25.5 C
ಪುತ್ತೂರು, ಬೆಳ್ತಂಗಡಿ
April 24, 2026
ಬೆಳ್ತಂಗಡಿಸಾಧಕರು

ಬೆಳಾಲು: ಎ.ಸಿ.ಪಿ. ನಾಯಕ ಸುಬೇದಾ‌ರ್ ಮೋಹನ್‌ ಗೌಡ ರವರಿಗೆ ಹುಟ್ಟೂರ ಅಭಿನಂದನೆ-ಉಜಿರೆಯಿಂದ ಸ್ವಾಗತ ಮೆರವಣಿಗೆ

ಬೆಳಾಲು : ಭಾರತ ದೇಶದ ರಕ್ಷಣಾ ವಿಭಾಗದ ಭೂ ಸೇನೆಯಲ್ಲಿ 24 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಬೆಳಾಲು ಗ್ರಾಮದ ಕಾಡಂಡ ನಿವಾಸಿ ವೀರ ಯೋಧ ಎ. ಸಿ. ಪಿ. ನಾಯಕ ಸುಬೇದಾ‌ರ್ ಮೋಹನ ಗೌಡ ಇವರಿಗೆ ಬೆಳಾಲು ಗ್ರಾಮದ ವಿವಿಧ ಸಂಘ ಸಂಸ್ಥೆಗಳ, ಊರವರ ಸಹಕಾರದಲ್ಲಿ ಅಭಿನಂದನಾ ಸಮಿತಿ ವತಿಯಿಂದ ಎ.5ರಂದು ಹುಟ್ಟೂರ ಅಭಿನಂದನಾ ಸಮಾರಂಭ ಬೆಳಾಲು ಶ್ರೀ ಧ. ಮಂ. ಪ್ರೌಢ ಶಾಲೆಯಲ್ಲಿ ನಡೆಯಿತು.

ಬೆಳಿಗ್ಗೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವಠಾರದಿಂದ ಸ್ವಾಗತ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಯಿತು.

ಸ್ವಾಗತ ಮೆರವಣಿಗೆಯನ್ನು ಉದ್ಘಾಟನೆಯನ್ನು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೋಕ್ತಸರ ಶರತ್ ಕೃಷ್ಣ ಪಡುವೆಟ್ನಾಯ ನೆರವೇರಿಸಿದರು. ನಂತರ ಬೆಳಾಲಿನಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದ ದೀಪ ಪ್ರಜ್ವಲನೆಯನ್ನು ಅರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ನಡೆಸಿಕೊಟ್ಟರು. ಅಧ್ಯಕ್ಷತೆಯನ್ನು ಅಭಿನಂದನಾ ಸಮಿತಿಯ ಅಧ್ಯಕ್ಷ ಎಚ್‌. ಪದ್ಮ ಗೌಡ ವಹಿಸಿದ್ದರು.

ಉಜಿರೆ ಜನಾರ್ದನ ದೇವಸ್ಥಾನದ ಆಡಳಿತ ಮೋಕ್ತಸರ ಶರತ್‌ ಕೃಷ್ಣ ಪಡುವೆಟ್ನಾಯ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್‌ ಸದಸ್ಯ ಕೆ. ಪ್ರತಾಪಸಿಂಹ ನಾಯಕ್‌, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ನಿವೃತ್ತ ಯೋಧ ಡಾ.ಗೋಪಾಲಕೃಷ್ಣ ಕಾಂಚೋಡು, ಅಖಿಲ ಕರ್ನಾಟಕ ಮಾಜಿ ಸೈನಿಕ ಸಂಘ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ಎನ್. ಪಿ. ತಂಗಚ್ಚನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಅಭಿನಂದನಾ ಸಮಿತಿಯ ಸಂಚಾಲಕ ದಾಮೋದರ ಗೌಡ ಸುರುಳಿ, ಕೋಶಾಧಿಕಾರಿ ಸುರೇಂದ್ರ ಗೌಡ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಯೋಧರ ತಂದೆ ಮೋನಪ್ಪ ಗೌಡ, ತಾಯಿ ಬೂದಮ್ಮ, ಪತ್ನಿ ಜಯಶ್ರೀ, ಮಾಜಿ ಸೈನಿಕರು, ಸೈನಿಕರು, ಬೆಳಾಲಿನ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಊರವರು, ಅಭಿಮಾನಿಗಳು, ಮೋಹನ ಗೌಡರ ಕುಟುಂಬ ವರ್ಗದವರು ಹಾಜರಿದ್ದರು.ಅಭಿನಂದನಾ ಕಾರ್ಯದರ್ಶಿ ಧರ್ಮೇಂದ್ರ ಕುಮಾರ್ ಸ್ವಾಗತಿಸಿದರು. ಚಿತ್ತಾರ, ಶ್ರೇಯ, ಸ್ವಾತಿ ಪ್ರಾರ್ಥನೆ ಗೈದರು. ಶಿಕ್ಷಕರಾದ ಮಹೇಶ್‌ ಪುಳಿತ್ತಡಿ ಮತ್ತು ಉಪನ್ಯಾಸಕ ಬೆಳಿಯಪ್ಪ ಗೌಡ ಕಾರ್ಯಕ್ರಮ ನಿರೂಪಿಸಿದರು. ಸಮಿತಿ ಸದಸ್ಯ ಸುಲೈಮಾನ್ ಭೀಮಂಡೆ ವಂದಿಸಿದರು. ಉಮೇಶ್ ಮಂಜೊತ್ತು ಸನ್ಮಾನ ಪತ್ರ ವಾಚಿಸಿದರು. ವಿವಿಧ ಸಂಘ ಸಂಸ್ಥೆ, ಗಣ್ಯರು ಗೌರವಿಸಿ ಅಭಿನಂದನೆ ಸಲ್ಲಿಸಿದರು.

Related posts

ಮಚ್ಚಿನ ಸ.ಉ.ಹಿ.ಪ್ರಾ. ಶಾಲಾ ಎಸ್. ಡಿ ಎಮ್ ಸಿ ನೂತನ ಸಮಿತಿ ರಚನೆ

Suddi Udaya

ಮುಂಡಾಜೆ: ಮಾದಕ ವಸ್ತುಗಳ ವಿರೋಧಿ ದಿನಾಚರಣೆ

Suddi Udaya

ಮತ ಚಲಾಯಿಸಿದ ಧರ್ಮಸ್ಥಳ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನ್

Suddi Udaya

ಎನ್ ಡಿ ಎ ಫಲಿತಾಂಶ : ಗುರುವಾಯನಕೆರೆ ಎಕ್ಸೆಲ್ ವಿದ್ಯಾರ್ಥಿಗಳ ಮಹೋನ್ನತ ದಾಖಲೆ

Suddi Udaya

ಬೆಳ್ತಂಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ರವರ “ಅಮ್ಮ ಹೇಳಿದ ಕತೆಗಳು” ಪುಸ್ತಕ ಬಿಡುಗಡೆ

Suddi Udaya
error: Content is protected !!