24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೋಟತ್ತಾಡಿ ಗ್ರಾಮದ ದಡ್ಡುಗೆ ಲೋಕೋಪಯೋಗಿ ಸಚಿವರ ಭೇಟಿ: ಸ್ಥಳೀಯರ ಅಹವಾಲು ಸ್ವೀಕಾರ

ಬೆಳ್ತಂಗಡಿ: ತಾಲೂಕಿನ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಇವರ ಮನವಿ ಮೇರೆಗೆ ತೋಟತ್ತಾಡಿ ಗ್ರಾಮದ ದಡ್ಡುಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸ್ಥಳೀಯರು ಸಚಿವರಲ್ಲಿ ತೋಟತ್ತಾಡಿ ಗ್ರಾಮದ ದಟ್ಟು ಪರಿಸರದ ನಿವಾಸಿಗಳು ತಮ್ಮ ಯಾವುದೇ ಕೆಲಸ ಕಾರ್ಯಗಳಿಗೆ ಜಾಕೆಡಿಯಿಂದ ದುಡ್ಡು ಮೂಲಕ ಹರಿವ ನದಿಯನ್ನು ದಾಟಿ ಹೋಗಬೇಕಾಗುತ್ತದೆ. ಮರದ ತಾತ್ಕಾಲಿಕ ಕಾಲು ಸಂಕ ಇದ್ದರೂ ಮಳೆಗಾಲದಲ್ಲಿ ಅದರಲ್ಲಿ ಹೋಗೋದು ಅಪಾಯಕಾರಿಯಾಗುತ್ತದೆ. ಹಾಗಾಗಿ ಇದರಲ್ಲಿ ಶಾಲಾ ಮಕ್ಕಳು ಕಾಲೇಜು ವಿದ್ಯಾರ್ಥಿಗಳು ಇದರಲ್ಲಿ ಹೋಗಲು ಭಯಪಡುತ್ತಾರೆ. ಇಲ್ಲಿ ಕಿರು ಸೇತುವೆಯ ಬಗ್ಗೆ ಸಚಿವರಲ್ಲಿ ಸ್ಥಳೀಯರು ಬೇಡಿಕೆಯನ್ನು ಇಟ್ಟರು ಸಚಿವರು ಪೂರಕವಾಗಿ ಸ್ಪಂದಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ, ಯಶೋಧರ ಚಾರ್ಮಾಡಿ, ಪ್ರದೀಪ್ ಕೆ ಸಿ, ಅಶ್ರಫ್ ನೆರಿಯ, ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು

Related posts

ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಮುಂಡಾಜೆ : ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟ ಉದ್ಘಾಟನೆ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಯಶೋ ನಮನ ಕಾರ್ಯಕ್ರಮ

Suddi Udaya

ಗೇರುಕಟ್ಟೆ: ಶಾಲಾ ಮಕ್ಕಳೊಂದಿಗೆ ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಬಸ್ ಚಾಲಕರ, ನಿರ್ವಾಹಕರಿಂದ ಚೆಲ್ಲಾಟ

Suddi Udaya

ಬೆಳ್ತಂಗಡಿ ತಾಲೂಕು ಅಮೇಚೂರ್ ಕಬಡ್ಡಿ ಅಸೋಸಿಯೇಷನ್ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ ಆಯ್ಕೆ

Suddi Udaya

ಗೇರುಕಟ್ಚೆ: ಸಾವಿರ ಕದಳಿ ಬಾಳೆ ಗೊನೆ ಚಮತ್ಕಾರ

Suddi Udaya
error: Content is protected !!