22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪುತ್ತೂರುವರದಿ

ಎ.16-19: ಪುತ್ತೂರು-‘ಸುಬ್ಬಜ್ಜನ ಮನೆಯಲ್ಲಿ ವಸತಿಯುತ ಬೇಸಿಗೆ ಶಿಬಿರ’

ಪುತ್ತೂರು:- ದಕ್ಷಿಣ ಕನ್ನಡ ಜಿಲ್ಲೆ, ಪುತ್ತೂರು ತಾಲೂಕಿನ ತಿಂಗಳಾಡಿ ಎಂಬಲ್ಲಿ ನಡೆಯುವ ರಾಜ್ಯಮಟ್ಟದ ‘ಸುಬ್ಬಜ್ಜನ ಮನೆಯಲ್ಲಿ ವಸತಿಯುತ ಬೇಸಿಗೆ ಶಿಬಿರ’ವನ್ನು ಈ ಬಾರಿ ಏ.16 ರಿಂದ 19 ರ ವರೆಗೆ ನಡೆಸಲಾಗುತ್ತಿದೆ. ಕಾಡಿನ ರಹಸ್ಯ ತಿಳಿಯುವಿಕೆಯ ಜೊತೆಗೆ ಟ್ರೆಷರ್ ಹಂಟ್, ವರ್ಲಿ ಆರ್ಟ್, ನೀರಾಟ, ಗೋವು ಮೇವು, ಗೋ ಪೂಜೆ, ನಿತ್ಯ ಪೂಜೆ, ರಾಮಾಯಣ ದೃಶ್ಯ ಕಾವ್ಯ, ಭಗವದ್ ಗೀತೆ ಜೊತೆಗೆ ಜೀವನ ಕೌಶಲ್ಯಗಳನ್ನು ತಿಳಿಸುವ ಹತ್ತು ಹಲವು ಕುತೂಹಲಕಾರಿ ಮನರಂಜನಾ ಆಟಗಳನ್ನು ಜೋಡಿಸಿಕೊಳ್ಳಲಾಗಿದೆ. ಆಕಾಶ ವೀಕ್ಷಣೆ-ನಿದ್ರೆ, ರಂಗೋಲಿ, ಸೌದೆ ಒಲೆ ಅಡಿಗೆ ಕಲಿಕೆ, ಗೆರಟೆ ಚಿತ್ರ, ವ್ಯವಹಾರದ ಪಾಠದ ಜೊತೆ ಮಕ್ಕಳ ನಿತ್ಯ ಕರ್ಮಗಳ ಅಭ್ಯಾಸವು ಸಾಧ್ಯವಾಗುತ್ತಿದೆ.

ಇದರ ಸಂಪೂರ್ಣ ನಿರ್ವಹಣೆಯ ರಾಮಕೃಷ್ಣ ಮಠದ ಭಕ್ತರು ಹಾಗೂ ಮನಃಶಾಸ್ತ್ರಜ್ಞರಾದ ಲಕ್ಷ್ಯ ಸಂಸ್ಥೆಯ ಸಂಸ್ಥಾಪಕ, ಶ್ರೀ ದುರ್ಗಾ ಪರಮೇಶ್ವರ ಭಟ್ ಇವರು ವಹಿಸಿಕೊಂಡಿರುತ್ತಾರೆ. ಇತ್ತೀಚಿನ ದಿನಗಳಲ್ಲಿ ಪ್ರಕೃತಿ ಜೊತೆಗಿನ ಸಂಪರ್ಕ ಶಾಲಾ ಮಕ್ಕಳಿಗೆ ಕಡಿತವಾಗುತ್ತಿರುವುದರಿಂದ ಸುಬ್ಬಜ್ಜನ ಮನೆ ಶಿಬಿರವು ಮಕ್ಕಳಿಗೆ ಪ್ರಕೃತಿ ಒಡಲಿನ ಅವಶ್ಯಕತೆಯನ್ನು ಹಾಗೂ ಅಗಾಧತೆಯನ್ನು ತಿಳಿಸುತ್ತದೆ. ಮೊದಲು ನೋಂದಾಯಿಸಿಕೊಳ್ಳುವ ಆಸಕ್ತ 30 ಮಕ್ಕಳಿಗೆ ಅವಕಾಶವನ್ನು ನೀಡಲಾಗುತ್ತಿದೆ. ದೂರವಾಣಿ ಸಂಖ್ಯೆ 9740645095 / 9663826972 ಕರೆ ಮಾಡುವುದರ ಮೂಲಕ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Related posts

ಮಡಂತ್ಯಾರು ವಿಶ್ವ ಹಿಂದೂ ಪರಿಷತ್ ವತಿಯಿಂದ ಶ್ರೀರಾಮೋತ್ಸವ

Suddi Udaya

ಡಿ.20: ಕರಾಯದಲ್ಲಿ ಹೆಣ್ಣು ಕರುಗಳ ಪ್ರದರ್ಶನ

Suddi Udaya

ತುಂಬಿ ಹರಿಯುತ್ತಿರುವ ಶಿಶಿಲದ ಕಪಿಲ ನದಿ: ಕಿಂಡಿ ಅಣೆಕಟ್ಟಿನಲ್ಲಿ ನೀರಿನೊಂದಿಗೆ ತೇಲಿ ಬಂದ ಮರಗಳು: ಗ್ರಾಮಸ್ಥರಿಂದ ಮರ ತೆರವು

Suddi Udaya

ಲಾಯಿಲ ಜಿ.ಪಂ. ವ್ಯಾಪ್ತಿಯ ಪ್ರದೇಶಗಳಲ್ಲಿ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಬಿರುಸಿನ ಮತಯಾಚನೆ

Suddi Udaya

ಗೇರುಕಟ್ಟೆ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಕಿಟ್ ವಿತರಣೆ

Suddi Udaya

ಕನ್ಯಾಡಿ || : ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya
error: Content is protected !!