25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅವಶ್ಯವಿರುವ ರಸ್ತೆ ಮತ್ತು ಸೇತುವೆ ರಚನೆ ಕಾಮಗಾರಿ ಅನುದಾನಕ್ಕೆ ಲೋಕೋಪಯೋಗಿ ಸಚಿವರಿಗೆ ಮನವಿ

ಬೆಳ್ತಂಗಡಿ. ತಾಲೂಕಿನ ನಾರಾವಿ-ಪಾಣಾಲು-ಮಾವಿನಕಟ್ಟೆ ಜಿಲ್ಲಾ ಮುಖ್ಯ ರಸ್ತೆ ಕಿ.ಮೀ 0.80 ರಿಂದ 9.10ರವರೆಗೆ ಅಭಿವೃದ್ಧಿ, ಬದ್ಯಾರು ಸವಣಾಲು ಜಿಲ್ಲಾ ಮುಖ್ಯ ರಸ್ತೆ ಕಿ.ಮೀ 3.00 ರಿಂದ 6.80ರವರೆಗೆ ಅಭಿವೃದ್ಧಿ. ದಿಡುಪೆ-ಸಂಸೆ ರಸ್ತೆ ಕಿ.ಮೀ 0.00 ರಿಂದ 9. 00 ರವರೆಗೆ ರಸ್ತೆ ಕಾಂಕ್ರಿಟೀಕರಣ ಅಭಿವೃದ್ಧಿ. ಚಾರ್ಮಾಡಿ ಗ್ರಾಮದ ಕುಂಡೊಟ್ಟು ಎಂಬಲ್ಲಿ ಕಾಲುಸಂಕ ರಚನೆ ತೋಟತ್ತಾಡಿ ಗ್ರಾಮದ ದಡ್ಡು ಎಂಬಲ್ಲಿ ಸೇತುವೆ ರಚನೆ ಕಾಮಗಾರಿ, ಬೆಳ್ತಂಗಡಿ ನಗರದಲ್ಲಿ ಲೋ.ಇ ಸಿಬ್ಬಂದಿಗಳ ವಸತಿಗೃಹ ನಿರ್ಮಾಣಕ್ಕೆ. ಅನುದಾನ ಒದಗಿಸುವಂತೆ ಮತ್ತು ತಾಲೂಕಿನ ಶಿಶಿಲ ಗ್ರಾಮದ ಶಿಶಿಲೇಶ್ವರ ದೇವಸ್ಥಾನದ ಬಳಿ ಕಪಿಲ ನದಿಗೆ ಸೇತುವೆ ನಿರ್ಮಾಣ ಕಾಮಗಾರಿಗೆ ಸನ್ಮಾನ್ಯ ಮುಖ್ಯಮಂತ್ರಿಯವರ ಟಿಪ್ಪಣಿ ಮೇರೆಗೆ 275.00ಲಕ್ಷಗಳ ಅನುದಾನ(ಲೆ.ಶೀ.5054-03-101-0-02-132 ಪ್ರಮೂಖ ಜಿಲ್ಲಾ ಮುಖ್ಯ ರಸ್ತೆ ಸುಧಾರಣೆ) ಬಿಡುಗಡೆಗೆ ಆದೇಶವಾಗಿದ್ದು . ಆದರೆ ಸದ್ರಿ ಸೇತುವೆ ನಿರ್ಮಾಣ ಕಾಮಗಾರಿಗೆ ಲೋಕೋಪಯೋಗಿ ಇಲಾಖೆಯ ಅಂದಾಜು ಮೊತ್ತದಂತೆ ಈ ಕಾಮಗಾರಿಗೆ 499.36 ಲಕ್ಷಗಳ ಅನುದಾನ ಬೇಕಾಗಿದ್ದು. ಹಾಗಾಗಿ ಈ ಕಾಮಗಾರಿಗೆ ಹೆಚ್ಚುವರಿ ಅನುದಾನ ಬಿಡುಗಡೆಗೆ ಮತ್ತು ಅತಿ ಅವಶ್ಯವಿರುವ ಉಪ್ಪಿನಂಗಡಿ – ಗುರುವಾಯನಕೆರೆ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವಂತೆ ಲೋಕೋಪಯೋಗಿ ಸಚಿವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿಯನ್ನು ನೀಡಿದರು. ಮನವಿಗೆ ಸಚಿವರು ಪೂರಕವಾಗಿ ಸ್ಪಂದಿಸಿದರು.

Related posts

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಬಕ್ರೀದ್ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪದಗ್ರಹಣ ಸಮಾರಂಭ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕೃಷಿ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಸೆ. 14 – 21: ಧರ್ಮಸ್ಥಳದಲ್ಲಿ 27ನೇ ವರ್ಷದ ಭಜನಾ ಕಮ್ಮಟ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ: ಸ್ಟಾರ್ ಲೈನ್ ಆಂ. ಮಾ. ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಜ್ ಶರೀಫ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡಕ್ಕೆ ದ್ವಿತೀಯ ಸಮಗ್ರ ಪ್ರಶಸ್ತಿ

Suddi Udaya
error: Content is protected !!