September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ತೋಟಕ್ಕೆ ಅಕ್ರಮವಾಗಿ ಪ್ರವೇಶಿಸಿ ಅಡಿಕೆ ಗಿಡಗಳನ್ನು ನಾಶಪಡಿಸಲು ಯತ್ನ ಮಹಿಳೆಯನ್ನು ನಿಂದಿಸಿ 50 ಸಾವಿರ ವಸೂಲಿ ಮಾಡಿದ ವಕೀಲೆ

ಬೆಳ್ತಂಗಡಿ : ತೋಟಕ್ಕೆ ಅಕ್ರಮವಾಗಿ ಪ್ರವೇಶಿಸಿ ಅಡಿಕೆ ಗಿಡಗಳನ್ನು ನಾಶಪಡಿಸಲು ಯತ್ನಿಸಿದನ್ನು ಪ್ರಶ್ನಿಸಿದ್ದಕ್ಕೆಮಾನ ಭಂಗಕ್ಕೆ ಯತ್ನಿಸಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಎಂಬಲ್ಲಿ ಕೇಳಿ ಬಂದಿದೆ.

ಪ್ರಕರಣ: ದೂರುದಾರೆ ಮಹಿಳೆಗೆ ಗರ್ಡಾಡಿ ಗ್ರಾಮದಲ್ಲಿ ಗಂಡನ ಹೆಸರಿನಲ್ಲಿ ಜಾಗವಿದ್ದು ಅದಕ್ಕೆ ದಿನಾಂಕ 28-3-2025 ರಂದು ಆ ಜಾಗಕ್ಕೆ ಚೇತನಾ, ಅವರ ಸಹೋದರ ಮತ್ತು ಸಹೋದರ, ತಂದೆ ಹಾಗೂ ತಾರನಾಥ ಎಂಬವರು ಅಕ್ರಮವಾಗಿ ಪ್ರವೇಶಿಸಿದ್ದು ಅಡಿಕೆ ಕೃಷಿಯನ್ನು ನಾಶಪಡಿಸಿಲು ಯತ್ನಿಸಿದ್ದಾರೆ. ಈ ವೇಳೆ ಸುಮಾ ಅವರು ಆಕ್ಷೇಪಿಸಿದ್ದು, ಈ ಸಮಯ ಚೇತಾನಾಳ ಸಹೋದರ ಮತ್ತು ತಂದೆ ಮಾನ ಭಂಗ ಮಾಡಲು ಪ್ರಯತ್ನಿಸಿದ್ದು ಬಳಿಕೆ ಕೈಯಿಂದ ಹಲ್ಲೆ ನಡೆಸಿದ್ದಾರೆ.

ಅಲ್ಲದೇ ನೀನು ದೂರು ಕೊಟ್ಟರೆ ನಿನ್ನ ಹಾಗೂ ನಿನ್ನ ಮಗನನ್ನು ಜೀವ ಸಹಿತ ಬಿಡಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾರೆ. ಹಾಗಾಗಿ ಭಯಭೀತರಾಗಿ ಮಹಿಳೆ ಅವರು ಯಾವುದೇ ದೂರು ನೀಡಿಲ್ಲ. ಆದರೆ ದಿನಾಂಕ: 01.04.2026 ರಂದು ಅವರ ವಿರುದ್ಧ ನೀಡಿರುವ ದೂರಿನ ವಿಚಾರಣೆಗೆ ಠಾಣೆಗೆ ಬಂದಾಗ ದೂರುದಾರರ ಪರ ವಕೀಲರಾದ ಟಿಸ್ಮಿ ಅವರು ನೊಂದ ಮಹಿಳೆಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಲ್ಲದೇ ದೂರುದಾರರಿಗೆ 50 ಸಾವಿರ ಮಹಿಳೆ ನೀಡುವಂತೆ ತಾಕೀತು ಮಾಡಿದ್ದಾರಂತೆ.

ಜೊತೆಯಲ್ಲಿದ್ದ ಶಿವಾನಂದರವರು ಹಣದ ವಿಚಾರವನ್ನು ವಕೀಲೆಯ ಕಚೇರಿಯಲ್ಲಿ ನೋಡಿಕೊಳ್ಳಿ ಎಂದು ಹೇಳಿದರಿಂದ ಮಹಿಳೆ ಅವರು ಪೂರ್ಣಾನಂದ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಕರಿಮಣಿ ಸರವನ್ನು ಅಡವಿಟ್ಟು ಟಿಸ್ಮಿ ವಕೀಲೆಗೆ 50 ಸಾವಿರ ನೀಡಿದ್ದಾರೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಏ.1 ರಂದು ದೂರು ನೀಡಿದ್ದು ಅದರಂತೆ BNS-2023 (u/s-76,329(3),115(2),351,r/w3(5)) ಅಡಿಯಲ್ಲಿ ಐದು ಜನ ಆರೋಪಿಗಳಾದ ಚೇತನಾ, ಚೇತನಾ ಸಹೋದರ, ತಾರಾನಾಥ್ ಶೆಟ್ಟಿ, ಚೇತನಾ ತಂದೆ, ವಕೀಲೆ ಟಿಸ್ಮಿ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಯುತ್ತಿದೆ.

Related posts

ಚಾತುರ್ಮಾಸ್ಯ ವ್ರತದಲ್ಲಿರುವ ಕ‌ನ್ಯಾಡಿ ಶ್ರೀರಾಮ‌ ಕ್ಷೇತ್ರ ಮಹಾ ಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಉತ್ತರಕನ್ನಡ ಹಲಿಯಾಳ ಕ್ಷೇತ್ರದ ಶಾಸಕ, ಕರ್ನಾಟಕ ಸರಕಾರದ ಆಡಳಿತ ಸುಧಾರಣ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಕು. ಮಾನ್ಯ 620 ಅಂಕದೊಂದಿಗೆ ರಾಜ್ಯಮಟ್ಟದಲ್ಲಿ 6ನೇ ರ‍್ಯಾಂಕ್

Suddi Udaya

ಕರಿಮಣೇಲು: ರಾಮಣ್ಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ವಾಣಿ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್ ಕೌಸರ್ ಮೌಲ್ಯಮಾಪನದಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ 7ನೇ ಸ್ಥಾನ

Suddi Udaya

ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಬೆಳ್ತಂಗಡಿ ಘಟಕ ತೃತೀಯ ಸ್ಥಾನ

Suddi Udaya

ಬಂಗಾಡಿ ಪರಿಸರದಲ್ಲಿ ವಿದ್ಯುತ್ ಸಮಸ್ಯೆ: ಬಗೆಹರಿಸದೆ ಇದ್ದಲ್ಲಿ ಕಛೇರಿಯ ಮುಂದೆ ಪ್ರತಿಭಟನೆ ಗ್ರಾಮಸ್ಥರ ಆಗ್ರಹ

Suddi Udaya
error: Content is protected !!