July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆಳ್ತಂಗಡಿ ಬಸದಿಯಲ್ಲಿ 12ನೇ ವಾರ್ಷಿಕೋತ್ಸವ, ಲಘುಸಿದ್ಧಚಕ್ರ ಯಂತ್ರಾರಾಧನೆ

ಉಜಿರೆ: ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ಜೈನ ತೀರ್ಥಕ್ಷೇತ್ರದಲ್ಲಿ ಪೂಜ್ಯ ಏಲಾಚಾರ್ಯ ಪ್ರಸಂಗಸಾಗರ ಮುನಿಮಹಾರಾಜರ ದಿವ್ಯ ಉಪಸ್ಥಿತಿಯಲ್ಲಿ ಬಸದಿಯ 12ನೇ ವಾರ್ಷಿಕೋತ್ಸವ ಹಾಗೂ ಲಘುಸಿದ್ಧಚಕ್ರ ಯಂತ್ರಾರಾಧನೆ ನಡೆಯಿತು.

ಬೆಳಿಗ್ಗೆ ಏಳು ಗಂಟೆಯಿಂದ ತೋರಣ ಮುಹೂರ್ತ, ವಿಮಾನಶುದ್ಧಿ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.
ಭಗವಾನ್ ಮಹಾವೀರಸ್ವಾಮಿ ಮೂರ್ತಿಗೆ ಪಂಚಾಮೃತಾಭಿಷೇಕ, ಭಗವಾನ್ ಶಾಂತಿನಾಥಸ್ವಾಮಿಗೆ ೧೦೮ ಕಲಶಗಳಿಂದ ಅಭಿಷೇಕ, ಮೂರೂ ಬಸದಿಗಳಲ್ಲಿ ಪಂಚಾಮೃತಾಭಿಷೇಕ, ಮಹಾಮಾತೆ ಪದ್ಮಾವತಿ ದೇವಿಗೆ ಅಲಂಕಾರ ಪೂಜೆ ಹಾಗೂ ಬ್ರಹ್ಮಯಕ್ಷ ದೇವರಿಗೆ ವಿಶೇಷ ಪೂಜೆ ನಡೆಯಿತು.

ಬಸದಿಯ ಪ್ರಧಾನ ಅರ್ಚಕರಾದ  ಜಯರಾಜ ಇಂದ್ರರ ನೇತೃತ್ವದಲ್ಲಿ ಸಹಪುರೋಹಿತರು ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಿದರು.

ಜಯಶ್ರೀ ಹೊರನಾಡು ಮತ್ತು ಬಳಗದವರ ಸುಶ್ರಾವ್ಯ ಗಾಯನ ಕಾರ್ಯಕ್ರಮಕ್ಕೆ ವಿಶೇಷ ಮೆರುಗನ್ನು ನೀಡಿತು.
ಬಸದಿಯ ಅನುವಂಶಿಕ ಆಡಳಿತ ಮೊಕ್ತೇಸರ ಕೆ. ಜಯವರ್ಮರಾಜ ಬಳ್ಳಾಲ್ ಮತ್ತು ಕುಟುಂಬಸ್ಥರು, ಡಾ. ಕೆ. ಜೀವಂಧರ ಬಳ್ಳಾಲ್, ಕೆ. ರಾಜವರ್ಮ ಬಳ್ಳಾಲ್, ಡಾ. ಮಾಲತಿ ಹೆಗ್ಡೆ, ಡಾ. ಪ್ರಿಯಾ ಬಳ್ಳಾಲ್ ಮೊದಲಾದವರು ಉಪಸ್ಥಿತರಿದ್ದರು.

Related posts

ಬಳಂಜ: ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಒಕ್ಕೂಟದಿಂದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

Suddi Udaya

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಹಾಗೂ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಿಂದ ಗೋಳಿತೊಟ್ಟು ರಸ್ತೆಯ ಬದಿ ಮಣ್ಣು ಹಾಕಿ ದುರಸ್ತಿಗೊಳಿಸಿದ ಯುವಕರ ತಂಡ

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಯವರ ಜನ್ಮ ದಿನಾಚರಣೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಶ್ರೀ ಗಣಪತಿ ಹವನ, ಆಶ್ಲೇಷ ಪೂಜೆ, ಅನುಜ್ಞಾಕಲಶ ದುರ್ಗಾ ಪೂಜೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ| ಡಿ. ಹೆಗ್ಗಡೆಯವರ ವಿರುದ್ಧ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಹೈಕೋರ್ಟ್ ಮಹತ್ವದ ತೀರ್ಪು

Suddi Udaya
error: Content is protected !!