಪಂದ್ಯಾಟ: ಸಂತ ತೆರೇಸಾ ಸಂಸ್ಥೆಯ ವಿದ್ಯಾರ್ಥಿಗಳ ಅದ್ಭುತ ಸಾಧನೆ, ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ನಾವೂರು ಬಡೆಕಾವಿನಲ್ಲಿ ಭಕ್ತರ ಪರಿಶ್ರಮದಿಂದಲೇ ನಿರ್ಮಾಣ ಆಗುತ್ತಿರುವ ಶ್ರೀ ದುರ್ಗಾದೇವಿಯ ದೇವಸ್ಥಾನ

Suddi Udaya

ಬೆಳೆ ವಿಮೆ ರೈತರ ಖಾತೆಗೆ ಜಮೆಯಾಗದೆ ತೊಂದರೆ : ಹರೀಶ್ ಸಾಲಿಯಾನ್ ಮೋರ್ತಾಜೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಡಿರ ಬನದಲ್ಲಿ ನಾಲ್ಕು ನಾಗನ ಕಲ್ಲುಗಳು ಹಾಗೂ ಎರಡು ಮಣ್ಣಿನ ಮಡಕೆ, ಒಂದು ತಿಬಿಲೆ ಪತ್ತೆ

Suddi Udaya

ಉಜಿರೆ: ಲಕ್ಷ್ಮೀಶ ಭಟ್ ಇವರಿಗೆ ಹಿಮಾಲಯ ವುಡ್ ಬ್ಯಾಡ್ಜ್ ನಲ್ಲಿ ಅರ್ಹತೆ

Suddi Udaya
error: Content is protected !!