September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಪಡ್ಡಂದಡ್ಕ: ಮಂಜನಬೆಟ್ಟು ಶ್ರೀ ನಾಗಬ್ರಹ್ಮ ಪರಿವಾರ ಸಾನಿಧ್ಯಗಳ ಪುನರ್ ಪ್ರತಿಷ್ಠೆ-ಎ.5 ನೂತನ ಶಿಲಾಮಯ ಶ್ರೀ ನಾಗದೇವರ ಬಿಂಬಗಳ ಜಲಾಧಿವಾಸ

ವೇಣೂರು: ಕರಿಮಣೇಲು ಗ್ರಾಮದ ಮಂಜನಬೆಟ್ಟು ಶ್ರೀ ನಾಗಬ್ರಹ್ಮ ಪರಿವಾರ ಸಾನಿಧ್ಯವು ಜೀರ್ಣೋದ್ಧಾರಗೊಳ್ಳುತ್ತಿದ್ದು, ಸಾನಿಧ್ಯಗಳ ಪುನರ್ ಪ್ರತಿಷ್ಠಾಪನೆಯ ಪೂರ್ವಭಾವಿಯಾಗಿ ಎ. 5ರಂದು ನೂತನ ಶಿಲಾಮಯ ಶ್ರೀ ನಾಗದೇವರ 19 ಬಿಂಬಗಳನ್ನು ಜಲಾಧಿವಾಸ ಮಾಡುವ ಕಾರ್ಯಕ್ರಮವು ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.

ಬಹುಪ್ರಾಚೀನವಾದ ಶ್ರೀ ನಾಗಬ್ರಹ್ಮ ದೇವರ ಹಾಗೂ ಪರಿವಾರ ಸಾನಿಧ್ಯಗಳ ಆರೂಢವು ಜೀರ್ಣೋದ್ಧಾರಗೊಂಡು ಮೇ 24ರಂದು ಪ್ರತಿಷ್ಠಾಪನೆ ನಡೆಯಲಿದೆ. ಇದರ ಪೂರ್ವಭಾವಿಯಾಗಿ ಇದೀಗ ಶ್ರೀ ನಾಗದೇವರ ಬಿಂಬಗಳನ್ನು ಎ.5ರಂದು ಜಲಾಧಿವಾಸ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 9 ಗಂಟೆಯಿಂದ ಪಡ್ಡಂದಡ್ಕ ಪೇಟೆಯಿಂದ ಭವ್ಯಮೆರವಣಿಗೆ ಮೂಲಕ ಕುಣಿತ ಭಜನೆ ತಂಡಗಳೊಂದಿಗೆ ಮಂಜನಬೆಟ್ಟು ಸಾನಿಧ್ಯಕ್ಕೆ ಆಹ್ವಾನಿಸಿ, 11 ಗಂಟೆಗೆ ಬಿಂಬಗಳ ಜಲಾಧಿವಾಸ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಅನುಗ್ರಹಕ್ಕೆ ಪಾತ್ರರಾಗುವಂತೆ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಜಿನರಾಜ್ ಜೈನ್ ಪದ್ಮಾಂಬ ತಿಳಿಸಿದ್ದಾರೆ.

Related posts

ಜ.18: ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮಹಿಳಾ ವಿಭಾಗದಿಂದ ಮಹಿಳಾ ಸಪ್ತಾಹ..

Suddi Udaya

ಬೆಳ್ತಂಗಡಿ: ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ-ಸಾಧಕರಿಗೆ ಸನ್ಮಾನ, ಭಜನಾ ಕಾರ್ಯಕ್ರಮ

Suddi Udaya

ಉಜಿರೆ: ಎಂ.ಜಿ.ಐ.ಆರ್.ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳು ಕುರಿತು ರಾಷ್ಟ್ರೀಯ ಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya

ಬಂದಾರು: ಕುಂಟಾಲಪಲ್ಕೆ ನಿವಾಸಿ ಜಾರಪ್ಪ ನಿಧನ

Suddi Udaya

ಬೆಂಗಳೂರಿನ ಬಾಷ್ ಕಂಪೆನಿಯ ತಂಡ ಸೇವಾನಿಕೇತನಕ್ಕೆ ಭೇಟಿ

Suddi Udaya
error: Content is protected !!