26.9 C
ಪುತ್ತೂರು, ಬೆಳ್ತಂಗಡಿ
April 23, 2026
ಶುಭಾರಂಭಸಂಘ-ಸಂಸ್ಥೆಗಳು

ಧರ್ಮಸ್ಥಳದಲ್ಲಿ ಸೀರೆಗಳ ವಿಶೇಷ ಮಳಿಗೆ “ಸುನೀಲ್ ಸಿಲ್ಕ್ ಸಾರೀಸ್” ಶುಭಾರಂಭ-ಭಾರತೀಯ ಪರಂಪರೆಯಲ್ಲಿ ಸೀರೆಗೆ ವಿಶೇಷ ಸ್ಥಾನಮಾನವಿದೆ: ಶ್ರದ್ದಾ ಅಮಿತ್-ವಿನೂತನ ಶೈಲಿಯ, ಹತ್ತಾರು ಬಗೆಯ, ಉತ್ತಮ ಕಲೆಕ್ಷನ್ ನೊಂದಿಗೆ ಸೀರೆಗಳು ಲಭ್ಯ

ಧರ್ಮಸ್ಥಳ: ಇಲ್ಲಿನ ಕಲ್ಲೇರಿ ಉನ್ನತಿ ವಾಣಿಜ್ಯ ಸಂಕೀರ್ಣದಲ್ಲಿ ನೂತನವಾಗಿ ಪ್ರಾರಂಭಗೊಳ್ಳಲಿರುವ ಸುನೀಲ್ ಸಿಲ್ಕ್ ಸಾರೀಸ್ ಇದರ ಶುಭಾರಂಭವು ಎ.5ರಂದು ನಡೆಯಿತು.

ನೂತನ ಸಂಸ್ಥೆಯ ದೀಪ ಪ್ರಜ್ವಲನೆಯನ್ನು ಬೆಂಗಳೂರು ಕ್ಷೇಮವನದ ಸಿಇಓ ಶ್ರದ್ದಾ ಅಮಿತ್ ನೇರವೇರಿಸಿ ಭಾರತೀಯ ಪರಂಪರೆಯಲ್ಲಿ ಸೀರೆಗೆ ವಿಶೇಷ ಸ್ಥಾನಮಾನವಿದೆ. ಈ ಸಂಸ್ಥೆಯು ಅತ್ಯಂತ ಯಶಸ್ವಿಯಾಗಿ ನಡೆಯಲಿ ಎಂದು ಶುಭಕೋರಿದರು.

ಸೋನಿಯಾವರ್ಮ ನಿನಾದ ಉಜಿರೆ ರಿಬ್ಬನ್ ಕಟ್ ಮಾಡುವ ಮೂಲಕ ಉದ್ಘಾಟಿಸಿ ನೂತನ ಸಂಸ್ಥೆಗೆ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಂ ಹಾಸ್ಟೆಲ್ ಮತ್ತು ಐಟಿ ವಿಭಾಗದ ಸಿಇಓ ಪೂರನ್ ವರ್ಮ, ಡಾ.ಡಿ ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ ಶೆಟ್ಟಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಕೃಷ್ಣಸಿಂಗ್, ಧರ್ಮಸ್ಥಳ ಪಂಚಾಯತ್ ಪಿಡಿಓ ಗಾಯತ್ರಿ, ಧರ್ಮಸ್ಥಳ ಸಿಎ ಬ್ಯಾಂಕ್ ಅಧ್ಯಕ್ಷ ಪ್ರೀತಮ್ ಡಿ, ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಉಪಸ್ಥಿತರಿದ್ದರು.

ಸಂಪತ್ ರೈ ಸ್ವಾಗತಿಸಿದರು. ಕಿರಣ್ ದೊಂಡೊಲೆ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಮಾಲಕರಾದ ಸುನಿಲ್ ಬೇಕಲ್ ಮತ್ತು ಪವಿತ್ರರವರು ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ ಸತ್ಕರಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮುಂಡಾಜೆ ಮಂಜುಶ್ರೀ ಭಜನಾ ಮಂಡಳಿಗೆ ಆರ್ಥಿಕ ನೆರವು

Suddi Udaya

ಜೆಸಿಐ ಉಜಿರೆ ಸಿಟಿ ವತಿಯಿಂದ ಮಹಿಳಾ ದಿನಾಚರಣೆ -ಸಾಧಕ ಮಹಿಳೆಯರಿಗೆ ಸನ್ಮಾನ

Suddi Udaya

ಮಂಗಳೂರುನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗಾಗಿ ವಕೀಲರ ಸಂಘದಿಂದ ಸಮಾಲೋಚನಾ ಸಭೆ: ಮಂಗಳೂರಿನಲ್ಲಿ ನಮಗೆ ಬೇಕು ಹೈಕೋರ್ಟ್ ಪೀಠ: ಧನಂಜಯ್ ರಾವ್

Suddi Udaya

ಉಜಿರೆ: ಶ್ರೀ ದೇಶಿಕೇಂದ್ರ ಎಜುಕೇಶನ್ ಟ್ರಸ್ಟ್ ಇದರ ನೂತನ ಒಳ ಕ್ರೀಡಾಂಗಣ ಪ್ರಾರಂಭೋತ್ಸವ ಮಕ್ಕಳ ಭವಿಷ್ಯಕ್ಕೆ ಆಧುನಿಕ ಶಿಕ್ಷಣ ಅಗತ್ಯ: ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ಗಣೇಶ್ ಗೌಡ ನೆಲ್ಲಿಪಲ್ಕೆ ಬೆಂಬಲ

Suddi Udaya

ನಲಿಕೆಯವರ ಸಮಾಜ ಸೇವಾ ಸಂಘ ರಿ. ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಗೋಪಾಲ ಕಾಶಿಪಟ್ಣ, ಕಾರ್ಯದರ್ಶಿಯಾಗಿ ಪ್ರಶಾಂತ್ ಕಲ್ಲಾಪು

Suddi Udaya
error: Content is protected !!