May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೋಟತ್ತಾಡಿ ಗ್ರಾಮದ ದಡ್ಡುಗೆ ಲೋಕೋಪಯೋಗಿ ಸಚಿವರ ಭೇಟಿ: ಸ್ಥಳೀಯರ ಅಹವಾಲು ಸ್ವೀಕಾರ

ಬೆಳ್ತಂಗಡಿ: ತಾಲೂಕಿನ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಇವರ ಮನವಿ ಮೇರೆಗೆ ತೋಟತ್ತಾಡಿ ಗ್ರಾಮದ ದಡ್ಡುಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸ್ಥಳೀಯರು ಸಚಿವರಲ್ಲಿ ತೋಟತ್ತಾಡಿ ಗ್ರಾಮದ ದಟ್ಟು ಪರಿಸರದ ನಿವಾಸಿಗಳು ತಮ್ಮ ಯಾವುದೇ ಕೆಲಸ ಕಾರ್ಯಗಳಿಗೆ ಜಾಕೆಡಿಯಿಂದ ದುಡ್ಡು ಮೂಲಕ ಹರಿವ ನದಿಯನ್ನು ದಾಟಿ ಹೋಗಬೇಕಾಗುತ್ತದೆ. ಮರದ ತಾತ್ಕಾಲಿಕ ಕಾಲು ಸಂಕ ಇದ್ದರೂ ಮಳೆಗಾಲದಲ್ಲಿ ಅದರಲ್ಲಿ ಹೋಗೋದು ಅಪಾಯಕಾರಿಯಾಗುತ್ತದೆ. ಹಾಗಾಗಿ ಇದರಲ್ಲಿ ಶಾಲಾ ಮಕ್ಕಳು ಕಾಲೇಜು ವಿದ್ಯಾರ್ಥಿಗಳು ಇದರಲ್ಲಿ ಹೋಗಲು ಭಯಪಡುತ್ತಾರೆ. ಇಲ್ಲಿ ಕಿರು ಸೇತುವೆಯ ಬಗ್ಗೆ ಸಚಿವರಲ್ಲಿ ಸ್ಥಳೀಯರು ಬೇಡಿಕೆಯನ್ನು ಇಟ್ಟರು ಸಚಿವರು ಪೂರಕವಾಗಿ ಸ್ಪಂದಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ, ಯಶೋಧರ ಚಾರ್ಮಾಡಿ, ಪ್ರದೀಪ್ ಕೆ ಸಿ, ಅಶ್ರಫ್ ನೆರಿಯ, ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು

Related posts

ಬೆಳ್ತಂಗಡಿ ತಾಲೂಕು ಕಚೇರಿಗೆ ಶಾಸಕ ಹರೀಶ್ ಪೂಂಜ ದಿಢೀರ್ ಭೇಟಿ

Suddi Udaya

ತಾಲೂಕು ಮಟ್ಟದ ಸ್ಪರ್ಧೆ: ಉಜಿರೆ ಎಸ್ ಡಿ ಎಂ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಂಗಳೂರು ರುಕ್ಸ್ ವೈಯರ್ಲೆಸ್ ಪ್ರೈ.ಲಿ. ನ ಸಿ.ಎಸ್.ಆರ್ ಅನುದಾನದಿಂದ ಸೇವಾಧಾಮದಲ್ಲಿ ಸೋಲಾರ್ ಅಳವಡಿಕೆ

Suddi Udaya

ಅಳದಂಗಡಿ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 62.6 ಮತದಾನ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!