August 10, 2026
ಧಾರ್ಮಿಕಪ್ರಮುಖ ಸುದ್ದಿ

ಬೆಳ್ತಂಗಡಿ ಪಟ್ಟಣದಲ್ಲಿ ಸರ್ವಿಸ್ ರಸ್ತೆ ರದ್ದುಪಡಿಸಲು ಲೋಕೋಪಯೋಗಿ ಇಲಾಖೆಯ ಸಚಿವರಿಗೆ ವರ್ತಕರ ಸಂಘದಿಂದ ಮನವಿ

ಬೆಳ್ತಂಗಡಿ: ವರ್ತಕರ ಸಂಘದಿಂದ ಬೆಳ್ತಂಗಡಿ ಪಟ್ಟಣದಲ್ಲಿ ಸರ್ವಿಸ್ ರಸ್ತೆಯಿಂದ ವರ್ತಕರಿಗೆ ಹಾಗೂ ಸಾರ್ವಜನಿಕರಿಗೆ ಅನಾನುಕೂಲತೆ ಬಗ್ಗೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕೆ ಹೊಲಿಯವರನ್ನು ಭೇಟಿ ಮಾಡಿ ತಮ್ಮ ಕಲವಳಗಳನ್ನೂ ವ್ಯಕ್ತಪಡಿಸಿದರು.

ಈಗಾಗಲೇ ಸರ್ವಿಸ್ ರಸ್ತೆ ಸಂಪೂರ್ಣಗೊಂಡ ಸ್ಥಳಗಳಲ್ಲಿ ಹಲವಾರು ಅಂಗಡಿಗಳು ಬಂದ್ ಆಗಿವೆ, ಆಫಘಾತಗಳು ಹಾಗೂ ಟ್ರಾಫಿಕ್ ಜಾಮ್ ಜಾಸ್ತಿಯಾಗುತ್ತಿವೆ. ವಾಹನಗಳನ್ನು ಪಕ್ಕಕ್ಕೆ ಸರಿಸಲು ಸಾಧ್ಯವಾಗುವುದಿಲ್ಲ. ಇದರಿಂದ ಪಟ್ಟಣ ವ್ಯಾಪ್ತಿಯಲ್ಲಿ ವಾಸಿಸುವ ವ್ಯಾಪಾರ ಸಮುದಾಯ ಹಾಗೂ ಸಾರ್ವಜನಿಕರ ಯೋಗ ಕ್ಷೇಮ ಕಾಪಾಡುವ ಸಲುವಾಗಿ ಸೇವಾ ರಸ್ತೆಯನ್ನು ತ್ಯಜಿಸಿ ಏಕ ರಸ್ತೆಯ ಬದಲಿಗೆ ಡ್ಯೂಯೆಲ್ ರಸ್ತೆಯನ್ನು ಆಗಳಗೊಳಿಸಬೇಕಾಗಿ ಚರಂಡಿಯನ್ನು ರಸ್ತೆ ಮಧ್ಯದಿಂದ ರಸ್ತೆಬದಿಗೆ ಹಾಕಲು ವಿನಂತಿಸಿದ್ದಾರೆ.

ಸಚಿವರು ಈ ಬಗ್ಗೆ ಪರಿಶೀಲಿಸಿ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ ಇದಕ್ಕೆ ಅಗತ್ಯವಿರುವುದನ್ನು ಮಾಡುತ್ತೇನೆ ಎಂದು ಭರವಸೆಯನ್ನು ನೀಡಿದ್ದಾರೆ.

ಈ ಸಂದರ್ಭದಲ್ಲಿ ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷರಾದ ರೋನಾಲ್ಡ್ ಲೋಬೊ, ಉಪಾಧ್ಯಕ್ಷ ಶಶಿಧರ್ ಪೈ, ಸದಸ್ಯರಾದ ವಿಲ್ಸನ್ ಗೊನ್ಸಲ್ವಿಸ್, ಶೀತಲ್ ಜೈನ್, ಜೂಡ್ ಲೋಬೊ, ಜೈಸನ್ ಡಿಸೋಜಾ, ಎಂ.ಎಚ್. ಅಬೂಬಕ್ಕರ್, ಶರ್ಮಿಳಾ ಮೋರಸ್, ಲಿಡ್ವಿನ್ ಟೆಲ್ಲಿಸ್, ವಿವೈನ್ ಡಿಸೋಜಾ, ಲಕ್ಷ್ಮಣ್ ಶೆಟ್ಟಿ ಹಾಗೂ ವಾಲ್ಟರ್ ಗೋವಿಯಸ್ ಉಪಸ್ಥಿತರಿದ್ದರು.

Related posts

ಬಳಂಜದಲ್ಲಿ ಗುಡ್ಡ ಕುಸಿತ, ಕುಸಿಯುವ ಭೀತಿಯಲ್ಲಿ ಮನೆ

Suddi Udaya

ನ.24: ಎಂ.ಸಿ.ಸಿ. ಬ್ಯಾಂಕಿನ 18ನೇ ಶಾಖೆ ಬೆಳ್ತಂಗಡಿಯಲ್ಲಿ ಉದ್ಘಾಟನೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ

Suddi Udaya

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya

ಉರುವಾಲು ಪದವು ಶ್ರೀ ಮಹಮ್ಮಾಯಿ ದೇವಿಯ ವಾರ್ಷಿಕ ಗೊಂದೋಳು ಪೂಜೆ

Suddi Udaya

ಸಿಡಿಲು ಮಳೆ: ಶಿಶಿಲ ರವಿ ರವರ ಮನೆಗೆ ಅಪಾರ ಹಾನಿ

Suddi Udaya
error: Content is protected !!