July 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹುತ್ತಕ್ಕೆ ಕೈ ಹಾಕಿ ಜೇನು ತೆಗೆಯುವ ವೇಳೆ ವಿಷ ಜಂತು ಕಚ್ಚಿದ ಶಂಕೆ : ಚಿಕಿತ್ಸೆ ಪಡೆಯದೆ ವ್ಯಕ್ತಿ ಮೃತ್ಯು

ಬೆಳ್ತಂಗಡಿ: ಬಡಗಕಾರಂದೂರು ಗ್ರಾಮದ ಅರ್ಕಿಜಡ್ಡ ನಿವಾಸಿ ಕೃಷ್ಣಪ್ಪ ಮೂಲ್ಯ (63ವ) ರವರವರು ಹುತ್ತದಿಂದ ಕೈ ಹಾಕಿ ಜೇನು ತೆಗೆಯುವಾಗ ಯಾವುದೋ ವಿಷಜಂತು ಕಚ್ಚಿ, ಚಿಕಿತ್ಸೆ ಪಡೆಯದೆ ಎ.2 ರಂದು ಮೃತಪಟ್ಟ ಘಟನೆ ನಡೆದಿದೆ.

ಕೃಷ್ಣಪ್ಪ ಮೂಲ್ಯರವರ ಪತ್ನಿ ಮೃತಪಟ್ಟಿದ್ದು, ಅವರ ಮಕ್ಕಳು ಸುಮಾರು 15 ವರ್ಷಗಳ ಹಿಂದೆ ಕೃಷ್ಣಪ್ಪ ಮೂಲ್ಯ ರವರನ್ನು ಬಿಟ್ಟ ಹೋಗಿದ್ದು, ತದನಂತರ ಕೃಷ್ಣಪ್ಪ ಮೂಲ್ಯ, ಎಂಬವರು ಒಬ್ಬಂಟಿಯಾಗಿ ಬಡಗಕಾರಂದೂರು ಗ್ರಾಮದ ಅರ್ಕಿಜಡ್ಡ ಎಂಬಲ್ಲಿ ವಾಸವಾಗಿದ್ದರು. ಕೃಷ್ಣಪ್ಪ ಮೂಲ್ಯ ರವರ ತಂಗಿ ಶ್ರೀಮತಿ ಮುತ್ತಮ್ಮ ಎಂಬವರು ಕೃಷ್ಣಪ್ಪ ಮೂಲ್ಯರಿಗೆ ಪ್ರತಿದಿನ ಊಟ ತಿಂಡಿ ಕೊಟ್ಟು ಬರುತ್ತಿದ್ದು, ಇತ್ತೀಚೆಗೆ ಸುಮಾರು 15 ದಿನಗಳ ಹಿಂದೆ ಕೃಷ್ಣಪ್ಪ ಮೂಲ್ಯ ರವರು ಹುತ್ತಕ್ಕೆ ಕೈ ಹಾಕಿ ಜೇನು ತೆಗೆಯುವ ಸಮಯ ಎಡಕೈಗೆ ಏನೋ ಕಚ್ಚಿದ ‌‌ಗಾಯವಾಗಿ ಕೈ ಬಾತುಕೊಂಡಿದ್ದು ಚಿಕಿತ್ಸೆ ಪಡೆದುಕೊಳ್ಳಲು ನಿರಾಕರಿಸಿದ್ದು,ಅವರು ಎ.2ರಂದು ಮನೆಯಲ್ಲೇ ಮೃತಪಟ್ಟಿದ್ದಾರೆ. ಹುತ್ತಕ್ಕೆ ಕೈ ಹಾಕಿ ಜೇನು ತೆಗೆಯುವಾಗ ಯಾವುದೋ
ವಿಷಜಂತು ಹೆಚ್ಚಿರಬಹುದು ಎಂಬ ಶಂಕೆ ಉಂಟಾಗಿದೆ ಅಥವಾ ಇನ್ಯಾವುದೋ ಕಾರಣದಿಂದ‌ ಅವರು ಮೃತಪಟ್ಟಿದ್ದಾರೆ.
ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಛಂದಸ್ಸು: ಪರಿಚಯಾತ್ಮಕ ಕಾರ್ಯಗಾರ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್

Suddi Udaya

ಬೆಳ್ತಂಗಡಿ :ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಎ.07 -17: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ: ಇಂದು ಮತ್ತು ನಾಳೆ ದೇವಸ್ಥಾನದಲ್ಲಿ ವಿವಿಧ ವೈದಿಕ ಕಾರ್ಯಕ್ರಮ

Suddi Udaya

ಫೆ.20-23: ಪಟ್ರಮೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೇಲಂತಬೆಟ್ಟು: ಶಾಂತಿನಗರ ನಿವಾಸಿ ಐಸಾಕ್ ಡಿಸೋಜಾ ನಿಧನ

Suddi Udaya
error: Content is protected !!