22.6 C
ಪುತ್ತೂರು, ಬೆಳ್ತಂಗಡಿ
July 23, 2026
ಶುಭಾರಂಭಸಂಘ-ಸಂಸ್ಥೆಗಳು

ಧರ್ಮಸ್ಥಳದಲ್ಲಿ ಸೀರೆಗಳ ವಿಶೇಷ ಮಳಿಗೆ “ಸುನೀಲ್ ಸಿಲ್ಕ್ ಸಾರೀಸ್” ಶುಭಾರಂಭ-ಭಾರತೀಯ ಪರಂಪರೆಯಲ್ಲಿ ಸೀರೆಗೆ ವಿಶೇಷ ಸ್ಥಾನಮಾನವಿದೆ: ಶ್ರದ್ದಾ ಅಮಿತ್-ವಿನೂತನ ಶೈಲಿಯ, ಹತ್ತಾರು ಬಗೆಯ, ಉತ್ತಮ ಕಲೆಕ್ಷನ್ ನೊಂದಿಗೆ ಸೀರೆಗಳು ಲಭ್ಯ

ಧರ್ಮಸ್ಥಳ: ಇಲ್ಲಿನ ಕಲ್ಲೇರಿ ಉನ್ನತಿ ವಾಣಿಜ್ಯ ಸಂಕೀರ್ಣದಲ್ಲಿ ನೂತನವಾಗಿ ಪ್ರಾರಂಭಗೊಳ್ಳಲಿರುವ ಸುನೀಲ್ ಸಿಲ್ಕ್ ಸಾರೀಸ್ ಇದರ ಶುಭಾರಂಭವು ಎ.5ರಂದು ನಡೆಯಿತು.

ನೂತನ ಸಂಸ್ಥೆಯ ದೀಪ ಪ್ರಜ್ವಲನೆಯನ್ನು ಬೆಂಗಳೂರು ಕ್ಷೇಮವನದ ಸಿಇಓ ಶ್ರದ್ದಾ ಅಮಿತ್ ನೇರವೇರಿಸಿ ಭಾರತೀಯ ಪರಂಪರೆಯಲ್ಲಿ ಸೀರೆಗೆ ವಿಶೇಷ ಸ್ಥಾನಮಾನವಿದೆ. ಈ ಸಂಸ್ಥೆಯು ಅತ್ಯಂತ ಯಶಸ್ವಿಯಾಗಿ ನಡೆಯಲಿ ಎಂದು ಶುಭಕೋರಿದರು.

ಸೋನಿಯಾವರ್ಮ ನಿನಾದ ಉಜಿರೆ ರಿಬ್ಬನ್ ಕಟ್ ಮಾಡುವ ಮೂಲಕ ಉದ್ಘಾಟಿಸಿ ನೂತನ ಸಂಸ್ಥೆಗೆ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಂ ಹಾಸ್ಟೆಲ್ ಮತ್ತು ಐಟಿ ವಿಭಾಗದ ಸಿಇಓ ಪೂರನ್ ವರ್ಮ, ಡಾ.ಡಿ ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ ಶೆಟ್ಟಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಕೃಷ್ಣಸಿಂಗ್, ಧರ್ಮಸ್ಥಳ ಪಂಚಾಯತ್ ಪಿಡಿಓ ಗಾಯತ್ರಿ, ಧರ್ಮಸ್ಥಳ ಸಿಎ ಬ್ಯಾಂಕ್ ಅಧ್ಯಕ್ಷ ಪ್ರೀತಮ್ ಡಿ, ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಉಪಸ್ಥಿತರಿದ್ದರು.

ಸಂಪತ್ ರೈ ಸ್ವಾಗತಿಸಿದರು. ಕಿರಣ್ ದೊಂಡೊಲೆ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಮಾಲಕರಾದ ಸುನಿಲ್ ಬೇಕಲ್ ಮತ್ತು ಪವಿತ್ರರವರು ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ ಸತ್ಕರಿಸಿದರು.

Related posts

ಗೇರುಕಟ್ಟೆ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಕಿಟ್ ವಿತರಣೆ

Suddi Udaya

ವೇಣೂರು ಯುವ ಸೇವಾ ಸಂಗಮ ಟ್ರಸ್ಟ್ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಗೆ ರೂ.1 ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯ ನೂತನ “ಕೆ.ವಿ.ಪಿ.” ಕಾಂಪ್ಲೆಕ್ಸ್ ಶುಭಾರಂಭ

Suddi Udaya

ಶಿಶಿಲ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಸೋಣಂದೂರು ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಸೋಣಂದೂರು ಶಾಲೆಗೆ ಲ್ಯಾಪ್‌ಟಾಪ್ ಕೊಡುಗೆ

Suddi Udaya

ಮಡಂತ್ಯಾರು: ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!