September 6, 2026
ಶುಭಾರಂಭಸಂಘ-ಸಂಸ್ಥೆಗಳು

ಧರ್ಮಸ್ಥಳದಲ್ಲಿ ಸೀರೆಗಳ ವಿಶೇಷ ಮಳಿಗೆ “ಸುನೀಲ್ ಸಿಲ್ಕ್ ಸಾರೀಸ್” ಶುಭಾರಂಭ-ಭಾರತೀಯ ಪರಂಪರೆಯಲ್ಲಿ ಸೀರೆಗೆ ವಿಶೇಷ ಸ್ಥಾನಮಾನವಿದೆ: ಶ್ರದ್ದಾ ಅಮಿತ್-ವಿನೂತನ ಶೈಲಿಯ, ಹತ್ತಾರು ಬಗೆಯ, ಉತ್ತಮ ಕಲೆಕ್ಷನ್ ನೊಂದಿಗೆ ಸೀರೆಗಳು ಲಭ್ಯ

ಧರ್ಮಸ್ಥಳ: ಇಲ್ಲಿನ ಕಲ್ಲೇರಿ ಉನ್ನತಿ ವಾಣಿಜ್ಯ ಸಂಕೀರ್ಣದಲ್ಲಿ ನೂತನವಾಗಿ ಪ್ರಾರಂಭಗೊಳ್ಳಲಿರುವ ಸುನೀಲ್ ಸಿಲ್ಕ್ ಸಾರೀಸ್ ಇದರ ಶುಭಾರಂಭವು ಎ.5ರಂದು ನಡೆಯಿತು.

ನೂತನ ಸಂಸ್ಥೆಯ ದೀಪ ಪ್ರಜ್ವಲನೆಯನ್ನು ಬೆಂಗಳೂರು ಕ್ಷೇಮವನದ ಸಿಇಓ ಶ್ರದ್ದಾ ಅಮಿತ್ ನೇರವೇರಿಸಿ ಭಾರತೀಯ ಪರಂಪರೆಯಲ್ಲಿ ಸೀರೆಗೆ ವಿಶೇಷ ಸ್ಥಾನಮಾನವಿದೆ. ಈ ಸಂಸ್ಥೆಯು ಅತ್ಯಂತ ಯಶಸ್ವಿಯಾಗಿ ನಡೆಯಲಿ ಎಂದು ಶುಭಕೋರಿದರು.

ಸೋನಿಯಾವರ್ಮ ನಿನಾದ ಉಜಿರೆ ರಿಬ್ಬನ್ ಕಟ್ ಮಾಡುವ ಮೂಲಕ ಉದ್ಘಾಟಿಸಿ ನೂತನ ಸಂಸ್ಥೆಗೆ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಂ ಹಾಸ್ಟೆಲ್ ಮತ್ತು ಐಟಿ ವಿಭಾಗದ ಸಿಇಓ ಪೂರನ್ ವರ್ಮ, ಡಾ.ಡಿ ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ ಶೆಟ್ಟಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಕೃಷ್ಣಸಿಂಗ್, ಧರ್ಮಸ್ಥಳ ಪಂಚಾಯತ್ ಪಿಡಿಓ ಗಾಯತ್ರಿ, ಧರ್ಮಸ್ಥಳ ಸಿಎ ಬ್ಯಾಂಕ್ ಅಧ್ಯಕ್ಷ ಪ್ರೀತಮ್ ಡಿ, ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಉಪಸ್ಥಿತರಿದ್ದರು.

ಸಂಪತ್ ರೈ ಸ್ವಾಗತಿಸಿದರು. ಕಿರಣ್ ದೊಂಡೊಲೆ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಮಾಲಕರಾದ ಸುನಿಲ್ ಬೇಕಲ್ ಮತ್ತು ಪವಿತ್ರರವರು ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ ಸತ್ಕರಿಸಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

Suddi Udaya

ಲಾಯಿಲ: ಕೌಶಲ್ಯಾಭಿವೃದ್ಧಿ ಯೋಜನೆಯಡಿ ಸಾರಿಗೊಂಡೆ ತರಬೇತಿ ಸಮಾರೋಪ ಕಾರ್ಯಕ್ರಮ

Suddi Udaya

ಯಕ್ಷಭಾರತಿ ನಾಟ್ಯ ತರಬೇತಿ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಯಕ್ಷಭಾರತಿಯಿಂದ ಭಾರತ ಮಾತಾ ಪೂಜನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ‘ಶಾಂತಿಶ್ರೀ’ ಜೈನ ಮಹಿಳಾ ಸಮಾಜದಿಂದ ಮಹಿಳಾ ದಿನಾಚರಣೆ

Suddi Udaya
error: Content is protected !!