ಬೆಳ್ತಂಗಡಿ: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಸದಸ್ಯೆ ರತ್ನ, ಲಲಿತ ಆಚಾರ್ಯ, ಶಾರದಾ, ಜಯರಾಜ್ ಹೆಗ್ಗಡೆ, ಹೇಮಾವತಿ ಯವರಿಗೆ ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಬಳಂಜ ವಲಯದಲ್ಲಿ ಹಣ್ಣು ಹಂಪಲು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ದೇವರಾಜ್, ಗ್ರಾಮ ಪಂಚಾಯತ್ ಸದಸ್ಯೆ ಲೀಲಾ, ಒಕ್ಕೂಟ ಪದಾಧಿಕಾರಿಗಳಾದ ಗೀತಾ, ಸುನೀತಾ, ರಮೇಶ್ ಆಚಾರ್ಯ, ವಲಯದ ಮೇಲ್ವಿಚಾರಕಿ ಪದ್ಮಾವತಿ , ಸೇವಾಪ್ರತಿನಿಧಿಗಳಾದ ಪ್ರಮೀಳಾ, ಮೀನಾಕ್ಷಿ ಉಪಸ್ಥಿತರಿದ್ದರು.












