September 6, 2026
ಬೆಳ್ತಂಗಡಿಸಾಧಕರು

ಬೆಳಾಲು: ಎ.ಸಿ.ಪಿ. ನಾಯಕ ಸುಬೇದಾ‌ರ್ ಮೋಹನ್‌ ಗೌಡ ರವರಿಗೆ ಹುಟ್ಟೂರ ಅಭಿನಂದನೆ-ಉಜಿರೆಯಿಂದ ಸ್ವಾಗತ ಮೆರವಣಿಗೆ

ಬೆಳಾಲು : ಭಾರತ ದೇಶದ ರಕ್ಷಣಾ ವಿಭಾಗದ ಭೂ ಸೇನೆಯಲ್ಲಿ 24 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಬೆಳಾಲು ಗ್ರಾಮದ ಕಾಡಂಡ ನಿವಾಸಿ ವೀರ ಯೋಧ ಎ. ಸಿ. ಪಿ. ನಾಯಕ ಸುಬೇದಾ‌ರ್ ಮೋಹನ ಗೌಡ ಇವರಿಗೆ ಬೆಳಾಲು ಗ್ರಾಮದ ವಿವಿಧ ಸಂಘ ಸಂಸ್ಥೆಗಳ, ಊರವರ ಸಹಕಾರದಲ್ಲಿ ಅಭಿನಂದನಾ ಸಮಿತಿ ವತಿಯಿಂದ ಎ.5ರಂದು ಹುಟ್ಟೂರ ಅಭಿನಂದನಾ ಸಮಾರಂಭ ಬೆಳಾಲು ಶ್ರೀ ಧ. ಮಂ. ಪ್ರೌಢ ಶಾಲೆಯಲ್ಲಿ ನಡೆಯಿತು.

ಬೆಳಿಗ್ಗೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವಠಾರದಿಂದ ಸ್ವಾಗತ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಯಿತು.

ಸ್ವಾಗತ ಮೆರವಣಿಗೆಯನ್ನು ಉದ್ಘಾಟನೆಯನ್ನು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೋಕ್ತಸರ ಶರತ್ ಕೃಷ್ಣ ಪಡುವೆಟ್ನಾಯ ನೆರವೇರಿಸಿದರು. ನಂತರ ಬೆಳಾಲಿನಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದ ದೀಪ ಪ್ರಜ್ವಲನೆಯನ್ನು ಅರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ನಡೆಸಿಕೊಟ್ಟರು. ಅಧ್ಯಕ್ಷತೆಯನ್ನು ಅಭಿನಂದನಾ ಸಮಿತಿಯ ಅಧ್ಯಕ್ಷ ಎಚ್‌. ಪದ್ಮ ಗೌಡ ವಹಿಸಿದ್ದರು.

ಉಜಿರೆ ಜನಾರ್ದನ ದೇವಸ್ಥಾನದ ಆಡಳಿತ ಮೋಕ್ತಸರ ಶರತ್‌ ಕೃಷ್ಣ ಪಡುವೆಟ್ನಾಯ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್‌ ಸದಸ್ಯ ಕೆ. ಪ್ರತಾಪಸಿಂಹ ನಾಯಕ್‌, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ನಿವೃತ್ತ ಯೋಧ ಡಾ.ಗೋಪಾಲಕೃಷ್ಣ ಕಾಂಚೋಡು, ಅಖಿಲ ಕರ್ನಾಟಕ ಮಾಜಿ ಸೈನಿಕ ಸಂಘ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ಎನ್. ಪಿ. ತಂಗಚ್ಚನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಅಭಿನಂದನಾ ಸಮಿತಿಯ ಸಂಚಾಲಕ ದಾಮೋದರ ಗೌಡ ಸುರುಳಿ, ಕೋಶಾಧಿಕಾರಿ ಸುರೇಂದ್ರ ಗೌಡ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಯೋಧರ ತಂದೆ ಮೋನಪ್ಪ ಗೌಡ, ತಾಯಿ ಬೂದಮ್ಮ, ಪತ್ನಿ ಜಯಶ್ರೀ, ಮಾಜಿ ಸೈನಿಕರು, ಸೈನಿಕರು, ಬೆಳಾಲಿನ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಊರವರು, ಅಭಿಮಾನಿಗಳು, ಮೋಹನ ಗೌಡರ ಕುಟುಂಬ ವರ್ಗದವರು ಹಾಜರಿದ್ದರು.ಅಭಿನಂದನಾ ಕಾರ್ಯದರ್ಶಿ ಧರ್ಮೇಂದ್ರ ಕುಮಾರ್ ಸ್ವಾಗತಿಸಿದರು. ಚಿತ್ತಾರ, ಶ್ರೇಯ, ಸ್ವಾತಿ ಪ್ರಾರ್ಥನೆ ಗೈದರು. ಶಿಕ್ಷಕರಾದ ಮಹೇಶ್‌ ಪುಳಿತ್ತಡಿ ಮತ್ತು ಉಪನ್ಯಾಸಕ ಬೆಳಿಯಪ್ಪ ಗೌಡ ಕಾರ್ಯಕ್ರಮ ನಿರೂಪಿಸಿದರು. ಸಮಿತಿ ಸದಸ್ಯ ಸುಲೈಮಾನ್ ಭೀಮಂಡೆ ವಂದಿಸಿದರು. ಉಮೇಶ್ ಮಂಜೊತ್ತು ಸನ್ಮಾನ ಪತ್ರ ವಾಚಿಸಿದರು. ವಿವಿಧ ಸಂಘ ಸಂಸ್ಥೆ, ಗಣ್ಯರು ಗೌರವಿಸಿ ಅಭಿನಂದನೆ ಸಲ್ಲಿಸಿದರು.

Related posts

ಕಡಿರುದ್ಯಾವರದಲ್ಲಿ ಒಂಟಿಸಲಗ ದಾಳಿ : ಅಪಾರ ಕೃ‍ಷಿ ಹಾನಿ

Suddi Udaya

ಅಳದಂಗಡಿ: ಪ್ರಸಿದ್ದ ನಾದಸ್ವರ ವಾದಕ ಗಣೇಶ್ ಪೂಜಾರಿ ಕಾಡಂಗೆ ಅನಾರೋಗ್ಯದಿಂದ ನಿಧನ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಜೂ.4: ವಿದ್ಯುತ್ ನಿಲುಗಡೆ

Suddi Udaya
error: Content is protected !!