September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪುತ್ತೂರುವರದಿ

ಎ.16-19: ಪುತ್ತೂರು-‘ಸುಬ್ಬಜ್ಜನ ಮನೆಯಲ್ಲಿ ವಸತಿಯುತ ಬೇಸಿಗೆ ಶಿಬಿರ’

ಪುತ್ತೂರು:- ದಕ್ಷಿಣ ಕನ್ನಡ ಜಿಲ್ಲೆ, ಪುತ್ತೂರು ತಾಲೂಕಿನ ತಿಂಗಳಾಡಿ ಎಂಬಲ್ಲಿ ನಡೆಯುವ ರಾಜ್ಯಮಟ್ಟದ ‘ಸುಬ್ಬಜ್ಜನ ಮನೆಯಲ್ಲಿ ವಸತಿಯುತ ಬೇಸಿಗೆ ಶಿಬಿರ’ವನ್ನು ಈ ಬಾರಿ ಏ.16 ರಿಂದ 19 ರ ವರೆಗೆ ನಡೆಸಲಾಗುತ್ತಿದೆ. ಕಾಡಿನ ರಹಸ್ಯ ತಿಳಿಯುವಿಕೆಯ ಜೊತೆಗೆ ಟ್ರೆಷರ್ ಹಂಟ್, ವರ್ಲಿ ಆರ್ಟ್, ನೀರಾಟ, ಗೋವು ಮೇವು, ಗೋ ಪೂಜೆ, ನಿತ್ಯ ಪೂಜೆ, ರಾಮಾಯಣ ದೃಶ್ಯ ಕಾವ್ಯ, ಭಗವದ್ ಗೀತೆ ಜೊತೆಗೆ ಜೀವನ ಕೌಶಲ್ಯಗಳನ್ನು ತಿಳಿಸುವ ಹತ್ತು ಹಲವು ಕುತೂಹಲಕಾರಿ ಮನರಂಜನಾ ಆಟಗಳನ್ನು ಜೋಡಿಸಿಕೊಳ್ಳಲಾಗಿದೆ. ಆಕಾಶ ವೀಕ್ಷಣೆ-ನಿದ್ರೆ, ರಂಗೋಲಿ, ಸೌದೆ ಒಲೆ ಅಡಿಗೆ ಕಲಿಕೆ, ಗೆರಟೆ ಚಿತ್ರ, ವ್ಯವಹಾರದ ಪಾಠದ ಜೊತೆ ಮಕ್ಕಳ ನಿತ್ಯ ಕರ್ಮಗಳ ಅಭ್ಯಾಸವು ಸಾಧ್ಯವಾಗುತ್ತಿದೆ.

ಇದರ ಸಂಪೂರ್ಣ ನಿರ್ವಹಣೆಯ ರಾಮಕೃಷ್ಣ ಮಠದ ಭಕ್ತರು ಹಾಗೂ ಮನಃಶಾಸ್ತ್ರಜ್ಞರಾದ ಲಕ್ಷ್ಯ ಸಂಸ್ಥೆಯ ಸಂಸ್ಥಾಪಕ, ಶ್ರೀ ದುರ್ಗಾ ಪರಮೇಶ್ವರ ಭಟ್ ಇವರು ವಹಿಸಿಕೊಂಡಿರುತ್ತಾರೆ. ಇತ್ತೀಚಿನ ದಿನಗಳಲ್ಲಿ ಪ್ರಕೃತಿ ಜೊತೆಗಿನ ಸಂಪರ್ಕ ಶಾಲಾ ಮಕ್ಕಳಿಗೆ ಕಡಿತವಾಗುತ್ತಿರುವುದರಿಂದ ಸುಬ್ಬಜ್ಜನ ಮನೆ ಶಿಬಿರವು ಮಕ್ಕಳಿಗೆ ಪ್ರಕೃತಿ ಒಡಲಿನ ಅವಶ್ಯಕತೆಯನ್ನು ಹಾಗೂ ಅಗಾಧತೆಯನ್ನು ತಿಳಿಸುತ್ತದೆ. ಮೊದಲು ನೋಂದಾಯಿಸಿಕೊಳ್ಳುವ ಆಸಕ್ತ 30 ಮಕ್ಕಳಿಗೆ ಅವಕಾಶವನ್ನು ನೀಡಲಾಗುತ್ತಿದೆ. ದೂರವಾಣಿ ಸಂಖ್ಯೆ 9740645095 / 9663826972 ಕರೆ ಮಾಡುವುದರ ಮೂಲಕ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Related posts

ಉಜಿರೆಯ ಎಸ್. ಡಿ. ಎಂ. ಡಿ. ಎಡ್ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಮತ್ತು ವಿಷಯವಾರು ಸಂಘಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ನಾರಾವಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಬಯಲಾಟ ಸಮಿತಿ ನಾವರ ವತಿಯಿಂದ ನಾಗಾರತಿ ಯಕ್ಷಗಾನ ಪ್ರದರ್ಶನ

Suddi Udaya

ಅಕ್ರಮ ಇಸ್ಪೀಟು ಅಡ್ಡೆಗೆ ಪೊಲೀಸ್ ದಾಳಿ: ನಗದು ಹಾಗೂ ಸೊತ್ತುಗಳ ಸಹಿತ 23 ಮಂದಿ ವಶ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ನೈತಿಕ ಶಿಕ್ಷಣ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!