26.9 C
ಪುತ್ತೂರು, ಬೆಳ್ತಂಗಡಿ
April 24, 2026
ಶುಭಾರಂಭಸಂಘ-ಸಂಸ್ಥೆಗಳು

ಧರ್ಮಸ್ಥಳದಲ್ಲಿ ಸೀರೆಗಳ ವಿಶೇಷ ಮಳಿಗೆ “ಸುನೀಲ್ ಸಿಲ್ಕ್ ಸಾರೀಸ್” ಶುಭಾರಂಭ-ಭಾರತೀಯ ಪರಂಪರೆಯಲ್ಲಿ ಸೀರೆಗೆ ವಿಶೇಷ ಸ್ಥಾನಮಾನವಿದೆ: ಶ್ರದ್ದಾ ಅಮಿತ್-ವಿನೂತನ ಶೈಲಿಯ, ಹತ್ತಾರು ಬಗೆಯ, ಉತ್ತಮ ಕಲೆಕ್ಷನ್ ನೊಂದಿಗೆ ಸೀರೆಗಳು ಲಭ್ಯ

ಧರ್ಮಸ್ಥಳ: ಇಲ್ಲಿನ ಕಲ್ಲೇರಿ ಉನ್ನತಿ ವಾಣಿಜ್ಯ ಸಂಕೀರ್ಣದಲ್ಲಿ ನೂತನವಾಗಿ ಪ್ರಾರಂಭಗೊಳ್ಳಲಿರುವ ಸುನೀಲ್ ಸಿಲ್ಕ್ ಸಾರೀಸ್ ಇದರ ಶುಭಾರಂಭವು ಎ.5ರಂದು ನಡೆಯಿತು.

ನೂತನ ಸಂಸ್ಥೆಯ ದೀಪ ಪ್ರಜ್ವಲನೆಯನ್ನು ಬೆಂಗಳೂರು ಕ್ಷೇಮವನದ ಸಿಇಓ ಶ್ರದ್ದಾ ಅಮಿತ್ ನೇರವೇರಿಸಿ ಭಾರತೀಯ ಪರಂಪರೆಯಲ್ಲಿ ಸೀರೆಗೆ ವಿಶೇಷ ಸ್ಥಾನಮಾನವಿದೆ. ಈ ಸಂಸ್ಥೆಯು ಅತ್ಯಂತ ಯಶಸ್ವಿಯಾಗಿ ನಡೆಯಲಿ ಎಂದು ಶುಭಕೋರಿದರು.

ಸೋನಿಯಾವರ್ಮ ನಿನಾದ ಉಜಿರೆ ರಿಬ್ಬನ್ ಕಟ್ ಮಾಡುವ ಮೂಲಕ ಉದ್ಘಾಟಿಸಿ ನೂತನ ಸಂಸ್ಥೆಗೆ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಂ ಹಾಸ್ಟೆಲ್ ಮತ್ತು ಐಟಿ ವಿಭಾಗದ ಸಿಇಓ ಪೂರನ್ ವರ್ಮ, ಡಾ.ಡಿ ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ ಶೆಟ್ಟಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಕೃಷ್ಣಸಿಂಗ್, ಧರ್ಮಸ್ಥಳ ಪಂಚಾಯತ್ ಪಿಡಿಓ ಗಾಯತ್ರಿ, ಧರ್ಮಸ್ಥಳ ಸಿಎ ಬ್ಯಾಂಕ್ ಅಧ್ಯಕ್ಷ ಪ್ರೀತಮ್ ಡಿ, ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಉಪಸ್ಥಿತರಿದ್ದರು.

ಸಂಪತ್ ರೈ ಸ್ವಾಗತಿಸಿದರು. ಕಿರಣ್ ದೊಂಡೊಲೆ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಮಾಲಕರಾದ ಸುನಿಲ್ ಬೇಕಲ್ ಮತ್ತು ಪವಿತ್ರರವರು ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ ಸತ್ಕರಿಸಿದರು.

Related posts

ದ.ಕ. ಸಹಕಾರಿ ಹಾಲು ಒಕ್ಕೂಟದಿಂದ ನಂದಿನಿ ಪ್ರಿಮಿಯಮ್ ಪ್ರೊಬಯಾಟಿಕ್ ಮೊಸರು ಬಿಡುಗಡೆ

Suddi Udaya

ಬೆಳ್ತಂಗಡಿ ಯುವಮೋರ್ಚಾ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

Suddi Udaya

ಕಕ್ಕಿಂಜೆಯಲ್ಲಿ ಎಸ್‌ಡಿಪಿಐ ಚಾರ್ಮಾಡಿ ಗ್ರಾಮ ಸಮಿತಿಯ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆ.ಡಿ.ಪಿ ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ : ಹಳೆಕೋಟೆಯಲ್ಲಿ ಗೋಲ್ಡನ್ ಬ್ಯೂಟಿ ಪಾರ್ಲರ್ & ಮೇಕಪ್ ಅಕಾಡೆಮಿ (ಫ್ಯಾನ್ಸಿ ಮತ್ತು ಟೈಲರಿಂಗ್) ಶುಭಾರಂಭ

Suddi Udaya

ಬೆಳ್ತಂಗಡಿ ಸುವರ್ಣ ಆರ್ಕೆಡ್ ಕಟ್ಟಡದಲ್ಲಿ “ಹೊಟೇಲ್ ಸಮಡೈನ್” ಉದ್ಘಾಟನೆ

Suddi Udaya
error: Content is protected !!