September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹುತ್ತಕ್ಕೆ ಕೈ ಹಾಕಿ ಜೇನು ತೆಗೆಯುವ ವೇಳೆ ವಿಷ ಜಂತು ಕಚ್ಚಿದ ಶಂಕೆ : ಚಿಕಿತ್ಸೆ ಪಡೆಯದೆ ವ್ಯಕ್ತಿ ಮೃತ್ಯು

ಬೆಳ್ತಂಗಡಿ: ಬಡಗಕಾರಂದೂರು ಗ್ರಾಮದ ಅರ್ಕಿಜಡ್ಡ ನಿವಾಸಿ ಕೃಷ್ಣಪ್ಪ ಮೂಲ್ಯ (63ವ) ರವರವರು ಹುತ್ತದಿಂದ ಕೈ ಹಾಕಿ ಜೇನು ತೆಗೆಯುವಾಗ ಯಾವುದೋ ವಿಷಜಂತು ಕಚ್ಚಿ, ಚಿಕಿತ್ಸೆ ಪಡೆಯದೆ ಎ.2 ರಂದು ಮೃತಪಟ್ಟ ಘಟನೆ ನಡೆದಿದೆ.

ಕೃಷ್ಣಪ್ಪ ಮೂಲ್ಯರವರ ಪತ್ನಿ ಮೃತಪಟ್ಟಿದ್ದು, ಅವರ ಮಕ್ಕಳು ಸುಮಾರು 15 ವರ್ಷಗಳ ಹಿಂದೆ ಕೃಷ್ಣಪ್ಪ ಮೂಲ್ಯ ರವರನ್ನು ಬಿಟ್ಟ ಹೋಗಿದ್ದು, ತದನಂತರ ಕೃಷ್ಣಪ್ಪ ಮೂಲ್ಯ, ಎಂಬವರು ಒಬ್ಬಂಟಿಯಾಗಿ ಬಡಗಕಾರಂದೂರು ಗ್ರಾಮದ ಅರ್ಕಿಜಡ್ಡ ಎಂಬಲ್ಲಿ ವಾಸವಾಗಿದ್ದರು. ಕೃಷ್ಣಪ್ಪ ಮೂಲ್ಯ ರವರ ತಂಗಿ ಶ್ರೀಮತಿ ಮುತ್ತಮ್ಮ ಎಂಬವರು ಕೃಷ್ಣಪ್ಪ ಮೂಲ್ಯರಿಗೆ ಪ್ರತಿದಿನ ಊಟ ತಿಂಡಿ ಕೊಟ್ಟು ಬರುತ್ತಿದ್ದು, ಇತ್ತೀಚೆಗೆ ಸುಮಾರು 15 ದಿನಗಳ ಹಿಂದೆ ಕೃಷ್ಣಪ್ಪ ಮೂಲ್ಯ ರವರು ಹುತ್ತಕ್ಕೆ ಕೈ ಹಾಕಿ ಜೇನು ತೆಗೆಯುವ ಸಮಯ ಎಡಕೈಗೆ ಏನೋ ಕಚ್ಚಿದ ‌‌ಗಾಯವಾಗಿ ಕೈ ಬಾತುಕೊಂಡಿದ್ದು ಚಿಕಿತ್ಸೆ ಪಡೆದುಕೊಳ್ಳಲು ನಿರಾಕರಿಸಿದ್ದು,ಅವರು ಎ.2ರಂದು ಮನೆಯಲ್ಲೇ ಮೃತಪಟ್ಟಿದ್ದಾರೆ. ಹುತ್ತಕ್ಕೆ ಕೈ ಹಾಕಿ ಜೇನು ತೆಗೆಯುವಾಗ ಯಾವುದೋ
ವಿಷಜಂತು ಹೆಚ್ಚಿರಬಹುದು ಎಂಬ ಶಂಕೆ ಉಂಟಾಗಿದೆ ಅಥವಾ ಇನ್ಯಾವುದೋ ಕಾರಣದಿಂದ‌ ಅವರು ಮೃತಪಟ್ಟಿದ್ದಾರೆ.
ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

INICET ಪ್ರವೇಶ ಪರೀಕ್ಷೆ: ಉಜಿರೆಯ ಡಾ|ಶಿವಾನಿಗೆ ದೇಶದಲ್ಲೇ 191ನೇ ರ್ಯಾಂಕ್

Suddi Udaya

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬೆಳ್ತಂಗಡಿ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮತ್ತು ಡಾ.ಹೆಗ್ಗಡೆಯವರ ವ್ಯಕ್ತಿತ್ವದ ತೇಜೋವಧೆ: ಭಾರತೀಯ ಜೈನ್ ಮಿಲನ್ ಸಭೆಯಲ್ಲಿ ಖಂಡನಾ ನಿರ್ಣಯ

Suddi Udaya

ಸ್ನೇಹಜ್ಯೋತಿ ಮಹಿಳಾ ಒಕ್ಕೂಟ ಬೆಳ್ತಂಗಡಿ ವತಿಯಿಂದ ಚಿರತೆ ಹಾವಳಿ ಬಗ್ಗೆ ಅರಣ್ಯ ಸಚಿವರಿಗೆ ಮನವಿ

Suddi Udaya

ಪಡ್ಡಂದಡ್ಕ ರಸ್ತೆ ದುರಸ್ಥಿ ಆಗ್ರಹಿಸಿ ಹೊಸಂಗಡಿ ಪಂಚಾಯತ್‌ಗೆ ಎಸ್‌ಡಿಪಿಐ ನಿಂದ ಮನವಿ

Suddi Udaya
error: Content is protected !!