September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಕೊಕ್ಕಡ ಬಾರ್ ನಲ್ಲಿ ಇಬ್ಬರ ಮೇಲೆ ಹಲ್ಲೆ: ಪ್ರಕರಣ ದಾಖಲು

ಬೆಳ್ತಂಗಡಿ: ಕೊಕ್ಕಡ ಬಾರ್ & ರೆಸ್ಟೋರೆಂಟ್ ನಲ್ಲಿ ಮದ್ಯ ಸೇವಿಸುವ ಸಮಯದಲ್ಲಿ ಹಣಕಾಸಿನ ವಿಚಾರದಲ್ಲಿ ನಾಲ್ಕು ಜನ ಆರೋಪಿಗಳು ಹಲ್ಲೆ ಮಾಡಿದ್ದು. ಈ ವೇಳೆ ರಕ್ಷಣೆ ಮಾಡಲು ಬಂದ ಮತ್ತೊಬ್ಬನ ಮೇಲೂ ಹಲ್ಲೆ ಮಾಡಿದ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಕೊಕ್ಕಡ ಸಾಲಿಯಾನ್ ಬಾರ್ & ರೆಸ್ಟೋರೆಂಟ್ ನಲ್ಲಿ ಮಾ.29 ರಂದು ರಾತ್ರಿ 9 ಗಂಟೆಗೆ ಕೊಕ್ಕಡ ಗ್ರಾಮದ ಹೊಸ ಮನೆ ನಿವಾಸಿ ಅಕ್ಷಯ್(31) ಎಂಬವರು ಮದ್ಯ ಸೇವಿಸಲು ಕುಳಿತಿರುವ ಸಮಯದಲ್ಲಿ ಯತೀಶ್ ಎಂಬಾತ ಬಂದು ಅವ್ಯಾಚ ಶಬ್ದಗಳಿಂದ ಬೈದು ದೀಕ್ಷಿತ್ ಗೆ ಹಣ ಕೊಡು ಎಂದು ಹೇಳುತ್ತಾ ಅಕ್ಷಯ್ ಕುತ್ತಿಗೆ ಪಟ್ಟಿಯನ್ನು ಹಿಡಿದು ಎಳೆದುಕೊಂಡು ಬಾರ್ ಹಿಂಬದಿಗೆ ಹೋಗಿ ಯತೀಶ್, ಧನುಷ್ ಭಂಡಾರಿ, ಶರತ್ ಭಂಡಾರಿ,ಪ್ರವೀಣ್ ರವರು ಸೇರಿಕೊಂಡು ಸಮಾನ ಉದ್ದೇಶದಿಂದ ಕೈಯಿಂದ ಮತ್ತು ಪ್ಲಾಸ್ಟಿಕ್ ಪೈಪಿನಿಂದ ಹಲ್ಲೆ ನಡೆಸಿ, ಕಾಲಿನಿಂದ ತುಳಿದು ಬೆದರಿಕೆ ಹಾಕಿ ದೂಡಿ ಹಾಕಿದ ಸಮಯದಲ್ಲಿ ಬೊಬ್ಬೆ ಹಾಕಿದ ಸಮಯದಲ್ಲಿ ಗಲಾಟೆ ಬಿಡಿಸಲು ಬಂದ ಸಂದೀಪ್ ಎಂಬವರಿಗೂ ಪ್ಲಾಸ್ಟಿಕ್ ಪೈಪು ಮತ್ತು ಕೈಯಿಂದ ಹಲ್ಲೆ ನಡೆಸಿ ಅವ್ಯಾಚ ಶಬ್ದಗಳಿಂದ ಬೈದು ಮುಂದಕ್ಕೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿ ಹೋಗಿರುತ್ತಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಹಲ್ಲೆಗೊಳಗಾದ ಅಕ್ಷಯ್ ನೀಡಿದ ದೂರಿನ ಮೇರೆಗೆ ಕಲಂ 352,115(2),118(1),351(2) R/w 3(5) BNS -2023 ಅಡಿಯಲ್ಲಿ ಆರೋಪಿಗಳಾದ ಯತೀಶ್, ಧನುಷ್ ಭಂಡಾರಿ,ಶರತ್ ಭಂಡಾರಿ, ಪ್ರವೀಣ್ ವಿರುದ್ಧ ಮಾ.31 ರಂದು ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

Related posts

ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya

ವಕ್ಫ್ ಕಾಯ್ದೆಗೆ ಅಸಂವಿಧಾನಿಕ ತಿದ್ದುಪಡಿ: ಕಕ್ಕಿಂಜೆಯಲ್ಲಿ ಮೂರು ಪಂಚಾಯತ್ ವ್ಯಾಪ್ತಿಯ ಮಸ್ಜಿದ್ ಗಳ ಜಂಟಿ ಪ್ರತಿಭಟನೆ

Suddi Udaya

ಮಾಜಿ ಅಧ್ಯಕ್ಷ ಹಾಲಿ ಗ್ರಾ.ಪಂ ಸದಸ್ಯ ಅಬ್ದುಲ್ ರಝಾಕ್ ಸತತ ಹೋರಾಟದಿಂದ ತೆಕ್ಕಾರು ಗ್ರಾಮಕ್ಕೆ ಉಪ ಆರೋಗ್ಯ ಕೇಂದ್ರ ಮಂಜೂರು ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಆರೋಗ್ಯ ಸಚಿವರಿಗೆ ಮತ್ತೊಂದು ಮನವಿ

Suddi Udaya

ಕುವೆಟ್ಟು ಮಹಾಶಕ್ತಿ ಕೇಂದ್ರದ ಕೊಯ್ಯೂರು ಶಕ್ತಿಕೇಂದ್ರದಲ್ಲಿ ನಮೋ ಯುವ ಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆಯ ಶ್ರೀ ಪಂಚಮಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಅಭೂತಪೂರ್ವ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿಗಳಾದ ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ರವರನ್ನು ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸನ್ಮಾನ

Suddi Udaya
error: Content is protected !!