25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ನೃತ್ಯ ಹಾಗೂ ಸಂಗೀತ ಸಮಾರೋಪ

ಧರ್ಮಸ್ಥಳ: ಶ್ರೀ .ಧ .ಮ .ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಸಕ್ತ ವರ್ಷದ ಭರತನಾಟ್ಯ ಹಾಗೂ ಸಂಗೀತ ತರಗತಿಗಳ ಸಮಾರೋಪ ಸಮಾರಂಭ ನೆರವೇರಿತು.

ಮುಖ್ಯ ಅತಿಥಿ ಸಂಗೀತ ಶಿಕ್ಷಕಿ ಕು. ಸುಪ್ರೀತಾ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಅವರು ಮಕ್ಕಳಿಗೆ ಯಾವತ್ತೂ ಶಿಸ್ತು ಎಲ್ಲಾ ಕ್ಷೇತ್ರಗಳಲ್ಲೂ ಬಹಳ ಮುಖ್ಯ ವಾಗಿದೆ. ವಿದ್ಯೆಯ ಜೊತೆಗೆ ಸಹಪಠ್ಯ ಚಟುವಟಿಕೆ ಯಲ್ಲಿ ಹೆಚ್ಚು ಭಾಗವಹಿಸಿ ತೃಪ್ತಿ ಯನ್ನು ಪಡೆದುಕೊಳ್ಳಬೇಕು ಎಂದು ಹಿತವಚನವನ್ನು ನೀಡಿದರು.

ಶಾಲಾ ನೃತ್ಯ ತರಬೇತಿ ಗುರುಗಳಾದ ವಿದೂಷಿ ವಿದ್ಯಾ ಠೋಸರ್ ಮಕ್ಕಳಿಗೆ ಶುಭಾಶಯ ಕೋರಿದರು. ಅಭಿನವ ಭಾರತ ಗುರುಕುಲ ಎಸ್ ವ್ಯಾಸಾ ಯುನಿವರ್ಸಿಟಿ ಜುಲೈನಲ್ಲಿ ಆಯೋಜಿಸಿದ್ದ ಭರತನಾಟ್ಯ ಆರಂಭ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿನಿಯರಾದ ಮಾನ್ವಿ, ಯುಕ್ತಿ, ತನ್ವಿ, ಸಂಚಯಾ,ಅಧ್ವಿಕಾ ಇವರಿಗೆ ಕಾರ್ಯಕ್ರಮದಲ್ಲಿ ಅಂಕ ಪಟ್ಟಿ ವಿತರಣೆ ಮಾಡಿ ಅಭಿನಂದನೆ ಸಲ್ಲಿಸಲಾಯಿತು.

ಸಂಗೀತ ತರಬೇತಿ ನೀಡಿದ ಗುರು ಸುಗುಣ ವಿ. ಕೆ. ಆಚಾರ್ಯ ರವರು ಮಕ್ಕಳಿಗೆ ಶುಭಾಶಯ ಕೋರಿ ಪೋಷಕರ ಪಾತ್ರವನ್ನು ವಿವರಿಸಿದರು. ಮುಖ್ಯಶಿಕ್ಷಕಿ ಪರಿಮಳ ಎಂ ವಿ ರವರು ಮಾರ್ಗದರ್ಶನ ನೀಡಿದರು.

ವೇದಿಕೆಯಲ್ಲಿ ನೃತ್ಯ ಹಾಗೂ ಸಂಗೀತ ಉಸ್ತುವಾರಿ ಶಿಕ್ಷಕಿ ಅಮೃತ ವಿ ಶೆಟ್ಟಿ ವಿಧ್ಯಾರ್ಥಿಗಳಿಗೆ ಅಭಿನಯದ ಮಹತ್ವವಿವರಿಸಿದರು. ಕು. ಅಧ್ವಿಕಾ ಹಾಗೂ ಕು. ಅದಿತಿ ಕಾರ್ಯಕ್ರಮ ನಿರೂಪಿಸಿ, ಕು. ಸಾಕ್ಷಿ ಸ್ವಾಗತಿಸಿ ,ಕು. ರಿಷಿಕಾ ವಂದಿಸಿದರು. ಕು. ಪೂರ್ಣಶ್ರೀ ಅತಿಥಿಗಳ ಪರಿಚಯ ಮಾಡಿದರು.

Related posts

ನೆರಿಯ, ಕೊಕ್ಕಡದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ನಾಯಕರು

Suddi Udaya

ತುಮಕೂರು ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ತುಮಕೂರು ಜಿಲ್ಲಾ ಎಡಿಷನ್ ಎಸ್ಪಿ ಯವರನ್ನು ಬೇಟಿ ಮಾಡಿ ಪ್ರಕರಣದ ಬಗ್ಗೆ ಮಾಹಿತಿ ಪಡೆದ ರಕ್ಷಿತ್ ಶಿವರಾಂ

Suddi Udaya

ನ್ಯಾಯತರ್ಪು: ಜಾರಿಗೆಬೈಲು ಮಸೀದಿ ಬಳಿ ತಂಡಗಳ ನಡುವೆ ಹಲ್ಲೆ: ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ರಾಜ್ಯಮಟ್ಟದ ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

Suddi Udaya

ಉಜಿರೆ ಮಹಿಳಾ ಜ್ಞಾನವಿಕಾಸ ಕೇಂದ್ರದಲ್ಲಿ ಬೀದಿ ನಾಟಕ

Suddi Udaya

ತೋಟತ್ತಾಡಿ : ಯಾಂತ್ರಿಕೃತ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya
error: Content is protected !!