26.9 C
ಪುತ್ತೂರು, ಬೆಳ್ತಂಗಡಿ
April 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪುತ್ತೂರುವರದಿ

ಎ.16-19: ಪುತ್ತೂರು-‘ಸುಬ್ಬಜ್ಜನ ಮನೆಯಲ್ಲಿ ವಸತಿಯುತ ಬೇಸಿಗೆ ಶಿಬಿರ’

ಪುತ್ತೂರು:- ದಕ್ಷಿಣ ಕನ್ನಡ ಜಿಲ್ಲೆ, ಪುತ್ತೂರು ತಾಲೂಕಿನ ತಿಂಗಳಾಡಿ ಎಂಬಲ್ಲಿ ನಡೆಯುವ ರಾಜ್ಯಮಟ್ಟದ ‘ಸುಬ್ಬಜ್ಜನ ಮನೆಯಲ್ಲಿ ವಸತಿಯುತ ಬೇಸಿಗೆ ಶಿಬಿರ’ವನ್ನು ಈ ಬಾರಿ ಏ.16 ರಿಂದ 19 ರ ವರೆಗೆ ನಡೆಸಲಾಗುತ್ತಿದೆ. ಕಾಡಿನ ರಹಸ್ಯ ತಿಳಿಯುವಿಕೆಯ ಜೊತೆಗೆ ಟ್ರೆಷರ್ ಹಂಟ್, ವರ್ಲಿ ಆರ್ಟ್, ನೀರಾಟ, ಗೋವು ಮೇವು, ಗೋ ಪೂಜೆ, ನಿತ್ಯ ಪೂಜೆ, ರಾಮಾಯಣ ದೃಶ್ಯ ಕಾವ್ಯ, ಭಗವದ್ ಗೀತೆ ಜೊತೆಗೆ ಜೀವನ ಕೌಶಲ್ಯಗಳನ್ನು ತಿಳಿಸುವ ಹತ್ತು ಹಲವು ಕುತೂಹಲಕಾರಿ ಮನರಂಜನಾ ಆಟಗಳನ್ನು ಜೋಡಿಸಿಕೊಳ್ಳಲಾಗಿದೆ. ಆಕಾಶ ವೀಕ್ಷಣೆ-ನಿದ್ರೆ, ರಂಗೋಲಿ, ಸೌದೆ ಒಲೆ ಅಡಿಗೆ ಕಲಿಕೆ, ಗೆರಟೆ ಚಿತ್ರ, ವ್ಯವಹಾರದ ಪಾಠದ ಜೊತೆ ಮಕ್ಕಳ ನಿತ್ಯ ಕರ್ಮಗಳ ಅಭ್ಯಾಸವು ಸಾಧ್ಯವಾಗುತ್ತಿದೆ.

ಇದರ ಸಂಪೂರ್ಣ ನಿರ್ವಹಣೆಯ ರಾಮಕೃಷ್ಣ ಮಠದ ಭಕ್ತರು ಹಾಗೂ ಮನಃಶಾಸ್ತ್ರಜ್ಞರಾದ ಲಕ್ಷ್ಯ ಸಂಸ್ಥೆಯ ಸಂಸ್ಥಾಪಕ, ಶ್ರೀ ದುರ್ಗಾ ಪರಮೇಶ್ವರ ಭಟ್ ಇವರು ವಹಿಸಿಕೊಂಡಿರುತ್ತಾರೆ. ಇತ್ತೀಚಿನ ದಿನಗಳಲ್ಲಿ ಪ್ರಕೃತಿ ಜೊತೆಗಿನ ಸಂಪರ್ಕ ಶಾಲಾ ಮಕ್ಕಳಿಗೆ ಕಡಿತವಾಗುತ್ತಿರುವುದರಿಂದ ಸುಬ್ಬಜ್ಜನ ಮನೆ ಶಿಬಿರವು ಮಕ್ಕಳಿಗೆ ಪ್ರಕೃತಿ ಒಡಲಿನ ಅವಶ್ಯಕತೆಯನ್ನು ಹಾಗೂ ಅಗಾಧತೆಯನ್ನು ತಿಳಿಸುತ್ತದೆ. ಮೊದಲು ನೋಂದಾಯಿಸಿಕೊಳ್ಳುವ ಆಸಕ್ತ 30 ಮಕ್ಕಳಿಗೆ ಅವಕಾಶವನ್ನು ನೀಡಲಾಗುತ್ತಿದೆ. ದೂರವಾಣಿ ಸಂಖ್ಯೆ 9740645095 / 9663826972 ಕರೆ ಮಾಡುವುದರ ಮೂಲಕ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Related posts

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಅಬಲೆಯರ ಪುನರ್ವಸತಿ ಕೇಂದ್ರ “ಸೇವಾಶ್ರಮ”ದಲ್ಲಿ ಪ್ರಧಾನಿ ನರೇಂದ್ರ ಮೋದಿರವರ ಹುಟ್ಟುಹಬ್ಬ ಆಚರಣೆ

Suddi Udaya

ಮುಂಡೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ: ಶಾಲೆಗೆ ಕೊಡುಗೆ ನೀಡಿದ ದಾನಿಗಳಿಗೆ ಗೌರವಾರ್ಪಣೆ

Suddi Udaya

ಪ್ರಬಂಧ ಸ್ಪರ್ಧೆ: ಕುಂಭ ಶ್ರೀ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ನಾರಾವಿಯಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿಗೆ ಲಗ್ಗೆ ಇಟ್ಟ ಅತ್ಯಾಧುನಿಕ ‘ಫೋರ್ಸ್ ಅರ್ಬಾನಿಯಾ’-ಐಷಾರಾಮಿ ಪ್ರಯಾಣದ ಹೊಸ ಪರ್ವ ಆರಂಭ

Suddi Udaya

ಗುರುವಾಯನಕೆರೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ.

Suddi Udaya
error: Content is protected !!