23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆಳ್ತಂಗಡಿ ಬಸದಿಯಲ್ಲಿ 12ನೇ ವಾರ್ಷಿಕೋತ್ಸವ, ಲಘುಸಿದ್ಧಚಕ್ರ ಯಂತ್ರಾರಾಧನೆ

ಉಜಿರೆ: ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ಜೈನ ತೀರ್ಥಕ್ಷೇತ್ರದಲ್ಲಿ ಪೂಜ್ಯ ಏಲಾಚಾರ್ಯ ಪ್ರಸಂಗಸಾಗರ ಮುನಿಮಹಾರಾಜರ ದಿವ್ಯ ಉಪಸ್ಥಿತಿಯಲ್ಲಿ ಬಸದಿಯ 12ನೇ ವಾರ್ಷಿಕೋತ್ಸವ ಹಾಗೂ ಲಘುಸಿದ್ಧಚಕ್ರ ಯಂತ್ರಾರಾಧನೆ ನಡೆಯಿತು.

ಬೆಳಿಗ್ಗೆ ಏಳು ಗಂಟೆಯಿಂದ ತೋರಣ ಮುಹೂರ್ತ, ವಿಮಾನಶುದ್ಧಿ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.
ಭಗವಾನ್ ಮಹಾವೀರಸ್ವಾಮಿ ಮೂರ್ತಿಗೆ ಪಂಚಾಮೃತಾಭಿಷೇಕ, ಭಗವಾನ್ ಶಾಂತಿನಾಥಸ್ವಾಮಿಗೆ ೧೦೮ ಕಲಶಗಳಿಂದ ಅಭಿಷೇಕ, ಮೂರೂ ಬಸದಿಗಳಲ್ಲಿ ಪಂಚಾಮೃತಾಭಿಷೇಕ, ಮಹಾಮಾತೆ ಪದ್ಮಾವತಿ ದೇವಿಗೆ ಅಲಂಕಾರ ಪೂಜೆ ಹಾಗೂ ಬ್ರಹ್ಮಯಕ್ಷ ದೇವರಿಗೆ ವಿಶೇಷ ಪೂಜೆ ನಡೆಯಿತು.

ಬಸದಿಯ ಪ್ರಧಾನ ಅರ್ಚಕರಾದ  ಜಯರಾಜ ಇಂದ್ರರ ನೇತೃತ್ವದಲ್ಲಿ ಸಹಪುರೋಹಿತರು ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಿದರು.

ಜಯಶ್ರೀ ಹೊರನಾಡು ಮತ್ತು ಬಳಗದವರ ಸುಶ್ರಾವ್ಯ ಗಾಯನ ಕಾರ್ಯಕ್ರಮಕ್ಕೆ ವಿಶೇಷ ಮೆರುಗನ್ನು ನೀಡಿತು.
ಬಸದಿಯ ಅನುವಂಶಿಕ ಆಡಳಿತ ಮೊಕ್ತೇಸರ ಕೆ. ಜಯವರ್ಮರಾಜ ಬಳ್ಳಾಲ್ ಮತ್ತು ಕುಟುಂಬಸ್ಥರು, ಡಾ. ಕೆ. ಜೀವಂಧರ ಬಳ್ಳಾಲ್, ಕೆ. ರಾಜವರ್ಮ ಬಳ್ಳಾಲ್, ಡಾ. ಮಾಲತಿ ಹೆಗ್ಡೆ, ಡಾ. ಪ್ರಿಯಾ ಬಳ್ಳಾಲ್ ಮೊದಲಾದವರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇ.ಧ.ಗ್ರಾ.ಯೋ. ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಬಂದಾರು: ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನ

Suddi Udaya

ಜೆಸಿಐ ಮಡಂತ್ಯಾರು ವಿಜಯ 2024 ರ ಶಾಶ್ವತ ಯೋಜನೆಗಳ ಆನಾವರಣ

Suddi Udaya

ಡಿ.4-5: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ನೂತನ ಶಿಲಾಮಯ ಧ್ವಜಸ್ತಂಭ ಸ್ಥಾಪನೆ ಮತ್ತು ಶೋಭಾಯಾತ್ರೆ

Suddi Udaya

ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಆಯೋಜಿಸಿದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ. ಪದವಿ ಕಾಲೇಜಿನ ವಿವಿಧ ವಿಭಾಗದಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ ಸದಾನಂದ ಬಿ ಮುಂಡಾಜೆ ರವರಿಗೆ ಗ್ರಂಥಾಲಯ ವಿಭಾಗದಿಂದ ಬೀಳ್ಕೊಡುಗೆ

Suddi Udaya
error: Content is protected !!