24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪುತ್ತೂರುವರದಿ

ಎ.16-19: ಪುತ್ತೂರು-‘ಸುಬ್ಬಜ್ಜನ ಮನೆಯಲ್ಲಿ ವಸತಿಯುತ ಬೇಸಿಗೆ ಶಿಬಿರ’

ಪುತ್ತೂರು:- ದಕ್ಷಿಣ ಕನ್ನಡ ಜಿಲ್ಲೆ, ಪುತ್ತೂರು ತಾಲೂಕಿನ ತಿಂಗಳಾಡಿ ಎಂಬಲ್ಲಿ ನಡೆಯುವ ರಾಜ್ಯಮಟ್ಟದ ‘ಸುಬ್ಬಜ್ಜನ ಮನೆಯಲ್ಲಿ ವಸತಿಯುತ ಬೇಸಿಗೆ ಶಿಬಿರ’ವನ್ನು ಈ ಬಾರಿ ಏ.16 ರಿಂದ 19 ರ ವರೆಗೆ ನಡೆಸಲಾಗುತ್ತಿದೆ. ಕಾಡಿನ ರಹಸ್ಯ ತಿಳಿಯುವಿಕೆಯ ಜೊತೆಗೆ ಟ್ರೆಷರ್ ಹಂಟ್, ವರ್ಲಿ ಆರ್ಟ್, ನೀರಾಟ, ಗೋವು ಮೇವು, ಗೋ ಪೂಜೆ, ನಿತ್ಯ ಪೂಜೆ, ರಾಮಾಯಣ ದೃಶ್ಯ ಕಾವ್ಯ, ಭಗವದ್ ಗೀತೆ ಜೊತೆಗೆ ಜೀವನ ಕೌಶಲ್ಯಗಳನ್ನು ತಿಳಿಸುವ ಹತ್ತು ಹಲವು ಕುತೂಹಲಕಾರಿ ಮನರಂಜನಾ ಆಟಗಳನ್ನು ಜೋಡಿಸಿಕೊಳ್ಳಲಾಗಿದೆ. ಆಕಾಶ ವೀಕ್ಷಣೆ-ನಿದ್ರೆ, ರಂಗೋಲಿ, ಸೌದೆ ಒಲೆ ಅಡಿಗೆ ಕಲಿಕೆ, ಗೆರಟೆ ಚಿತ್ರ, ವ್ಯವಹಾರದ ಪಾಠದ ಜೊತೆ ಮಕ್ಕಳ ನಿತ್ಯ ಕರ್ಮಗಳ ಅಭ್ಯಾಸವು ಸಾಧ್ಯವಾಗುತ್ತಿದೆ.

ಇದರ ಸಂಪೂರ್ಣ ನಿರ್ವಹಣೆಯ ರಾಮಕೃಷ್ಣ ಮಠದ ಭಕ್ತರು ಹಾಗೂ ಮನಃಶಾಸ್ತ್ರಜ್ಞರಾದ ಲಕ್ಷ್ಯ ಸಂಸ್ಥೆಯ ಸಂಸ್ಥಾಪಕ, ಶ್ರೀ ದುರ್ಗಾ ಪರಮೇಶ್ವರ ಭಟ್ ಇವರು ವಹಿಸಿಕೊಂಡಿರುತ್ತಾರೆ. ಇತ್ತೀಚಿನ ದಿನಗಳಲ್ಲಿ ಪ್ರಕೃತಿ ಜೊತೆಗಿನ ಸಂಪರ್ಕ ಶಾಲಾ ಮಕ್ಕಳಿಗೆ ಕಡಿತವಾಗುತ್ತಿರುವುದರಿಂದ ಸುಬ್ಬಜ್ಜನ ಮನೆ ಶಿಬಿರವು ಮಕ್ಕಳಿಗೆ ಪ್ರಕೃತಿ ಒಡಲಿನ ಅವಶ್ಯಕತೆಯನ್ನು ಹಾಗೂ ಅಗಾಧತೆಯನ್ನು ತಿಳಿಸುತ್ತದೆ. ಮೊದಲು ನೋಂದಾಯಿಸಿಕೊಳ್ಳುವ ಆಸಕ್ತ 30 ಮಕ್ಕಳಿಗೆ ಅವಕಾಶವನ್ನು ನೀಡಲಾಗುತ್ತಿದೆ. ದೂರವಾಣಿ ಸಂಖ್ಯೆ 9740645095 / 9663826972 ಕರೆ ಮಾಡುವುದರ ಮೂಲಕ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Related posts

ಮೇಲಂತಬೆಟ್ಟು: ಕಜೆ ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಜೂ.30: ಕೌಕ್ರಾಡಿ ಶಾಲಾ ಮುಖ್ಯ ಶಿಕ್ಷಕಿ ಜೆಸಿಂತಾ ಡಿ ಸೋಜ ಸೇವಾ ನಿವೃತ್ತಿ

Suddi Udaya

ಸ್ನೇಹಮಯಿ ಕೃಷ್ಣ ವಿರುದ್ಧ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ವೆಂಕಪ್ಪ ಕೋಟ್ಯಾನ್ ರಿಂದ ದೂರು

Suddi Udaya

ಜಿಲ್ಲೆಯ ಜನ ಕಾಂಗ್ರೆಸ್‌ನ ಅಭಿವೃದ್ಧಿಯ ರಾಜಕಾರಣಕ್ಕೆ ಬೆಂಬಲ: ಹರೀಶ್ ಕುಮಾರ್

Suddi Udaya

ದಕ್ಷಿಣ ಆಫ್ರಿಕಾದಲ್ಲಿ ಅಂತ್ಯಕ್ರಿಯೆವಾಗಲಿದ್ದ ಲಾಯಿಲದ ದಾಮೋದರ ಗೌಡ ರವರ ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ

Suddi Udaya
error: Content is protected !!