July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆಳ್ತಂಗಡಿ ಬಸದಿಯಲ್ಲಿ 12ನೇ ವಾರ್ಷಿಕೋತ್ಸವ, ಲಘುಸಿದ್ಧಚಕ್ರ ಯಂತ್ರಾರಾಧನೆ

ಉಜಿರೆ: ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ಜೈನ ತೀರ್ಥಕ್ಷೇತ್ರದಲ್ಲಿ ಪೂಜ್ಯ ಏಲಾಚಾರ್ಯ ಪ್ರಸಂಗಸಾಗರ ಮುನಿಮಹಾರಾಜರ ದಿವ್ಯ ಉಪಸ್ಥಿತಿಯಲ್ಲಿ ಬಸದಿಯ 12ನೇ ವಾರ್ಷಿಕೋತ್ಸವ ಹಾಗೂ ಲಘುಸಿದ್ಧಚಕ್ರ ಯಂತ್ರಾರಾಧನೆ ನಡೆಯಿತು.

ಬೆಳಿಗ್ಗೆ ಏಳು ಗಂಟೆಯಿಂದ ತೋರಣ ಮುಹೂರ್ತ, ವಿಮಾನಶುದ್ಧಿ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.
ಭಗವಾನ್ ಮಹಾವೀರಸ್ವಾಮಿ ಮೂರ್ತಿಗೆ ಪಂಚಾಮೃತಾಭಿಷೇಕ, ಭಗವಾನ್ ಶಾಂತಿನಾಥಸ್ವಾಮಿಗೆ ೧೦೮ ಕಲಶಗಳಿಂದ ಅಭಿಷೇಕ, ಮೂರೂ ಬಸದಿಗಳಲ್ಲಿ ಪಂಚಾಮೃತಾಭಿಷೇಕ, ಮಹಾಮಾತೆ ಪದ್ಮಾವತಿ ದೇವಿಗೆ ಅಲಂಕಾರ ಪೂಜೆ ಹಾಗೂ ಬ್ರಹ್ಮಯಕ್ಷ ದೇವರಿಗೆ ವಿಶೇಷ ಪೂಜೆ ನಡೆಯಿತು.

ಬಸದಿಯ ಪ್ರಧಾನ ಅರ್ಚಕರಾದ  ಜಯರಾಜ ಇಂದ್ರರ ನೇತೃತ್ವದಲ್ಲಿ ಸಹಪುರೋಹಿತರು ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಿದರು.

ಜಯಶ್ರೀ ಹೊರನಾಡು ಮತ್ತು ಬಳಗದವರ ಸುಶ್ರಾವ್ಯ ಗಾಯನ ಕಾರ್ಯಕ್ರಮಕ್ಕೆ ವಿಶೇಷ ಮೆರುಗನ್ನು ನೀಡಿತು.
ಬಸದಿಯ ಅನುವಂಶಿಕ ಆಡಳಿತ ಮೊಕ್ತೇಸರ ಕೆ. ಜಯವರ್ಮರಾಜ ಬಳ್ಳಾಲ್ ಮತ್ತು ಕುಟುಂಬಸ್ಥರು, ಡಾ. ಕೆ. ಜೀವಂಧರ ಬಳ್ಳಾಲ್, ಕೆ. ರಾಜವರ್ಮ ಬಳ್ಳಾಲ್, ಡಾ. ಮಾಲತಿ ಹೆಗ್ಡೆ, ಡಾ. ಪ್ರಿಯಾ ಬಳ್ಳಾಲ್ ಮೊದಲಾದವರು ಉಪಸ್ಥಿತರಿದ್ದರು.

Related posts

ಸೌತಡ್ಕ ದೇವಾಲಯಗಳಲ್ಲಿ ಕಾನೂನು ಬಾಹಿರವಾಗಿ ಮತ್ತು ಭಕ್ತಾದಿಗಳ ನಂಬಿಕೆಗೆ ವಿರುದ್ಧವಾಗಿ ನಡೆಸಿರುವ ಅವ್ಯವಹಾರದ ಕುರಿತು ಪ್ರಶಾಂತ್ ಪೂವಾಜೆ ಯವರಿಂದ ಪತ್ರಿಕಾಗೋಷ್ಠಿ

Suddi Udaya

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ ಪ್ರಯುಕ್ತ `ಏಕಾಹ ಭಜನಾ ಕಾರ್ಯಕ್ರಮ ಮತ್ತು ಭಜನಾ ಕಮ್ಮಟೋತ್ಸವ

Suddi Udaya

ಸಜ್ಜನಿಕ ನಡೆ, ಸಂಘರ್ಷದ ಹೋರಾಟ, ಸೌಜನ್ಯಯುತ ರಾಯಭಾರಿತ್ವ ಹೊಂದಿದ ಅಪರೂಪದ ರಾಜಕಾರಣಿ ವಸಂತ ಬಂಗೇರ – ಶಾಸಕ ಹರೀಶ್ ಪೂಂಜ

Suddi Udaya

ಲಾರಿ-ಕಾರು ಮಧ್ಯೆ ಅಪಘಾತ: ಕಾರು ನಜ್ಜುಗುಜ್ಜು

Suddi Udaya

‘ಕರ್ಂಗೋಲು ಕಂಗುಲು’ ಸಾಕ್ಷ್ಯಚಿತ್ರ ಪ್ರದರ್ಶನ ಮತ್ತು ‘ಕುದ್ಕಬಚ್ಚಿರೆ’ ಕಥಾ ಸಂಕಲನ ಬಿಡುಗಡೆ

Suddi Udaya

ಮದ್ದಡ್ಕ ಮಸ್ಜಿದ್‌ನ ನೂತನ ಆಡಳಿತ ಕಚೇರಿ ಉದ್ಘಾಟನೆ

Suddi Udaya
error: Content is protected !!