23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿ ನೇತೃತ್ವದಲ್ಲಿ ‘ವಂದೇ ಪ್ರಕೃತಿ ಮಾತರಂ’ ಕಾರ್ಯಕ್ರಮ

ಬೆಳ್ತಂಗಡಿ: ಬಾಂಜಾರು ಮಲೆ ಪ್ರಕೃತಿಯ ಮಡಿಲಿನಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಯುಗಾದಿಯ ನಿಮಿತ್ತ ಎ5ರಂದು ‘ವಂದೇ ಪ್ರಕೃತಿ ಮಾತರಂ’ ಎಂಬ ವಿಷಯವಾಗಿ ಮೊದಲ ಕಾರ್ಯಕ್ರಮ ನಡೆಯಿತು.

ಅಭಾಸಾಪ ಬೆಳ್ತಂಗಡಿ ಅಧ್ಯಕ್ಷ ಗಣಪತಿ ಭಟ್ ಕುಳಮರ್ವ ಇವರ ಅಧ್ಯಕ್ಷತೆಯಲ್ಲಿ ಪ್ರಕೃತಿಯೊಡಗೂಡಿ ಸುತ್ತಮುತ್ತಲಿನ ಪರಿಸರ ವೀಕ್ಷಣೆಯ ಜೊತೆಗೆ ಗಣಪತಿ ದೇವಳದ ಕೆಲಸದ ಬಗ್ಗೆ ಮಾತುಕತೆಯ ಮೂಲಕ ಮಾಹಿತಿ ಸಂಗ್ರಹಿಸಲಾಯಿತು. ಕಠಿಣವಾದ ದಾರಿಯ ಜೊತೆಗೂಡಿದ ಪಯಣದಲ್ಲಿ ಸುಂದರ ಮನಸುಗಳ ಭೇಟಿ ಮಾಡಿದ ಸಂಭ್ರಮವನ್ನು ಹಂಚಿಕೊಂಡೆವು.

ಸಂಪನ್ಮೂಲ ವ್ಯಕ್ತಿ ಶ್ರೀಧರ್ ಭಟ್ ಅವರು ಪ್ರಕೃತಿಯೊಡನೆ ಮಾನವನ ಸಂವಾದ, ಹಸಿರನ್ನು ಉಳಿಸುವಂತಹ ಅಗತ್ಯತೆಯ ಜೊತೆಗೆ ಅವಶ್ಯಕತೆಯ ಬಗ್ಗೆ ನೆರೆದವರೆಲ್ಲರಿಗೂ ಅರ್ಥೈಸಿಕೊಡುವ ಜೊತೆಗೆ ಸಮಿತಿಯ ಎಲ್ಲರನ್ನೂ ಪರಿಚಯಿಸಿಕೊಟ್ಟರು.

ಗಣಪತಿ ಭಟ್ ಕುಳಮರ್ವ, ಸುಭಾಷಿಣಿ, ಶ್ರೀಧರ ಭಟ್, ರಮೇಶ್ ಮಯ್ಯ, ರಾಮಕೃಷ್ಣ ಭಟ್ ಬದನಾಜೆ, ಅಶ್ವಿಜ ಶ್ರೀಧರ್, ತ್ರಿವಿಕ್ರಮ ಹೆಬ್ಬಾರ್, ಪ್ರಕಾಶ್ ನಾರಾಯಣ್, ಅಖಿಲಾ ಪ್ರಕಾಶ್ ಇವರೆಲ್ಲರ ಗುಂಪು ಭಜನಾ ಕಾರ್ಯಕ್ರಮದ ಮೂಲಕ ಕಾರ್ಯಕ್ರಮ ಆರಂಭಗೊಂಡಿತು.

ನವೀನ್ ನೆರಿಯ ಸ್ವಾಗತಿಸಿದರು. ಅಭಾಸಾಪ ಬೆಳ್ತಂಗಡಿ ತಾಲೂಕಿನ ಕಾರ್ಯದರ್ಶಿ ಸುಭಾಷಿಣಿ ಧನ್ಯವಾದವನ್ನಿತ್ತರು.

Related posts

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ತೋಟದ ಕೆರೆಗೆ ಬಿದ್ದು ಮೃತ್ಯು

Suddi Udaya

ಮುಂಡಾಜೆ: ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಸಂಭ್ರಮದ‌ ಬಕ್ರೀದ್ ಆಚರಣೆ-ಸಾಮೂಹಿಕ ಪ್ರಾರ್ಥನೆ

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಚಲನಚಿತ್ರ ನಿರ್ದೇಶಕ ವಿನು ಬಳಂಜ

Suddi Udaya

2024 ಫೆಬ್ರವರಿ ತಿಂಗಳಲ್ಲಿ ವೇಣೂರು ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

Suddi Udaya

ಬೆಳ್ತಂಗಡಿ: ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪ್ ಮಂಗಳೂರು ,ವಾಣಿ ಪ.ಪೂ. ಕಾಲೇಜು ಬೆಳ್ತಂಗಡಿ ಸಿಐಎಸ್‌ಎ2ಕೆ ಬೆಂಗಳೂರು ಸಂಸ್ಥೆಗಳ ಸಹಯೋಗದಲ್ಲಿ ತುಳು ಭಾಷೆಯ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ ಪುರ್ಸ ಕಟ್ಟುನ ಇನಿ-ಕೋಡೆ-ಎಲ್ಲೆ ಬಿಡುಗಡೆ

Suddi Udaya
error: Content is protected !!