24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪುತ್ತೂರುವರದಿ

ಎ.16-19: ಪುತ್ತೂರು-‘ಸುಬ್ಬಜ್ಜನ ಮನೆಯಲ್ಲಿ ವಸತಿಯುತ ಬೇಸಿಗೆ ಶಿಬಿರ’

ಪುತ್ತೂರು:- ದಕ್ಷಿಣ ಕನ್ನಡ ಜಿಲ್ಲೆ, ಪುತ್ತೂರು ತಾಲೂಕಿನ ತಿಂಗಳಾಡಿ ಎಂಬಲ್ಲಿ ನಡೆಯುವ ರಾಜ್ಯಮಟ್ಟದ ‘ಸುಬ್ಬಜ್ಜನ ಮನೆಯಲ್ಲಿ ವಸತಿಯುತ ಬೇಸಿಗೆ ಶಿಬಿರ’ವನ್ನು ಈ ಬಾರಿ ಏ.16 ರಿಂದ 19 ರ ವರೆಗೆ ನಡೆಸಲಾಗುತ್ತಿದೆ. ಕಾಡಿನ ರಹಸ್ಯ ತಿಳಿಯುವಿಕೆಯ ಜೊತೆಗೆ ಟ್ರೆಷರ್ ಹಂಟ್, ವರ್ಲಿ ಆರ್ಟ್, ನೀರಾಟ, ಗೋವು ಮೇವು, ಗೋ ಪೂಜೆ, ನಿತ್ಯ ಪೂಜೆ, ರಾಮಾಯಣ ದೃಶ್ಯ ಕಾವ್ಯ, ಭಗವದ್ ಗೀತೆ ಜೊತೆಗೆ ಜೀವನ ಕೌಶಲ್ಯಗಳನ್ನು ತಿಳಿಸುವ ಹತ್ತು ಹಲವು ಕುತೂಹಲಕಾರಿ ಮನರಂಜನಾ ಆಟಗಳನ್ನು ಜೋಡಿಸಿಕೊಳ್ಳಲಾಗಿದೆ. ಆಕಾಶ ವೀಕ್ಷಣೆ-ನಿದ್ರೆ, ರಂಗೋಲಿ, ಸೌದೆ ಒಲೆ ಅಡಿಗೆ ಕಲಿಕೆ, ಗೆರಟೆ ಚಿತ್ರ, ವ್ಯವಹಾರದ ಪಾಠದ ಜೊತೆ ಮಕ್ಕಳ ನಿತ್ಯ ಕರ್ಮಗಳ ಅಭ್ಯಾಸವು ಸಾಧ್ಯವಾಗುತ್ತಿದೆ.

ಇದರ ಸಂಪೂರ್ಣ ನಿರ್ವಹಣೆಯ ರಾಮಕೃಷ್ಣ ಮಠದ ಭಕ್ತರು ಹಾಗೂ ಮನಃಶಾಸ್ತ್ರಜ್ಞರಾದ ಲಕ್ಷ್ಯ ಸಂಸ್ಥೆಯ ಸಂಸ್ಥಾಪಕ, ಶ್ರೀ ದುರ್ಗಾ ಪರಮೇಶ್ವರ ಭಟ್ ಇವರು ವಹಿಸಿಕೊಂಡಿರುತ್ತಾರೆ. ಇತ್ತೀಚಿನ ದಿನಗಳಲ್ಲಿ ಪ್ರಕೃತಿ ಜೊತೆಗಿನ ಸಂಪರ್ಕ ಶಾಲಾ ಮಕ್ಕಳಿಗೆ ಕಡಿತವಾಗುತ್ತಿರುವುದರಿಂದ ಸುಬ್ಬಜ್ಜನ ಮನೆ ಶಿಬಿರವು ಮಕ್ಕಳಿಗೆ ಪ್ರಕೃತಿ ಒಡಲಿನ ಅವಶ್ಯಕತೆಯನ್ನು ಹಾಗೂ ಅಗಾಧತೆಯನ್ನು ತಿಳಿಸುತ್ತದೆ. ಮೊದಲು ನೋಂದಾಯಿಸಿಕೊಳ್ಳುವ ಆಸಕ್ತ 30 ಮಕ್ಕಳಿಗೆ ಅವಕಾಶವನ್ನು ನೀಡಲಾಗುತ್ತಿದೆ. ದೂರವಾಣಿ ಸಂಖ್ಯೆ 9740645095 / 9663826972 ಕರೆ ಮಾಡುವುದರ ಮೂಲಕ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Related posts

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಸಂತೋಷ್ ಪಿ ಕೋಟ್ಯಾನ್ ಬಳಂಜ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಚಿತ್ರಕಲಾ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ

Suddi Udaya

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾಗಿ ಪೂವಪ್ಪ ಗೌಡ, ಕಾರ್ಯದರ್ಶಿಯಾಗಿ ದಿನೇಶ್ ಗೌಡ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ LAV(Lo Assistance Visit) ಕಾರ್ಯಕ್ರಮ

Suddi Udaya

ಅಳದಂಗಡಿ: ಆಯಾನ್ಸ್ ಮೊಬೈಲ್ ಮಾಲಕ ಅರಿಹಂತ್ ಜೈನ್ ರವರ ಪತ್ನಿ ಪಲ್ಲವಿ ಜೈನ್ ನಿಧನ

Suddi Udaya

ಗುರುವಾಯನಕೆರೆ ಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ: ಶಾಲಾ ಮಕ್ಕಳು, ದ್ವಿಚಕ್ರ ವಾಹನ ಸವಾರರಿಗೆ ತಂದೊಡ್ಡಿದ ಸಂಕಷ್ಟ

Suddi Udaya
error: Content is protected !!