24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಈಸ್ಟರ್ ಹಬ್ಬ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಈಸ್ಟರ್ ಹಬ್ಬವು ವಿಜೃಂಭಣೆಯಿಂದ ಆಚರಿಸಲಾಯಿತು.

ಏ.5ರಂದು ಯೇಸು ಕ್ರಿಸ್ತನ ಪುನರುದ್ಧನಾದ ಹಬ್ಬವಾದ ಈಸ್ಟರ್ ಹಬ್ಬವು ಬೆಳ್ತಂಗಡಿ ಧರ್ಮಪ್ರಾಂತ್ಯದ ಎಲ್ಲ ದೇವಾಲಯಗಳಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಧರ್ಮಪ್ರಾಂತ್ಯದ ಕಥಿಡ್ರಲ್ ದೇವಾಲಯದಲ್ಲಿ ಜೇಮ್ಸ್ ಪತ್ತೇರಿಲ್ ರವರ ಕಾರ್ಮಿಕತ್ವದಲ್ಲಿ ಪೂಜಾ ವಿಧಾನಗಳನ್ನು ನಡೆಸಲಾಯಿತು. ಹಬ್ಬದ ಸಂದೇಶದಲ್ಲಿ
ಜೀವನ ಸಂಸ್ಕೃತಿ ಕಡೆ ಸಮಾಜ ತಿರುಗುವಂತೆ ಸಮಾಜದಲ್ಲಿ ಬದಲಾವಣೆಗೆ ಕರೆ ನೀಡುವ ಆಳವಾದ ಸಂದೇಶವನ್ನು ನೀಡಿದರು.
ಪುಣ್ಯ ಸ್ಮರಣಾರ್ಹರಾದ ಪೋಪ್ ಜಾನ್ ಪಾಲ್ ದ್ವಿತೀಯರಿಂದ ಪ್ರಸಿದ್ಧವಾದ ‘ಮರಣ ಸಂಸ್ಕೃತಿ’ಯ ಬೆಳವಣಿಗೆಯ ಬಗ್ಗೆ ಗಮನ ಹರಿಸಿದರು. ವೈಯಕ್ತಿಕ ಆನಂದ, ಉಪಯೋಗ ಮತ್ತು ತೀವ್ರ ವೈಯಕ್ತಿಕತೆಯನ್ನು ಮನುಷ್ಯನ ಗೌರವದ ಮೇಲೆ ಆದ್ಯತೆ ನೀಡುವ ಆಧುನಿಕ ಸಮಾಜ ‘ಮರಣ ಸಂಸ್ಕೃತಿ’ ಕಡೆ ತಳ್ಳುತ್ತಿದೆ ಎಂದು ಎಚ್ಚರಿಸಿದರು.

“ದೇವರು ಮತ್ತು ಸತ್ಯದ ಭಾವನೆ ಕಳೆದುಕೊಂಡಾಗ, ಮನುಷ್ಯ ಜೀವನದ ಮೌಲ್ಯ ವ್ಯಾಪಾರಕ್ಕೆ ಒಳಗಾಗುತ್ತದೆ” ಎಂದು ಬಿಷಪ್ ಈ ಸಾಮಾಜಿಕ ಸಂಕಷ್ಟಗಳ ಆಧ್ಯಾತ್ಮಿಕ ಮೂಲಗಳನ್ನು ಗುರುತಿಸಲು ಭಕ್ತರನ್ನು ಕರೆ ನೀಡಿದರು.

ಮರಣ ಸಂಸ್ಕೃತಿಯಿಂದ ದೂರವಾಗಿ, ಪ್ರೀತಿ, ಹಂಚಿಕೆ ಮತ್ತು ಸಹಾನುಭೂತಿಯಿಂದ ವ್ಯಾಪ್ತವಾದ ಸಮುದಾಯವನ್ನು ನಿರ್ಮಿಸೋಣ” ಎಂದರು.
ಧರ್ಮಪ್ರಾಂತ್ಯದ ವಿಕಾರ್ ಜನರಾಲ್ ವಂದನೀಯ ಫಾ ಮಾಣಿ, ವಂದನೀಯ ಫಾ ಕುರಿಯಾಕೋಸ್, ವಂದನೀಯ ಫಾ. ಥಾಮಸ್ ಮೊದಲಾದ ಧರ್ಮಗುರುಗಳು ಹೆಚ್ಚಿನ ಸಂಖ್ಯೆಯಲ್ಲಿ ಧರ್ಮಭಗಿನಿಯರು ವಿಶ್ವಾಸಿಗಳು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು.

Related posts

ಮುಖ್ಯಮಂತ್ರಿ ಅಭ್ಯರ್ಥಿ ಚರ್ಚೆ, ಇದೀಗ ಮತ್ತೆ ಶುರುವಾಗಿದೆ. ಹೈಕಮಾಂಡ್‌ನ ಖಡಕ್‌

Suddi Udaya

ನಾರಾವಿಯ 2 ಬಡ ಕುಟುಂಬಗಳಿಗೆ ಪರಸ್ಪರ ಸೇವಾ ಟ್ರಸ್ಟ್ ವತಿಯಿಂದ ಧನ ಸಹಾಯ

Suddi Udaya

ತೋಟತ್ತಾಡಿ ಪೆರ್ನಾಳೆ ಕೆರೆ ತುಂಬಿದ್ದು ಕೆರೆಯ ಗೇಟು ತೆರೆಯಲು ಆಗದೆ ತಂದೊಡ್ಡಿದೆ ಸಮಸ್ಯೆ ಮುಳುಗು ತಜ್ಞ ಈಶ್ವರ ಮಲ್ಪೆ ಅವರ ತಂಡ ಸ್ಥಳಕ್ಕೆ: ಗೇಟ್ ತೆರೆಯಲು ಯಶಸ್ವಿ

Suddi Udaya

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಡಿ.12: ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶತಚಂಡಿಕಾ ಯಾಗ, ಸಹಸ್ರನಾರಿಕೇಳ ಅಭಿಷೇಕ ಮತ್ತು ಶತರುದ್ರಾಭಿಷೇಕ

Suddi Udaya

ವೇಣೂರು: ಬಜಿರೆಯಲ್ಲಿ ಮನೆಯ ಬಾವಿ ತಡೆಗೋಡೆ ಕುಸಿತ

Suddi Udaya
error: Content is protected !!