May 6, 2026
ಪ್ರಮುಖ ಸುದ್ದಿಬೆಳ್ತಂಗಡಿ

ಜೀವಿತಾವಧಿಯಲ್ಲಿ ಹೇಗೆ ಬದುಕಿದ್ದಾನೆ ಎಂಬುದು ಬಹಳ ಮುಖ್ಯ: ತಿಮ್ಮಣ್ಣರಸ ಡಾ. ಪದ್ಮಪ್ರಸಾದ್ ಅಜಿಲ – ತಾ.ಪಂ ವಿಶ್ರಾಂತ ಅಧೀಕ್ಷಕ‌ ಪ್ರಶಾಂತ್ ಬಳಂಜ ಅವರಿಂದ ವಿಶಿಷ್ಟ ರೀತಿಯ ಕೃತಜ್ಞತಾ ಕಾರ್ಯಕ್ರಮ

ಬೆಳ್ತಂಗಡಿ: ನಮ್ಮ ಆಯುಷ್ಯದಲ್ಲಿ ಜೀವಿಸುವುದು ಮುಖ್ಯವಲ್ಲ. ಹೇಗೆ ಬದುಕಿದ್ದೇವೆ ಎಂಬುದು ಬಹಳ ಮುಖ್ಯ ಎಂದು ಅಳದಂಗಡಿ ಅಜಿಲ‌ಸೀಮೆಯ ತಿಮ್ಮಣ್ಣರಸ ಡಾ. ಪದ್ಮಪ್ರಸಾದ್ ಅಜಿಲ ಹೇಳಿದರು.
ತಾ.ಪಂ ವಿಶ್ರಾಂತ ಅಧೀಕ್ಷಕ‌ ಪ್ರಶಾಂತ್ ಬಳಂಜ ಅವರಿಂದ ಎಸ್.ಡಿ.ಎಂ ಕಲಾ ಭವನದಲ್ಲಿ ಎ.4 ರಂದು ನಡೆದ ವಿಶಿಷ್ಟ ರೀತಿಯ ಕೃತಜ್ಞತಾ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ಪ್ರಶಾಂತ್ ಬಳಂಜ ಅವರು ಉತ್ತಮ‌ ಬರಹಗಾರರಾಗಿದ್ದು, ಅವರು ಮಾಧ್ಯಮದಲ್ಲಿ ನಮ್ಮ‌ಅಳದಂಗಡಿ ಅರಮನೆಯನ್ನು ಸಮಗ್ರವಾಗಿ ಪರಿಚಯಿಸಿದ್ದರು. ಪ್ರಶಾಂತ್ ಅವರ ಅಜ್ಜ, ತಂದೆ ಹಾಗೂ ಅವರು ಮೂರು ತಲೆಮಾರಿನ ಸಂಬಂಧವಿದೆ. ಸರಕಾರಿ ಹುದ್ದೆ ಕಷ್ಟದಾಯಕ ಆದರೆ ಪ್ರಶಾಂತ್ ಅವರು ಕಷ್ಟಕ್ಕೆ ಸಿಲುಕಿದವರಲ್ಲ. ಅಂತಹಾ ರೀತಿಯಲ್ಲಿ ಕೆಲಸ ಮಾಡಿದ್ದಾರೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉದಯವಾಣಿಯ ಉಪ ಮುಖ್ಯ ಸಂಪಾದಕ ಲಕ್ಷ್ಮೀ ಮಚ್ಚಿನ ವಹಿಸಿ ಮಾತನಾಡಿ, ಸಮಾಜದಿಂದ ತನಗೆ ಸಿಕ್ಕಿದ್ದನ್ನು ಮರಳಿಸುವ ಕಾರ್ಯಕ್ರಮವಾಗಿ ಈ ಸಮಾರಂಭ ಗೋಚರಿಸುತ್ತಿದೆ. ಸರಕಾರಿ ಅಧಿಕಾರಿಗಳು ಸಾರ್ವಜನಿಕ ಚಟುವಟಿಕೆಗಳಲ್ಲಿ ಇರಬಾರದು ಎಂಬ ನಿರ್ಬಂಧವಿದೆ. ಆದರೆ ಸರಕಾರಿ ಉದ್ಯೋಗಿ ಕೂಡ ಸಮಾಜ ಸೇವೆ ಮಾಡಬಹುದು ಎಂಬುದನ್ನು ಪ್ರಶಾಂತ್ ಬಳಂಜ ತೋರಿಸಿಕೊಟ್ಟಿದ್ದಾರೆ ಎಂದರು.

ಸಮಾರಂಭದಲ್ಲಿ ತಹಶಿಲ್ದಾರ್ ಪೃಥ್ವಿ ಸಾನಿಕಮ್, ಮೈಸೂರು ಅರಮನೆಯ ತಾಂತ್ರಿಕ ವಿಭಾಗದ ನಿವೃತ ಮುಖ್ಯಸ್ಥ ರಾಜಶೇಖರ ಗೌಡ, ಹೈಕೋರ್ಟ್ ಹಿರಿಯ ನ್ಯಾಯವಾದಿ ಕೆ‌‌ ಶಿವಪ್ರಕಾಶ್ ಹೆಗ್ಡೆ, ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಭವಾನಿ ಶಂಕರ್, ಮೂಡಬಿದ್ರೆಯ ತಾ.ಪಂ ನಿವೃತ್ತ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿಶೇಷ ಕರ್ತವ್ಯಕ್ಕೆ ಕೃತಜ್ಞತಾ ಪೂರ್ವಕ ಸನ್ಮಾನ:
ಬಳಂಜ ಮಂಡಲ ಪಂಚಾಯತ್ ಮಾಜಿ ಅಧ್ಯಕ್ಷ ವಸಂತ ಸಾಲಿಯಾನ್, ಪಿಡಿಒ ಗಳಾದ ರಾಜಶೇಖರ ರೈ ಪಡಂಗಡಿ, ಮೋಹನ ಬಂಗೇರ ಮತ್ತು ಸಫಾನಾ, ಸುದ್ದಿ ಉದಯ ಪತ್ರಿಕೆಯ ಸಂಪಾದಕ ಬಿ.ಎಸ್ ಕುಲಾಲ್ , ಸುದ್ದಿ ಬಿಡುಗಡೆಯ ವ್ಯವಸ್ಥಾಪಕ ಮಂಜುನಾಥ ರೈ, , ಗ್ರಾ.ಪಂ ನೌಕರರ ಶ್ರೇಯೋಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ದೇವಿಪ್ರಸಾದ್ ಬೊಳ್ಮ, ಜಿಲ್ಲಾಧ್ಯಕ್ಷ ಸತೀಶ್ ನಾರಾವಿ, ತಾ. ಅಧ್ಯಕ್ಷ ರುಕೇಶ್, ತಾ.ಪಂ ವಿಷಯ ನಿರ್ವಾಹಕ ಮಂಜು, ವಸತಿ ಯೋಜನೆಯ ನೋಡೆಲ್ ಅಧಿಕಾರಿ ಪ್ರಶಾಂತ್ ಇವರನ್ನು ಪ್ರಶಾಂತ್ ಬಳಂಜ ಅವರು ವಿಶೇಷ ರೀತಿಯಲ್ಲಿ ಸನ್ಮಾನಿಸಿ ಗೌರವಿಸಿದರು.

ಕಾರ್ಯಕ್ರಮದ‌ ರುವಾರಿ, ತಾ.ಪಂ ನಿವೃತ್ತ ಅಧೀಕ್ಷಕ ಪ್ರಶಾಂತ ಬಳಂಜ ಸ್ವಾಗತಿಸಿ‌ ಪ್ರಸ್ತಾವನೆಗೈದರು.
ಶಿಕ್ಷಕ ಅರವಿಂದ ಚೊಕ್ಕಾಡಿ ಕಾರ್ಯಕ್ರಮ ನಿರೂಪಿಸಿದರು.

ಅನೇಕ ಸವಾಲುಗಳನ್ನು ಎದುರಿಸಿದ್ದೇನೆ:

ತಮ್ಮ ಸೇವಾವಧಿಯ ಕೆಲವು ಅನುಭವಗಳನ್ನು ಹಂಚಿಕೊಂಡ ಪ್ರಶಾಂತ್ ಬಳಂಜ, ಶಾಸಕರು ಹೇಗೆ ಕೆಲಸ ಮಾಡಬೇಕು ಎಂಬುದಕ್ಕೆ ವಸಂತ ಬಂಗೇರ ಅವರನ್ನು ಸಮೀಪದಿಂದ ನೋಡಿ ನಾನು ಕಲಿತಿದ್ದೇನೆ. ಅವರು ಪತ್ರ ಬರೆದರೆ ಬಹುತೇಕ ಎಲ್ಲಾ ಕೆಲಸಗಳು ಆಗುತ್ತಿತ್ತು. ಅಷ್ಟು ಪ್ರಭಾವವಿತ್ತು. ವಿಧಾನ ಸೌಧಕ್ಕೆ ಅವರ ಹೆಸರು ಹೇಳಿದರೆ ಪಾಸ್ ಕೂಡ ಬೇಕಾಗಿರಲಿಲ್ಲ ಎಂದರು.
ನಾನು ಕರ್ತವ್ಯದಲ್ಲಿರುವ ವೇಳೆ ಅನೇಕ ಸವಾಲುಗಳನ್ನು ಎದುರಿಸಿದ್ದೇನೆ. ಅದನ್ನು ಎಲ್ಲವನ್ನೂ ಬಹಿರಂಗವಾಗಿ ಹೇಳಿಕೊಳ್ಳಲು ಸಾಧ್ಯವಿಲ್ಲ. 2011 ರಲ್ಲಿ ಅವಧಿಯಲ್ಲಿ ತಾಲೂಕಿಗೆ 4 ಸಾವಿರ ಮನೆಗಳು ಮಂಜೂರಾಗಿದ್ದವರು. ಅದಕ್ಕಾಗಿ ನಾನು ಕೆಲಸ ಮಾಡಿದ್ದೆ ಎಂದು ಒಂದು ವಿಚಾರವನ್ನು ಸಭೆಯಲ್ಲಿ ಉಲ್ಲೇಖಿಸಿದರು.

Related posts

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅತ್ಯುತ್ತಮ ಸಾಧನೆ-ಪ್ರಸಕ್ತ ಸಾಲಿನಲ್ಲಿ ರೂ 326 ಕೋಟಿ ಠೇವಣಿ,ರೂ.269 ಕೋಟಿ ಸಾಲ,ರೂ.70 ಕೋಟಿ ಹೂಡಿಕೆ,ರೂ.5.85 ಕೋಟಿ ಲಾಭ

Suddi Udaya

ಕನ್ಯಾಡಿ I: ನೇರೊಳ್‌ಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತ್ರಂತ್ರ್ಯೋತ್ಸವ ಆಚರಣೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಉಜಿರೆ, ಬೆಳಾಲು, ಮಾಯಾ, ಕೊಲ್ಪಾಡಿ ಗ್ರಾಮದ ಭಕ್ತಾಧಿಗಳಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಕೊಕ್ಕಡ: ಶ್ರೀರಾಮ ಸೇವಾ ಟ್ರಸ್ಟ್ ಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಜ.24-30: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದ.ಕ. ಜಿಲ್ಲೆಯ ಸಿ.ಬಿ.ಎಸ್.ಇ ಅಂತರ ಶಾಲೆಗಳ ಐಕ್ಸ್ (AICS) ಸಾಂಸ್ಕೃತಿಕ ಸ್ಪರ್ಧೆ

Suddi Udaya
error: Content is protected !!