May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ನೃತ್ಯ ಹಾಗೂ ಸಂಗೀತ ಸಮಾರೋಪ

ಧರ್ಮಸ್ಥಳ: ಶ್ರೀ .ಧ .ಮ .ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಸಕ್ತ ವರ್ಷದ ಭರತನಾಟ್ಯ ಹಾಗೂ ಸಂಗೀತ ತರಗತಿಗಳ ಸಮಾರೋಪ ಸಮಾರಂಭ ನೆರವೇರಿತು.

ಮುಖ್ಯ ಅತಿಥಿ ಸಂಗೀತ ಶಿಕ್ಷಕಿ ಕು. ಸುಪ್ರೀತಾ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಅವರು ಮಕ್ಕಳಿಗೆ ಯಾವತ್ತೂ ಶಿಸ್ತು ಎಲ್ಲಾ ಕ್ಷೇತ್ರಗಳಲ್ಲೂ ಬಹಳ ಮುಖ್ಯ ವಾಗಿದೆ. ವಿದ್ಯೆಯ ಜೊತೆಗೆ ಸಹಪಠ್ಯ ಚಟುವಟಿಕೆ ಯಲ್ಲಿ ಹೆಚ್ಚು ಭಾಗವಹಿಸಿ ತೃಪ್ತಿ ಯನ್ನು ಪಡೆದುಕೊಳ್ಳಬೇಕು ಎಂದು ಹಿತವಚನವನ್ನು ನೀಡಿದರು.

ಶಾಲಾ ನೃತ್ಯ ತರಬೇತಿ ಗುರುಗಳಾದ ವಿದೂಷಿ ವಿದ್ಯಾ ಠೋಸರ್ ಮಕ್ಕಳಿಗೆ ಶುಭಾಶಯ ಕೋರಿದರು. ಅಭಿನವ ಭಾರತ ಗುರುಕುಲ ಎಸ್ ವ್ಯಾಸಾ ಯುನಿವರ್ಸಿಟಿ ಜುಲೈನಲ್ಲಿ ಆಯೋಜಿಸಿದ್ದ ಭರತನಾಟ್ಯ ಆರಂಭ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿನಿಯರಾದ ಮಾನ್ವಿ, ಯುಕ್ತಿ, ತನ್ವಿ, ಸಂಚಯಾ,ಅಧ್ವಿಕಾ ಇವರಿಗೆ ಕಾರ್ಯಕ್ರಮದಲ್ಲಿ ಅಂಕ ಪಟ್ಟಿ ವಿತರಣೆ ಮಾಡಿ ಅಭಿನಂದನೆ ಸಲ್ಲಿಸಲಾಯಿತು.

ಸಂಗೀತ ತರಬೇತಿ ನೀಡಿದ ಗುರು ಸುಗುಣ ವಿ. ಕೆ. ಆಚಾರ್ಯ ರವರು ಮಕ್ಕಳಿಗೆ ಶುಭಾಶಯ ಕೋರಿ ಪೋಷಕರ ಪಾತ್ರವನ್ನು ವಿವರಿಸಿದರು. ಮುಖ್ಯಶಿಕ್ಷಕಿ ಪರಿಮಳ ಎಂ ವಿ ರವರು ಮಾರ್ಗದರ್ಶನ ನೀಡಿದರು.

ವೇದಿಕೆಯಲ್ಲಿ ನೃತ್ಯ ಹಾಗೂ ಸಂಗೀತ ಉಸ್ತುವಾರಿ ಶಿಕ್ಷಕಿ ಅಮೃತ ವಿ ಶೆಟ್ಟಿ ವಿಧ್ಯಾರ್ಥಿಗಳಿಗೆ ಅಭಿನಯದ ಮಹತ್ವವಿವರಿಸಿದರು. ಕು. ಅಧ್ವಿಕಾ ಹಾಗೂ ಕು. ಅದಿತಿ ಕಾರ್ಯಕ್ರಮ ನಿರೂಪಿಸಿ, ಕು. ಸಾಕ್ಷಿ ಸ್ವಾಗತಿಸಿ ,ಕು. ರಿಷಿಕಾ ವಂದಿಸಿದರು. ಕು. ಪೂರ್ಣಶ್ರೀ ಅತಿಥಿಗಳ ಪರಿಚಯ ಮಾಡಿದರು.

Related posts

ಕೊಲ್ಲಿ ದೇವಸ್ಥಾನದಲ್ಲಿ ರಕ್ತೇಶ್ವರಿ ದೈವದ ಕಟ್ಟೆಯ ಶಿಲಾನ್ಯಾಸ: ಕೊಲ್ಲಿ ದುರ್ಗಾಪರಮೇಶ್ವರಿಯ ಸೊಬಗಿಗೆ ಪಶ್ಚಿಮ ಘಟ್ಟವೇ ಪ್ರಭಾವಳಿ:ಸಂಪತ್ ಬಿ. ಸುವರ್ಣ

Suddi Udaya

ಖ್ಯಾತ ಕಾದಂಬರಿಕಾರ ಮತ್ತು ಲೇಖಕ ಎಸ್.ಎಲ್. ಭೈರಪ್ಪ ನಿಧನ: ಡಾ. ಹೆಗ್ಗಡೆಯವರಿಂದ ಸಂತಾಪ

Suddi Udaya

ಗರ್ಡಾಡಿ ರೊನಾಲ್ಡ್ ಪ್ರಕಾಶ್ ಫೆರ್ನಾಂಡಿಸ್ ನಿಧನ

Suddi Udaya

ಕಳೆಂಜ: ಅತಂತ್ರರಾದ ರಾಮಣ್ಣ ನಿಂತಿಕಲ್ಲು ಇವರಿಗೆ ತಾತ್ಕಾಲಿಕ ಮನೆ ನಿರ್ಮಾಣ

Suddi Udaya

ಜ 29 :ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬೃಹತ್ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ: ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ

Suddi Udaya

ಕುಕ್ಕೇಡಿ ಗ್ರಾಮದ ಪಾಳ್ಯ ದರ್ಖಾಸು ನಿವಾಸಿ ವಿಶ್ವನಾಥ ವಿಷ ಸೇವಿಸಿ ಅತ್ಮಹತ್ಯೆ

Suddi Udaya
error: Content is protected !!