28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ನೃತ್ಯ ಹಾಗೂ ಸಂಗೀತ ಸಮಾರೋಪ

ಧರ್ಮಸ್ಥಳ: ಶ್ರೀ .ಧ .ಮ .ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಸಕ್ತ ವರ್ಷದ ಭರತನಾಟ್ಯ ಹಾಗೂ ಸಂಗೀತ ತರಗತಿಗಳ ಸಮಾರೋಪ ಸಮಾರಂಭ ನೆರವೇರಿತು.

ಮುಖ್ಯ ಅತಿಥಿ ಸಂಗೀತ ಶಿಕ್ಷಕಿ ಕು. ಸುಪ್ರೀತಾ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಅವರು ಮಕ್ಕಳಿಗೆ ಯಾವತ್ತೂ ಶಿಸ್ತು ಎಲ್ಲಾ ಕ್ಷೇತ್ರಗಳಲ್ಲೂ ಬಹಳ ಮುಖ್ಯ ವಾಗಿದೆ. ವಿದ್ಯೆಯ ಜೊತೆಗೆ ಸಹಪಠ್ಯ ಚಟುವಟಿಕೆ ಯಲ್ಲಿ ಹೆಚ್ಚು ಭಾಗವಹಿಸಿ ತೃಪ್ತಿ ಯನ್ನು ಪಡೆದುಕೊಳ್ಳಬೇಕು ಎಂದು ಹಿತವಚನವನ್ನು ನೀಡಿದರು.

ಶಾಲಾ ನೃತ್ಯ ತರಬೇತಿ ಗುರುಗಳಾದ ವಿದೂಷಿ ವಿದ್ಯಾ ಠೋಸರ್ ಮಕ್ಕಳಿಗೆ ಶುಭಾಶಯ ಕೋರಿದರು. ಅಭಿನವ ಭಾರತ ಗುರುಕುಲ ಎಸ್ ವ್ಯಾಸಾ ಯುನಿವರ್ಸಿಟಿ ಜುಲೈನಲ್ಲಿ ಆಯೋಜಿಸಿದ್ದ ಭರತನಾಟ್ಯ ಆರಂಭ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿನಿಯರಾದ ಮಾನ್ವಿ, ಯುಕ್ತಿ, ತನ್ವಿ, ಸಂಚಯಾ,ಅಧ್ವಿಕಾ ಇವರಿಗೆ ಕಾರ್ಯಕ್ರಮದಲ್ಲಿ ಅಂಕ ಪಟ್ಟಿ ವಿತರಣೆ ಮಾಡಿ ಅಭಿನಂದನೆ ಸಲ್ಲಿಸಲಾಯಿತು.

ಸಂಗೀತ ತರಬೇತಿ ನೀಡಿದ ಗುರು ಸುಗುಣ ವಿ. ಕೆ. ಆಚಾರ್ಯ ರವರು ಮಕ್ಕಳಿಗೆ ಶುಭಾಶಯ ಕೋರಿ ಪೋಷಕರ ಪಾತ್ರವನ್ನು ವಿವರಿಸಿದರು. ಮುಖ್ಯಶಿಕ್ಷಕಿ ಪರಿಮಳ ಎಂ ವಿ ರವರು ಮಾರ್ಗದರ್ಶನ ನೀಡಿದರು.

ವೇದಿಕೆಯಲ್ಲಿ ನೃತ್ಯ ಹಾಗೂ ಸಂಗೀತ ಉಸ್ತುವಾರಿ ಶಿಕ್ಷಕಿ ಅಮೃತ ವಿ ಶೆಟ್ಟಿ ವಿಧ್ಯಾರ್ಥಿಗಳಿಗೆ ಅಭಿನಯದ ಮಹತ್ವವಿವರಿಸಿದರು. ಕು. ಅಧ್ವಿಕಾ ಹಾಗೂ ಕು. ಅದಿತಿ ಕಾರ್ಯಕ್ರಮ ನಿರೂಪಿಸಿ, ಕು. ಸಾಕ್ಷಿ ಸ್ವಾಗತಿಸಿ ,ಕು. ರಿಷಿಕಾ ವಂದಿಸಿದರು. ಕು. ಪೂರ್ಣಶ್ರೀ ಅತಿಥಿಗಳ ಪರಿಚಯ ಮಾಡಿದರು.

Related posts

ಸೌತಡ್ಕ ಪರಿಸರದಲ್ಲಿ ಬೀಡು ಬಿಟ್ಟ ಅರಣ್ಯ ಇಲಾಖೆ: ಸುಳ್ಳು ಸುದ್ದಿಗಳಿಗೆ ಕಿವಿ ಕೊಡದಂತೆ ಮನವಿ

Suddi Udaya

ಶಿಬಾಜೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ವಿನೂತನ ಯೋಜನೆ: ಕ್ಷೇತ್ರದಿಂದ ಹೊರಗಿದ್ದರೂ ಪ್ರತಿದಿನದ ಪೂಜೆಯನ್ನು ಯೂಟ್ಯೂಬ್ ಮೂಲಕ ನೇರವಾಗಿ ನೋಡುವ ಅವಕಾಶ

Suddi Udaya

ಪುಂಜಾಲಕಟ್ಟೆ-ಚಾರ್ಮಾಡಿ ಭರದಿಂದ ಸಾಗುತ್ತಿರುವ ಹೆದ್ದಾರಿ ಅಭಿವೃದ್ಧಿ ಕಾಮಗಾರಿ

Suddi Udaya

ಮುಂಬೈ, ಗೋವಾ, ಮಹಾರಾಷ್ಟ ನಬಾರ್ಡ್ ಬ್ಯಾಂಕ್ ಅಧಿಕಾರಿಯವರಿಂದ ಸಿಡ್ಬಿ ಸಾಲ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಘಟಕಕ್ಕೆ ಭೇಟಿ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನದ ಕುರಿತು ಮಾಹಿತಿ ಕಾರ್ಯಕ್ರಮ:

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!