23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿ

ಬಳ್ಳಮಂಜ ಬ್ರಹ್ಮಕಲಶೋತ್ಸವ-ಶ್ರೀ ಅನಂತ ಮತ್ತು ಶ್ರೀ ಈಶ್ವರ ದೇವರ ಬ್ರಹ್ಮಕಲಶಾಭೀಷೇಕ-ಬ್ರಹ್ಮರಥೋತ್ಸವ

ಬಳ್ಳಮಂಜ: ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮ ಕಲಶಾಭಿಷೇಕ ಹಾಗೂ ಮಹಾರಥೋತ್ಸವ ಏ.5 ರಂದು ನಡೆಯಿತು.

ಪೂರ್ವಾಹ್ನ ಗಂಟೆ 6 ರಿಂದ ಬ್ರಹ್ಮಕಲಶಾಭಿಷೇಕ ಪ್ರಾರಂಭ, 09-30ರಿಂದ 10ರ ವೃಷಭ ಲಗ್ನ ಸುಮುಹೂರ್ತದಲ್ಲಿ ಶ್ರೀ ಅನಂತ ಮತ್ತು ಶ್ರೀ ಈಶ್ವರ ದೇವರ ಸನ್ನಿಧಾನಗಳಲ್ಲಿ ಬ್ರಹ್ಮಕಲಶಾಭಿಷೇಕ, ನ್ಯಾಸಪೂಜೆ, ಮಹಾಪೂಜೆ, ರಥಕಲಶ, ಬಲಿಹೊರಟು, ಪಿಲಿಚಾಮುಂಡಿ ದೈವದ ಭೇಟಿಪೂರ್ವಕ ನೂತನ ಬ್ರಹ್ಮರಥದಲ್ಲಿ ಶ್ರೀದೇವರ ಪ್ರಥಮ ಬ್ರಹ್ಮರಥೋತ್ಸವ, ಪಲ್ಲಪೂಜೆ, ಮಹಾ ಅನ್ನಸಂತರ್ಪಣೆ.

ಸಾಯಂಕಾಲ 6 ರಿಂದ ಕಾರ್ತಿಕ ಪೂಜೆ, ಶ್ರೀ ಭೂತಬಲಿ ಉತ್ಸವ, ದರ್ಶನಬಲಿ, ರಾಜಾಂಗಣದ ಪ್ರಸಾದ, ಪಿಲಿಚಾಮುಂಡಿ ದೈವಕ್ಕೆ ಬೂಳ್ಯ ಹಾಗೂ ಸಂಜೆ 6ರಿಂದ 7ರ ತನಕ ಪುಂಜಾಜಾಲಕಟ್ಟೆ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಸದಸ್ಯರಿಂದ ಭಜನಾ ಕಾರ್ಯಕ್ರಮ ಜರಗಿತು. ಕ್ಷೇತ್ರದ ತಂತ್ರಗಳಾದ ಬ್ರಹ್ಮಶ್ರೀ ದೇರೆಬೈಲು ಡಾ| ಶಿವಪ್ರಸಾದ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.

ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರ್ಷ ಸಂಪಿಗೆತ್ತಾಯ, ಬ್ರಹ್ಮ ಕಲಶ ಸಮಿತಿ ಅಧ್ಯಕ್ಷ ವಸಂತ ಮರಕಡ, ಉಪಾಧ್ಯಕ್ಷರಾದ ಪ್ರಮೋದ್ ಕುಮಾರ್, ಜಯಪ್ರಕಾಶ್ ಸಂಪಿಗೆತ್ತಾಯ, ವಸಂತಿ ಲಕ್ಷ್ಮಣ್,
ಸುಧೀರ್ ಕುಮಾರ್ ಶೆಟ್ಟಿ ಕೊರೊಟ್ಟು, ಅರ್ಚಕ ಲಕ್ಷ್ಮೀಶ ಶಗ್ರಿತ್ತಾಯ, ಡಾ. ಪಿ. ಅನಂತಕೃಷ್ಣ ಭಟ್ ಮಂಗಳೂರು, ಚಂದ್ರಕಾoತ್ ನಿಡ್ಡಾಜೆ, ಹೊನ್ನಪ್ಪ ಕುಲಾಲ್ ಮಾಣೂರು, ನಾರಾಯಣ ಪೂಜಾರಿ ಬಳ್ಳಮಂಜ, ಅವಿನಾಶ್ ಕುಲಾಲ್ ಮಾಣೂರು, ಗೋಪಾಲ ಪೂಜಾರಿ ಕೊಲಾಜೆ, ಪ್ರಶಾಂತ್ ಶೆಟ್ಟಿ ಮೂಡಯೂರು, ತುಳಸಿದಾಸ್ ಪೈ.,ಹೊರಕಾಣಿಕೆ ಸಂಚಾಲಕ ಕಮಲಾಕ್ಷ, ಛಾಯಾಚಿತ್ರ ಮತ್ತು ಮಾಧ್ಯಮ ಸಮಿತಿ ಹರ್ಷ ಸ್ಟುಡಿಯೊದ ಹರ್ಷ ಕುಲಾಲ್ ಹಾಗೂ ವಿವಿಧ ಸಮಿತಿ ಪದಾಧಿಕಾರಿಗಳು ಮುತ್ತಿತರರು ಉಪಸ್ಥಿತರಿದ್ದರು.

Related posts

ಬಂಡಾಜೆ ಕಾಡಿನಲ್ಲಿ ಗುಡ್ಡಜರಿತ

Suddi Udaya

ಪತ್ರಕರ್ತ ಭುವನೇಶ್ ಗೇರುಕಟ್ಟೆಯವರಿಂದ ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಕೇಶದಾನ

Suddi Udaya

ಬೆಳ್ತಂಗಡಿ ಮಾರಿಗುಡಿಯಲ್ಲಿ ಶಾಸಕ ಹರೀಶ್ ಪೂಂಜ ಪ್ರಮಾಣ: ನಾನು ಯಾರಿಂದಲೂ ಹಣವನ್ನು ಪಡೆದಿಲ್ಲ, ಭ್ರಷ್ಟಾಚಾರ ನಡೆಸಿಲ್ಲ: ದೀಪ ಬೆಳಗಿಸಿ, ಮಾರಿಗುಡಿ ಎದುರು ತೆಂಗಿನ ಕಾಯಿ ಒಡೆದು ಪ್ರಮಾಣ

Suddi Udaya

ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿ ಸಾವು

Suddi Udaya

ಕರಂಬಾರು: ಕಾಜಿಮುಗೇರು ಗೇರು ತೋಟಕ್ಕೆ ಬೆಂಕಿ

Suddi Udaya

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!