23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹುತ್ತಕ್ಕೆ ಕೈ ಹಾಕಿ ಜೇನು ತೆಗೆಯುವ ವೇಳೆ ವಿಷ ಜಂತು ಕಚ್ಚಿದ ಶಂಕೆ : ಚಿಕಿತ್ಸೆ ಪಡೆಯದೆ ವ್ಯಕ್ತಿ ಮೃತ್ಯು

ಬೆಳ್ತಂಗಡಿ: ಬಡಗಕಾರಂದೂರು ಗ್ರಾಮದ ಅರ್ಕಿಜಡ್ಡ ನಿವಾಸಿ ಕೃಷ್ಣಪ್ಪ ಮೂಲ್ಯ (63ವ) ರವರವರು ಹುತ್ತದಿಂದ ಕೈ ಹಾಕಿ ಜೇನು ತೆಗೆಯುವಾಗ ಯಾವುದೋ ವಿಷಜಂತು ಕಚ್ಚಿ, ಚಿಕಿತ್ಸೆ ಪಡೆಯದೆ ಎ.2 ರಂದು ಮೃತಪಟ್ಟ ಘಟನೆ ನಡೆದಿದೆ.

ಕೃಷ್ಣಪ್ಪ ಮೂಲ್ಯರವರ ಪತ್ನಿ ಮೃತಪಟ್ಟಿದ್ದು, ಅವರ ಮಕ್ಕಳು ಸುಮಾರು 15 ವರ್ಷಗಳ ಹಿಂದೆ ಕೃಷ್ಣಪ್ಪ ಮೂಲ್ಯ ರವರನ್ನು ಬಿಟ್ಟ ಹೋಗಿದ್ದು, ತದನಂತರ ಕೃಷ್ಣಪ್ಪ ಮೂಲ್ಯ, ಎಂಬವರು ಒಬ್ಬಂಟಿಯಾಗಿ ಬಡಗಕಾರಂದೂರು ಗ್ರಾಮದ ಅರ್ಕಿಜಡ್ಡ ಎಂಬಲ್ಲಿ ವಾಸವಾಗಿದ್ದರು. ಕೃಷ್ಣಪ್ಪ ಮೂಲ್ಯ ರವರ ತಂಗಿ ಶ್ರೀಮತಿ ಮುತ್ತಮ್ಮ ಎಂಬವರು ಕೃಷ್ಣಪ್ಪ ಮೂಲ್ಯರಿಗೆ ಪ್ರತಿದಿನ ಊಟ ತಿಂಡಿ ಕೊಟ್ಟು ಬರುತ್ತಿದ್ದು, ಇತ್ತೀಚೆಗೆ ಸುಮಾರು 15 ದಿನಗಳ ಹಿಂದೆ ಕೃಷ್ಣಪ್ಪ ಮೂಲ್ಯ ರವರು ಹುತ್ತಕ್ಕೆ ಕೈ ಹಾಕಿ ಜೇನು ತೆಗೆಯುವ ಸಮಯ ಎಡಕೈಗೆ ಏನೋ ಕಚ್ಚಿದ ‌‌ಗಾಯವಾಗಿ ಕೈ ಬಾತುಕೊಂಡಿದ್ದು ಚಿಕಿತ್ಸೆ ಪಡೆದುಕೊಳ್ಳಲು ನಿರಾಕರಿಸಿದ್ದು,ಅವರು ಎ.2ರಂದು ಮನೆಯಲ್ಲೇ ಮೃತಪಟ್ಟಿದ್ದಾರೆ. ಹುತ್ತಕ್ಕೆ ಕೈ ಹಾಕಿ ಜೇನು ತೆಗೆಯುವಾಗ ಯಾವುದೋ
ವಿಷಜಂತು ಹೆಚ್ಚಿರಬಹುದು ಎಂಬ ಶಂಕೆ ಉಂಟಾಗಿದೆ ಅಥವಾ ಇನ್ಯಾವುದೋ ಕಾರಣದಿಂದ‌ ಅವರು ಮೃತಪಟ್ಟಿದ್ದಾರೆ.
ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಸೌತಡ್ಕ ಶ್ರೀ ಮಹಾ ಗಣಪತಿ ಕ್ಷೇತ್ರಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಕೊಕ್ಕಡ ಹಳ್ಳಿಗೇರಿ ಕಾಮಧೇನು ಗೋಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆ ಹಾಗೂ ಇಸ್ಕಾನ್ ನ ಹರೀಶ್ ಭೇಟಿ

Suddi Udaya

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮತ್ತು ಕ್ಯಾಲೆಂಡರ್ ಬಿಡುಗಡೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೈರ್ ವಿತರಣೆ

Suddi Udaya

ಮೇ .17, 18, 19: ಬೆಳ್ತಂಗಡಿ ಸ್ಪಂದನ ಪಾಲಿಕ್ಲಿನಿಕ್ & ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್ ನಲ್ಲಿ ಉಚಿತ ಹಾಗೂ ವಿಶೇಷ ರಿಯಾಯಿತಿ

Suddi Udaya
error: Content is protected !!