
ಹತ್ಯಡ್ಕ ಗ್ರಾಮದ ಅರಸಿನಮಕ್ಕಿಯ ಪ್ರಖ್ಯಾತ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದ ಸಭಾಭವನ ಕಾಮಗಾರಿಗೆ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ ರೂ. 5 ಲಕ್ಷವನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸದಸ್ಯರಾದ ಕ್ಯಾ. ಬ್ರಿಜೇಶ್ ಚೌಟರವರು ಮಂಜೂರು ಮಾಡಿದ್ದಾರೆ.
ಸಭಾಭವನ ನಿರ್ಮಾಣಕ್ಕೆ ಪೂರಕವಾಗಿ ಅನುದಾನ ಮಂಜೂರು ಮಾಡುವಂತೆ ಕೋರಿ ಈ ಹಿಂದೆ ದೇಗುಲದ ಪದಾಧಿಕಾರಿಗಳು ಮತ್ತು ಗ್ರಾಮದ ಸ್ಥಳೀಯ ಮುಖಂಡರು ಸಂಸದರನ್ನು ಭೇಟಿ ಮಾಡಿ ಮನವಿ ಮಾಡಿದ್ದರು. ಈ ಅನುದಾನ ಮಂಜೂರಾತಿಗೆ ವಿಶೇಷವಾಗಿ ಸಹಕಾರ ನೀಡಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬಿಜೆಪಿ ಬೆಳ್ತಂಗಡಿ ತಾಲೂಕು ಮಂಡಲಾಧ್ಯಕ್ಷ ಶ್ರೀನಿವಾಸ ರಾವ್ ಹಾಗೂ ಹತ್ಯಡ್ಕ ಗ್ರಾಮದ ಪ್ರಮುಖರಿಗೆ ವನದುರ್ಗಾ ಸೇವಾ ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್ ಪಿಲಿಕ್ಕಬೆಯವರು ಕೃತಜ್ಞತೆಯನ್ನು ತಿಳಿಸಿದ್ದಾರೆ.






