22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಕೆಎಸ್ಆರ್‌ಟಿಸಿ ಬಸ್–ಕಾರು ಮುಖಾಮುಖಿ ಡಿಕ್ಕಿ: ಮಹಿಳೆಗೆ ಗಾಯ

ಕೊಕ್ಕಡ: ಕೊಕ್ಕಡ ಸಮೀಪದ ಕಾಪಿನಬಾಗಿಲು ಎಂಬಲ್ಲಿ ಎ.6ರಂದು ಕೆಎಸ್ಆರ್‌ಟಿಸಿ ಬಸ್ ಮತ್ತು ಕಾರಿನ ಮಧ್ಯೆ ಅಪಘಾತ ಸಂಭವಿಸಿ ಮಹಿಳೆಯೊಬ್ಬರು ಗಾಯಗೊಂಡ ಘಟನೆ ವರದಿಯಾಗಿದೆ.

ಧರ್ಮಸ್ಥಳದಿಂದ ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಹಾಗೂ ಬೆಂಗಳೂರಿನಿಂದ ಧರ್ಮಸ್ಥಳದ ಕಡೆಗೆ ಬರುತ್ತಿದ್ದ ಕಾರು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದು, ಈ ಪೈಕಿ ಕವಿತಾ ಎಂಬ ಮಹಿಳೆಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡ ಕವಿತಾ ಅವರನ್ನು ತಕ್ಷಣವೇ ಕೊಕ್ಕಡದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ನೆಲ್ಯಾಡಿ ಹೊರಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಸಾವು

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್‌ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

Suddi Udaya

ಬಂದಾರು: ಬಿಜೆಪಿ ಕಾರ್ಯಕರ್ತರಿಂದ ಬಿರುಸಿನ ಮತಪ್ರಚಾರ

Suddi Udaya

ಬಿ ಎಸ್ ಸಿ ಫ್ಯಾಷನ್ ಡಿಸೈನ್ ಪರೀಕ್ಷೆ: ಆಳ್ವಾಸ್ ವಿದ್ಯಾರ್ಥಿನಿ ರಮ್ಯಾ ಮಂಗಳೂರು ವಿ.ವಿ. ಗೆ ದ್ವಿತೀಯ ರ್‍ಯಾಂಕ್

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!