May 6, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯೋಗ, ರಂಗ ತರಬೇತಿ ಹಾಗೂ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ

ಉಜಿರೆ: ದೇಹಕ್ಕೆ ಮತ್ತು ಮನಸ್ಸಿಗೆ ಆರೋಗ್ಯ ಕೊಡುವ ಸಾಧನವೇ ಯೋಗ. ಯೋಗ ಮಾಡಲು ಯೋಗ ಬೇಕು. ಮಾನಸಿಕ ಹಾಗೂ ದೈಹಿಕ ಸ್ವಸ್ಥತೆ ಶಿಕ್ಷಕರಿಗೆ ಮುಖ್ಯ. ಉತ್ತಮ ಶಿಕ್ಷಕರಾಗಲು ಯೋಗದ ತಿಳುವಳಿಕೆ ಅಗತ್ಯವಿದೆ ಎಂದು ಉಜಿರೆಯ ಪ್ರಕೃತಿ ಮತ್ತು ಯೋಗ ವಿಜ್ಞಾನ ವಿದ್ಯಾಲಯದ ಡೀನ್ ಡಾ. ಶಿವಪ್ರಸಾದ್ ಕೆ. ಇವರು ಎಸ್.ಡಿ.ಎಮ್. ಬಿ.ಎಡ್ ಕಾಲೇಜಿನಲ್ಲಿ ನಡೆದ ಯೋಗ, ರಂಗ ತರಬೇತಿ ಹಾಗೂ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲಿಸಿ ಮಾತನಾಡಿದರು.

ಎಸ್. ಡಿ. ಎಂ. ಬಿ.ಎಡ್. ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂತೋಷ್ ಆಲ್ಬರ್ಟ್ ಸಲ್ಡಾನ್ಹ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ “ಯೋಗ ಮತ್ತು ಕಲೆಯನ್ನು ಸಮರ್ಪಕವಾಗಿ ತನ್ನ ಜೀವನದಲ್ಲಿ ಅಳವಡಿಸಿಕೊಂಡಾಗ ಶಿಕ್ಷಕನು ಪರಿಪೂರ್ಣನಾಗುತ್ತಾನೆ ” ಎಂದು ಹೇಳಿದರು. ಹಾಗೆಯೇ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿ ಶಿಕ್ಷಕನಾದವನು ತಾರತಮ್ಯವನ್ನು ಮಾಡದೇ ಪ್ರತಿಯೊಬ್ಬ ವಿದ್ಯಾರ್ಥಿಗಳನ್ನು ಉತ್ತೇಜಿಸುವ ಕಾರ್ಯವನ್ನು ಮಾಡಬೇಕು. ವಿದ್ಯಾರ್ಥಿ ಸಂಘದ ಸದಸ್ಯರು ತಮ್ಮ ಅಧಿಕಾರವನ್ನು ಸಂವಿಧಾನದ ಆಶಯಗಳಿಗೆ ಪೂರಕವಾಗುವಂತೆ ಬಳಸಬೇಕು ಎಂದು ಹೇಳಿದರು. ವೇದಿಕೆಯಲ್ಲಿ ವಿದ್ಯಾರ್ಥಿ ಸಂಘದ ನಾಯಕಿ ಶ್ರವಣ ಮಹಾಪುರುಷ ಮತ್ತು ಉಪನಾಯಕಿ ಧನುಶ್ರೀ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಎಲ್ಲಾ ಉಪನ್ಯಾಸಕ ವರ್ಗದವರು, ಪ್ರಥಮ ಮತ್ತು ದ್ವಿತೀಯ ಬಿ.ಇಡಿ. ಯ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.
ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿಗಳಾದ ಪೂಜಾಶ್ರೀ ಸ್ವಾಗತಿಸಿ, ವಿಜೇತ ಅತಿಥಿ ಪರಿಚಯಿಸಿ, ಪ್ರಿಯಾ ವಂದಿಸಿ, ಲೀಜಾ ಮತ್ತು ನಿಖಿತ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ರತ್ನಮಾನಸ ನಿಲಯದಲ್ಲಿ ಕ್ರಿಸ್ಮಸ್ ಆಚರಣೆ ಮತ್ತು ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಮಾಹಿತಿ

Suddi Udaya

ಆರಂಬೋಡಿ ಸ.ಉ.ಪ್ರಾ. ಶಾಲೆಗೆ ಕೊಡುಗೆ ನೀಡಿದ ದಾನಿಗಳಿಗೆ ಅಭಿನಂದನೆ ಸಭೆ

Suddi Udaya

ಜಿಲ್ಲಾಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ‘ಪರೋಪಕಾರ ಸಪ್ತಾಹ’

Suddi Udaya

ಪಿಯುಸಿ ಫಲಿತಾಂಶ: ರಾಜ್ಯಮಟ್ಟದಲ್ಲಿ ಅತ್ಯುತ್ತಮ ಸಾಧನೆಗೈದ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು, ಶೇ.100 ಫಲಿತಾಂಶ

Suddi Udaya

ಕನ್ಯಾಡಿ 1 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ : ಶಿಕ್ಷಕ ನಾಭಿರಾಜ ಜೈನ್ ರಿಗೆ ಸನ್ಮಾನ

Suddi Udaya
error: Content is protected !!