24.8 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅವಶ್ಯವಿರುವ ರಸ್ತೆ ಮತ್ತು ಸೇತುವೆ ರಚನೆ ಕಾಮಗಾರಿ ಅನುದಾನಕ್ಕೆ ಲೋಕೋಪಯೋಗಿ ಸಚಿವರಿಗೆ ಮನವಿ

ಬೆಳ್ತಂಗಡಿ. ತಾಲೂಕಿನ ನಾರಾವಿ-ಪಾಣಾಲು-ಮಾವಿನಕಟ್ಟೆ ಜಿಲ್ಲಾ ಮುಖ್ಯ ರಸ್ತೆ ಕಿ.ಮೀ 0.80 ರಿಂದ 9.10ರವರೆಗೆ ಅಭಿವೃದ್ಧಿ, ಬದ್ಯಾರು ಸವಣಾಲು ಜಿಲ್ಲಾ ಮುಖ್ಯ ರಸ್ತೆ ಕಿ.ಮೀ 3.00 ರಿಂದ 6.80ರವರೆಗೆ ಅಭಿವೃದ್ಧಿ. ದಿಡುಪೆ-ಸಂಸೆ ರಸ್ತೆ ಕಿ.ಮೀ 0.00 ರಿಂದ 9. 00 ರವರೆಗೆ ರಸ್ತೆ ಕಾಂಕ್ರಿಟೀಕರಣ ಅಭಿವೃದ್ಧಿ. ಚಾರ್ಮಾಡಿ ಗ್ರಾಮದ ಕುಂಡೊಟ್ಟು ಎಂಬಲ್ಲಿ ಕಾಲುಸಂಕ ರಚನೆ ತೋಟತ್ತಾಡಿ ಗ್ರಾಮದ ದಡ್ಡು ಎಂಬಲ್ಲಿ ಸೇತುವೆ ರಚನೆ ಕಾಮಗಾರಿ, ಬೆಳ್ತಂಗಡಿ ನಗರದಲ್ಲಿ ಲೋ.ಇ ಸಿಬ್ಬಂದಿಗಳ ವಸತಿಗೃಹ ನಿರ್ಮಾಣಕ್ಕೆ. ಅನುದಾನ ಒದಗಿಸುವಂತೆ ಮತ್ತು ತಾಲೂಕಿನ ಶಿಶಿಲ ಗ್ರಾಮದ ಶಿಶಿಲೇಶ್ವರ ದೇವಸ್ಥಾನದ ಬಳಿ ಕಪಿಲ ನದಿಗೆ ಸೇತುವೆ ನಿರ್ಮಾಣ ಕಾಮಗಾರಿಗೆ ಸನ್ಮಾನ್ಯ ಮುಖ್ಯಮಂತ್ರಿಯವರ ಟಿಪ್ಪಣಿ ಮೇರೆಗೆ 275.00ಲಕ್ಷಗಳ ಅನುದಾನ(ಲೆ.ಶೀ.5054-03-101-0-02-132 ಪ್ರಮೂಖ ಜಿಲ್ಲಾ ಮುಖ್ಯ ರಸ್ತೆ ಸುಧಾರಣೆ) ಬಿಡುಗಡೆಗೆ ಆದೇಶವಾಗಿದ್ದು . ಆದರೆ ಸದ್ರಿ ಸೇತುವೆ ನಿರ್ಮಾಣ ಕಾಮಗಾರಿಗೆ ಲೋಕೋಪಯೋಗಿ ಇಲಾಖೆಯ ಅಂದಾಜು ಮೊತ್ತದಂತೆ ಈ ಕಾಮಗಾರಿಗೆ 499.36 ಲಕ್ಷಗಳ ಅನುದಾನ ಬೇಕಾಗಿದ್ದು. ಹಾಗಾಗಿ ಈ ಕಾಮಗಾರಿಗೆ ಹೆಚ್ಚುವರಿ ಅನುದಾನ ಬಿಡುಗಡೆಗೆ ಮತ್ತು ಅತಿ ಅವಶ್ಯವಿರುವ ಉಪ್ಪಿನಂಗಡಿ – ಗುರುವಾಯನಕೆರೆ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವಂತೆ ಲೋಕೋಪಯೋಗಿ ಸಚಿವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿಯನ್ನು ನೀಡಿದರು. ಮನವಿಗೆ ಸಚಿವರು ಪೂರಕವಾಗಿ ಸ್ಪಂದಿಸಿದರು.

Related posts

ಬೆಳ್ತಂಗಡಿ ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ವ್ರತ ಪೂಜೆ

Suddi Udaya

ಸಿ.ವಿ.ಸಿ ಹಾಲ್ ವಸತಿ ವಿದ್ಯಾರ್ಥಿನಿ ನಿಲಯದ ಸಮಸ್ಯೆಗೆ ಸಿಕ್ಕಿತು ವಾರ್ಡನ್ ನಿಯೋಜನೆ ಬಳಿಕ ಪರಿಹಾರ

Suddi Udaya

ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆದ ಸ್ಥಳದ ಸ್ವಚ್ಛತೆ

Suddi Udaya

ರೆಖ್ಯ ಶಾಲಾ ಪ್ರಾರಂಭೋತ್ಸವ

Suddi Udaya

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಚ್ಚತಾ ಅಭಿಯಾನ:

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಎಸ್ ಕೆ ಪಿ ಎ ಸದಸ್ಯರಿಗೆ ನಿಕಾನ್ ಕ್ಯಾಮರದ ಬಗ್ಗೆ ಕಾರ್ಯಾಗಾರ

Suddi Udaya
error: Content is protected !!